Home / ಕವನ / ಕವಿತೆ / ‘ಶಾರ್ ಕಣಿವೆ’ಯಲ್ಲಿ

‘ಶಾರ್ ಕಣಿವೆ’ಯಲ್ಲಿ

ಇಕ್ಕಟ್ಟು ‘ಶಾರ್ ಕಣಿವೆ’ ಮಾರ್ಗ
ಧೂಳು ತುಂಬಿದ ಭಯಾನಕ ಪೊದೆಗಳು
ಕಣಿವೆ ಎದೆಗೆ ತಬ್ಬಿದ್ದ
ಮುಳ್ಳು ಗೋರಂಟಿಗಳ
ಹಳದಿ ಹೂವುಗಳ ತುಂಬ
ಜೇಡರ ಬಲೆಗಳು
ಹಾರಾಡುತ್ತಿವೆ ಹುಳು ಹುಪ್ಪಡಿಗಳು
ಚಿರ್ ಚಿರ್ ಚಿಪ್ ಚಿಪ್‌ಗೂಡುತ್ತ
ಕಂದಕದಾಳಕ್ಕೆ ಬೈನಾಕ್ಯುಲರ್ ಸ್ಪರ್ಶಿಸದೆ
ಪಕ್ಷಿಗಳ ಕೀಟಗಳ
ಒಂದಕ್ಕೊಂದರ ಬೇಟೆಯಾಟ
ಕಪ್ಪು ಪತಂಗಗಳ, ರಣಹದ್ದುಗಳ
ಕಿಚ್ ಕಿಚ್ ಶಬ್ದ
ಹರಿದಾಡುವ ಪೆಟ್ರೋ ವಾಹನಗಳಲ್ಲಿ
ಹೆಪ್ಪುಗಟ್ಟಿವೆ ಪುರಾತನ
ಅರೇಬಿಯ ವ್ಯಾಪಾರಿ ಮಾರ್ಗಗಳು
ಆದರೂ ಕಾಣುತ್ತೇನೆ ಅಲ್ಲಲ್ಲಿ
ಕಾಲ್ನಡಿಗೆಯಿಂದಲೇ
ಹಾದಿಕೊಂದ ಜನರನ್ನು
ಸೊಂಟಕ್ಕೆ ಬಿಗಿದ ಖಡ್ಗಗಳನ್ನು
ತಲೆಗೆ ಸುತ್ತಿದ ‘ಘೋತ್ರಾ’ ಗಳನ್ನು
ನನ್ನದು ನಿನ್ನದು ಎಂದು
ಕಾದಾಡಿದ ಜನರನ್ನು
ಕೊಳ್ಳೆ ಹೊಡೆದ ಕೊಲೆಗಡುಕರನ್ನು
ಕೊಳ್ಳಕ್ಕೆ ಹರಿದ ನೆತ್ತರನ್ನು
ಮರುಭೂಮಿಯಲ್ಲಿ ಹೂತು ಹೋದ
ಎಲುಬುಗಳನ್ನು, ಅವುಗಳೆದೆಯ ಮೇಲೆ
ಬೆಳೆದ ಪೊದೆಗಳನ್ನು.
ಇಂದು ಒಂಟೆಗಳು
ಸ್ವತಂತ್ರತೆಯ ಖುಷಿಯಲ್ಲಿ
ಧ್ವನಿ ಕಳೆದುಕೊಂಡಿವೆ.
ಬುರ್ಕಾದ ಕಾಲು ತೊಡೆತಕ್ಕೆ ಬಿದ್ದೇಳುವ
ಕುರಿ ಕಾಯುವ ತುಂಟು ಹುಡುಗಿಯರು
ಕೆಂಡ ಸಂಪಿಗೆಯಂತೆ
ತುಂಬು ಗುಲಾಬಿಗಳಂತೆ
ಅರಳುತ್ತಿದ್ದಾರೆ, ಅಷ್ಟೇ
ಕನಸು ಕಾಣದ ಕೋಮಲೆಯರು
ಸುಡುತ್ತಲೂ ಇದ್ದಾರೆ.
ಈಗ ಎಲ್ಲವೂ ನಿಶ್ಶಬ್ದ
ಶತ ಶತಮಾನಗಳ
ಪರಿಪೂರ್ಣತೆಗೆ ಕೃತಜ್ಞತೆಗಳು ಎಂದು
ಸೂರ್ಯ ತೆಪ್ಪಗಾಗುತ್ತಿದ್ದಾನೆ.
ಹೊಸ ಶತಮಾನದ ಉಬ್ಬರಕ್ಕೆ
ಸ್ವಾಗತದ ಹೆಜ್ಜೆಗಳು
ಪುಟಿ ಪುಟಿದು ಓಡಾಡುತ್ತಿವೆ.

(ಅರೇಬಿಯದ ದಕ್ಷಿಣ ಭಾಗದಲ್ಲಿ ಆಳವಾದ ‘ಶಾರ್ ಕಣಿವೆ’ ಮಾರ್ಗಗಳಲ್ಲಿ ಪ್ರವಾಸ ಕೈಗೊಂಡಾಗ ನೋಡಿದ ದೃಶ್ಯ)
*****

ಪುಸ್ತಕ: ಗಾಂಜಾ ಡಾಲಿ

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...