Home / ಕಥೆ / ಕಿರು ಕಥೆ / ರಾಮರಾಜ್ಯ

ರಾಮರಾಜ್ಯ

ಶ್ರೀ, ರಾಮಚಂದ್ರ ದೇವರು ವನವಾಸವನ್ನು ಮುಗಿಸಿ ಅಯೋಧ್ಯೆಗೆ ಒಂದು ಸಿಂಹಾಸನಾರೂಢನಾಗಿ ರಾಜ್ಯವಾಳುವುದಕ್ಕೆ ಸುರುಮಾಡಿದನು.

ಅಧಿಕಾರ ಸೂತ್ರವು ತನ್ನ ಕೈಗೆ ಬಂದೊಡನೆಯೇ ಸೀತಾಪತಿಯು ತನ್ನೊಡನೆ ಅರಣ್ಯಲ್ಲಿ ದುರ್ದಿನಗಳನ್ನು ಕಳೆದ, ಲಂಕೆಯನ್ನು ಸುಟ್ಟು ತನ್ನ ಧರ್ಮಪತ್ನಿಯನ್ನು ಬಿಡಿಸಿಕೊಂಡು ಬಂದ ಕಪಿಕುಲವನ್ನು ಕರೆದು ಒಂದೊಂದು ಮಂಗನನ್ನು ಒಂದೊಂದು ಹುದ್ದೆಯ ಮೇಲೆ ನೇಮಿಸಿದನು. ಭಕ್ತಶಿಖಾಮಣಿಯಾದ ಹನುಮಂತನಂತೂ ಗಿಡದ ತುತ್ತ ತುದಿಗೆ ಕುಳಿತು ಟುರ್ ಎಂದು ಹುಕುಂ ಬಜಾಯಿಸಹತ್ತಿದನು. ಅವನಿಗೆ ‘ಸರ್ವ ಭಾಷಾ ಕೋವಿದ’ ಎಂಬ ಬಿರುದು ಸಿಕ್ಕಿತು!

ಅಯೋಧ್ಯೆಯ ಸಭ್ಯ ಪ್ರಜೆಗಳು ಯಾವದಾದರೊಂದು ಕೆಲಸಕ್ಕೆ ಅರ್ಜಿ ಮಾಡಿದರೆ ಶ್ರೀರಘುಕುಲತಿಲಕನೇ ಮುಂದೆ ಬಂದು “ನೀವು ನನ್ನೊಡನ ವನವಾಸ ಎಷ್ಟು ದಿನ ಮಾಡಿದ್ದಿರಿ? ಲಂಕೆಯ ಎಷ್ಟು ಮನೆಗಳನ್ನು ಸುಟ್ಟ ವೀರರು ನೀವು?” ಎಂದು ಪ್ರಶ್ನಿಸುತ್ತಿದ್ದನು. ಈಗಿನ ಕಾಲದಂತೆ ಜಾತಿ ವಯಸ್ಸು ಮುಂತಾದವುಗಳನ್ನು ಕೇಳುವ ಪದ್ಧತಿ ಆಗ ಚಾಲೂ ಇತ್ತಿಲ್ಲ.

ಇದನ್ನೆಲ್ಲ ಕಂಡು ಲಕ್ಷ್ಮಣನು ಒಂದು ದಿನ ಅಣ್ಣನಲ್ಲಿ ಸವಿನಯ ವಿಜ್ಞಾಪನೆ ಮಾಡಿದನು: ರಾಜ್ಯವಾಳುವುದಕ್ಕೂ ನಮ್ಮೊಡನೆ ವನವಾಸ ಲಂಕಾದಹನಗಳನ್ನು ಮಾಡಿದ್ದಕ್ಕೂ ಏನೂ ಸಂಬಂಧವಿಲ್ಲ. ಲಂಕಾದಹನಕ್ಕೆ ರಾಜ್ಯದ ಕಾರಭಾರ ನಡೆಸುವ ಜಾಣ್ಮೆ ಬೇಕಾಗಿದ್ದಿಲ್ಲ.

ಅದಕ್ಕೆ ಪತಿಪಾವನನು “ತಮ್ಮಾ ನೀನಂದದ್ದು ನಿಜ. ಆದರೆ ನಮ್ಮೊಡನೆ ಅಡವಿಯಲ್ಲಿ ಬಳಲಿ, ಲಂಕಾದಹನದಂಥ ಶೌರ ಕಾರ್ಯವೆಸಗಿದ ಈ ಕಪಿಗಳಿಗೆ ದೊಡ್ಡ ದೊಡ್ಡ ಅಧಿಕಾರ ಕೊಡುವದು ನಮ್ಮ ಕರ್ತವ್ಯವಲ್ಲವೇ?”

ಲಕ್ಷಣನು ಕೂಡಲೇ “ಅಣ್ಣಾ ನಮ್ಮೊಡನೆ ಕಾಡಿನಲ್ಲಿ ಬಳಲಿ, ಲಂಕೆಯನ್ನು ಸುಟ್ಟು ಹೈರಾಣಾದ ಈ ಭಕ್ತಶಿಖಾಮಣಿಗಳನ್ನು ದೊಡ್ಡ ದೊಡ್ಡ ಅಧಿಕಾರಗಳಲ್ಲಿಟ್ಟು ದುಡಿಸುವದು ನ್ಯಾಯವಲ್ಲ. ಹಿಂದೆ ಮಾಡಿದ ಸಾಹಸ ತ್ಯಾಗಗಳಿಗಾಗಿ ಇವರನ್ನು ಒಂದು ಉಪವನದಲ್ಲಿ ಸುಖವಾಗಿ ಇಡುವದು ನಮಗೆ ಒಪ್ಪುವ ವಿಷಯ. ದಣಿದು ಸಣ್ಣಾದ ಇವರನ್ನು ಮತ್ತೆ ದುಡಿಸಹತ್ತುವದು ತರವೇ?” ಅಂದನು.

ಜಾನಕಿ ಜೀವನನ ತಲೆಯಲ್ಲಿ ಹೊಸ ಬೆಳಕು ಬಿದ್ದಿತು. ಮರುದಿನವೇ ಅವನು ಕಪಿಗಳನ್ನೆಲ್ಲ ಕರೆದು ಅವರಿಗಾಗಿ ತಯಾರಿಸಿದ ಒಂದು ‘ಸ್ಪೆಶಲ್’ ಉಪವನದಲ್ಲಿ ಅವರಿಗೆ ‘ಪೆನ್ಯನ್’ ಅನುಗ್ರಹಿಸಿದನು.

ಅಂದಿನಿಂದ ದೊಡ್ಡ ಸಣ್ಣ ಕೆಲಸಗಳಿಗೆಲ್ಲ ಅಯೋಧ್ಯೆಯ ಪ್ರಜೆಗಳೇ ಬಂದರು; ಆ ರಾಜ್ಯವು ರಾಮರಾಜ್ಯವೆಂದು ಪ್ರಸಿದ್ಧಿ ಪಡೆಯಿತು.
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...