Home / ಕವನ / ಕವಿತೆ / ಒಂಟೆಗಳಿಗೆ ನಗುವೋ ನಗು

ಒಂಟೆಗಳಿಗೆ ನಗುವೋ ನಗು

ಉದ್ದಗಲ ಮರುಭೂಮಿ ಕೊರೆಯುವ ಬಿಸಿಲು
ದಿನಗಳೇ ರಣ ರಣ ಮಟ ಮಟ ಮಧ್ಯಾನ್ಹ
ಕೊನೆ ಇರದ ದಾರಿ ಸತ್ತು ಹೋದ ಮಣ್ಣು
ತಂಪು ಇಂಪಿಲ್ಲದ ಸಂಜೆಗೆ
ಡೇರಿ ಹೂಡುವ ಯಾತ್ರಿಕರ
ಬಿಡುಗಡೆಯಾಗುವ ಒಂಟೆಗಳ ಸಂಭ್ರಮ.
ಗುಂಪು ಗುಂಪುಗಳ ಎಷ್ಟೊಂದು ಒಂಟೆಗಳು
ಮಾತುಕತೆ ಇನ್ನೂ ಎಷ್ಣು ದೂರ
ಮೆಲುಕುತ್ತ ಮೈಲೇಜ್ ಎನಿಸುತ್ತವೇನೋ!
ಓಯಸಿಸ್ ಇಲ್ಲ
ನೀರಿಲ್ಲದ ಊಟವಿಲ್ಲದ ದಂಡಿಗೆ ಸುಸ್ತು
ಆರಿಸಿ ದಷ್ಟಪುಷ್ಟದ ಒಂಟೆ ಎಳೆದು
ಆಯಿತಲ್ಲ ಎರಡೂ
ರುಂಡ ಸಿಡಿಸಿ ಹೊಟ್ಟೆಯೊಡೆದು
ನೀರೆಳೆದು ಬೆಂಕಿಗೆ ತಳ್ಳಿ ಸುಟ್ಟು
ತಿಂದಿದ್ದೇನು ಮಜ ಅವರಿಗೆ
ಕರುಳು ಕಳೆದುಕೊಂಡಿದ್ದೇನು ದುಃಖ
ಇವುಗಳಿಗೆ.
ಶತ ಶತಮಾನದ ದಲಿತಗಳಿವು
ಇದ್ದರೂ ಶಕ್ತಿ ಎದುರಿಸಲಾರದ ಶೋಷಿತಗಳಿವು
ಧ್ವನಿ ಇಲ್ಲದ ಗುಂಪುಗಳಿವು
ಸ್ವತಂತ್ರವಿಲ್ಲದ ದೇಸಿಗಳು
ಅಬ್ಬಬ್ಬಾ ಎಷ್ಟೊಂದು ಸಹನೆ,
ಆದರೂ ಒಳಗೊಳಗೆ ಕೊರಗುವ ದುಃಖ ದುಮ್ಮಾನ
ಈಗೀಗ ಪಾತ್ರವಾಗಿವೆ
ಅಲ್ಲಾನ ನಾಡಿನ ಅಲ್ಲಾನ ಕೃಪೆಗೆ
ಮರುಹುಟ್ಟು ಪಡೆದಿವೆ.

ಈಗ ಉದ್ದಗಲದ ಮರುಭೂಮಿಗೆ
ವಿದೇಶಿ ಕಾರು ವಿಮಾನಗಳ ದಾಳಿ
ಯಾರೊಬ್ಬ ಅರಬ್ ನೋಡುತ್ತಿಲ್ಲ ಮಾತಾಡಿಸುತ್ತಿಲ್ಲ
ಒಂಟೆಗಳೊಂದಿಗೆ
ಕಟ್ಟಿ ಹಾಕುವ ಮಾಲೀಕರಿಲ್ಲ
ಹೊಟ್ಟೆಯೊಡೆದು ನೀರೆಳೆಯುವ ದರೋಡೆ ಕೋರರಿಲ್ಲ
ದಂಡೆಗೆ ಸರಿದಿವೆ ಮರುಭೂಮಿ
ಮುದಿ ಹಡಗುಗಳು
ಕಲಿಸುತಿವೆ ಮರಿಗಳಿಗೆ
ಎಲ್ಲೆಂದರಲ್ಲಿ ಮರ್ಸಿಡಿಸ್ ಬೆಂಜ್‌ನಂತೆ
ಫ್ರೀಯಾಗಿ ಓಡಾಡಲು
ಈಗೀಗ ಶಕ್ತಿ ಬಂದಿದೆ ಬೆಂಜ್
ಡಿಕ್ಕಿ ಹೊಡೆದುರುಳಿಸುವ
ಸ್ವಾತಂತ್ರ್ಯಸಿಕ್ಕಿದೆ ಅಲೆಯುವ
ವಿದೇಶಿ ತೌಡು ತಿಂದು ಮೆಲಕುಹಾಕುತ್ತ
ನಗುತ್ತವೇನೋ!
ಒಂಟೆಗಳಿಗೀಗೀಗ ರಾಯಲ್ ಟ್ರೀಟ್‍ಮೆಂಟ್
ಮಾಲೀಷ್, ವಾಕಿಂಗ್‌ಮಾಡಿಸಲು
ಬಂಗ್ಲಾ ಮಕ್ಕಳು ಬರುತ್ತಿವೆಯಂತೆ
ಒಂಟೆಗಳಿಗೆ ಒಳಗೊಳಗೊ ನಗುವೋ ನಗು.
*****

ಪುಸ್ತಕ: ಗಾಂಜಾ ಡಾಲಿ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...