Home / ಕವನ / ಕವಿತೆ / ‘ಶಾರ್ ಕಣಿವೆ’ಯಲ್ಲಿ

‘ಶಾರ್ ಕಣಿವೆ’ಯಲ್ಲಿ

ಇಕ್ಕಟ್ಟು ‘ಶಾರ್ ಕಣಿವೆ’ ಮಾರ್ಗ
ಧೂಳು ತುಂಬಿದ ಭಯಾನಕ ಪೊದೆಗಳು
ಕಣಿವೆ ಎದೆಗೆ ತಬ್ಬಿದ್ದ
ಮುಳ್ಳು ಗೋರಂಟಿಗಳ
ಹಳದಿ ಹೂವುಗಳ ತುಂಬ
ಜೇಡರ ಬಲೆಗಳು
ಹಾರಾಡುತ್ತಿವೆ ಹುಳು ಹುಪ್ಪಡಿಗಳು
ಚಿರ್ ಚಿರ್ ಚಿಪ್ ಚಿಪ್‌ಗೂಡುತ್ತ
ಕಂದಕದಾಳಕ್ಕೆ ಬೈನಾಕ್ಯುಲರ್ ಸ್ಪರ್ಶಿಸದೆ
ಪಕ್ಷಿಗಳ ಕೀಟಗಳ
ಒಂದಕ್ಕೊಂದರ ಬೇಟೆಯಾಟ
ಕಪ್ಪು ಪತಂಗಗಳ, ರಣಹದ್ದುಗಳ
ಕಿಚ್ ಕಿಚ್ ಶಬ್ದ
ಹರಿದಾಡುವ ಪೆಟ್ರೋ ವಾಹನಗಳಲ್ಲಿ
ಹೆಪ್ಪುಗಟ್ಟಿವೆ ಪುರಾತನ
ಅರೇಬಿಯ ವ್ಯಾಪಾರಿ ಮಾರ್ಗಗಳು
ಆದರೂ ಕಾಣುತ್ತೇನೆ ಅಲ್ಲಲ್ಲಿ
ಕಾಲ್ನಡಿಗೆಯಿಂದಲೇ
ಹಾದಿಕೊಂದ ಜನರನ್ನು
ಸೊಂಟಕ್ಕೆ ಬಿಗಿದ ಖಡ್ಗಗಳನ್ನು
ತಲೆಗೆ ಸುತ್ತಿದ ‘ಘೋತ್ರಾ’ ಗಳನ್ನು
ನನ್ನದು ನಿನ್ನದು ಎಂದು
ಕಾದಾಡಿದ ಜನರನ್ನು
ಕೊಳ್ಳೆ ಹೊಡೆದ ಕೊಲೆಗಡುಕರನ್ನು
ಕೊಳ್ಳಕ್ಕೆ ಹರಿದ ನೆತ್ತರನ್ನು
ಮರುಭೂಮಿಯಲ್ಲಿ ಹೂತು ಹೋದ
ಎಲುಬುಗಳನ್ನು, ಅವುಗಳೆದೆಯ ಮೇಲೆ
ಬೆಳೆದ ಪೊದೆಗಳನ್ನು.
ಇಂದು ಒಂಟೆಗಳು
ಸ್ವತಂತ್ರತೆಯ ಖುಷಿಯಲ್ಲಿ
ಧ್ವನಿ ಕಳೆದುಕೊಂಡಿವೆ.
ಬುರ್ಕಾದ ಕಾಲು ತೊಡೆತಕ್ಕೆ ಬಿದ್ದೇಳುವ
ಕುರಿ ಕಾಯುವ ತುಂಟು ಹುಡುಗಿಯರು
ಕೆಂಡ ಸಂಪಿಗೆಯಂತೆ
ತುಂಬು ಗುಲಾಬಿಗಳಂತೆ
ಅರಳುತ್ತಿದ್ದಾರೆ, ಅಷ್ಟೇ
ಕನಸು ಕಾಣದ ಕೋಮಲೆಯರು
ಸುಡುತ್ತಲೂ ಇದ್ದಾರೆ.
ಈಗ ಎಲ್ಲವೂ ನಿಶ್ಶಬ್ದ
ಶತ ಶತಮಾನಗಳ
ಪರಿಪೂರ್ಣತೆಗೆ ಕೃತಜ್ಞತೆಗಳು ಎಂದು
ಸೂರ್ಯ ತೆಪ್ಪಗಾಗುತ್ತಿದ್ದಾನೆ.
ಹೊಸ ಶತಮಾನದ ಉಬ್ಬರಕ್ಕೆ
ಸ್ವಾಗತದ ಹೆಜ್ಜೆಗಳು
ಪುಟಿ ಪುಟಿದು ಓಡಾಡುತ್ತಿವೆ.

(ಅರೇಬಿಯದ ದಕ್ಷಿಣ ಭಾಗದಲ್ಲಿ ಆಳವಾದ ‘ಶಾರ್ ಕಣಿವೆ’ ಮಾರ್ಗಗಳಲ್ಲಿ ಪ್ರವಾಸ ಕೈಗೊಂಡಾಗ ನೋಡಿದ ದೃಶ್ಯ)
*****

ಪುಸ್ತಕ: ಗಾಂಜಾ ಡಾಲಿ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...