Home / ಕವನ / ಕವಿತೆ / ಒಂಟೆಗಳಿಗೆ ನಗುವೋ ನಗು

ಒಂಟೆಗಳಿಗೆ ನಗುವೋ ನಗು

ಉದ್ದಗಲ ಮರುಭೂಮಿ ಕೊರೆಯುವ ಬಿಸಿಲು
ದಿನಗಳೇ ರಣ ರಣ ಮಟ ಮಟ ಮಧ್ಯಾನ್ಹ
ಕೊನೆ ಇರದ ದಾರಿ ಸತ್ತು ಹೋದ ಮಣ್ಣು
ತಂಪು ಇಂಪಿಲ್ಲದ ಸಂಜೆಗೆ
ಡೇರಿ ಹೂಡುವ ಯಾತ್ರಿಕರ
ಬಿಡುಗಡೆಯಾಗುವ ಒಂಟೆಗಳ ಸಂಭ್ರಮ.
ಗುಂಪು ಗುಂಪುಗಳ ಎಷ್ಟೊಂದು ಒಂಟೆಗಳು
ಮಾತುಕತೆ ಇನ್ನೂ ಎಷ್ಣು ದೂರ
ಮೆಲುಕುತ್ತ ಮೈಲೇಜ್ ಎನಿಸುತ್ತವೇನೋ!
ಓಯಸಿಸ್ ಇಲ್ಲ
ನೀರಿಲ್ಲದ ಊಟವಿಲ್ಲದ ದಂಡಿಗೆ ಸುಸ್ತು
ಆರಿಸಿ ದಷ್ಟಪುಷ್ಟದ ಒಂಟೆ ಎಳೆದು
ಆಯಿತಲ್ಲ ಎರಡೂ
ರುಂಡ ಸಿಡಿಸಿ ಹೊಟ್ಟೆಯೊಡೆದು
ನೀರೆಳೆದು ಬೆಂಕಿಗೆ ತಳ್ಳಿ ಸುಟ್ಟು
ತಿಂದಿದ್ದೇನು ಮಜ ಅವರಿಗೆ
ಕರುಳು ಕಳೆದುಕೊಂಡಿದ್ದೇನು ದುಃಖ
ಇವುಗಳಿಗೆ.
ಶತ ಶತಮಾನದ ದಲಿತಗಳಿವು
ಇದ್ದರೂ ಶಕ್ತಿ ಎದುರಿಸಲಾರದ ಶೋಷಿತಗಳಿವು
ಧ್ವನಿ ಇಲ್ಲದ ಗುಂಪುಗಳಿವು
ಸ್ವತಂತ್ರವಿಲ್ಲದ ದೇಸಿಗಳು
ಅಬ್ಬಬ್ಬಾ ಎಷ್ಟೊಂದು ಸಹನೆ,
ಆದರೂ ಒಳಗೊಳಗೆ ಕೊರಗುವ ದುಃಖ ದುಮ್ಮಾನ
ಈಗೀಗ ಪಾತ್ರವಾಗಿವೆ
ಅಲ್ಲಾನ ನಾಡಿನ ಅಲ್ಲಾನ ಕೃಪೆಗೆ
ಮರುಹುಟ್ಟು ಪಡೆದಿವೆ.

ಈಗ ಉದ್ದಗಲದ ಮರುಭೂಮಿಗೆ
ವಿದೇಶಿ ಕಾರು ವಿಮಾನಗಳ ದಾಳಿ
ಯಾರೊಬ್ಬ ಅರಬ್ ನೋಡುತ್ತಿಲ್ಲ ಮಾತಾಡಿಸುತ್ತಿಲ್ಲ
ಒಂಟೆಗಳೊಂದಿಗೆ
ಕಟ್ಟಿ ಹಾಕುವ ಮಾಲೀಕರಿಲ್ಲ
ಹೊಟ್ಟೆಯೊಡೆದು ನೀರೆಳೆಯುವ ದರೋಡೆ ಕೋರರಿಲ್ಲ
ದಂಡೆಗೆ ಸರಿದಿವೆ ಮರುಭೂಮಿ
ಮುದಿ ಹಡಗುಗಳು
ಕಲಿಸುತಿವೆ ಮರಿಗಳಿಗೆ
ಎಲ್ಲೆಂದರಲ್ಲಿ ಮರ್ಸಿಡಿಸ್ ಬೆಂಜ್‌ನಂತೆ
ಫ್ರೀಯಾಗಿ ಓಡಾಡಲು
ಈಗೀಗ ಶಕ್ತಿ ಬಂದಿದೆ ಬೆಂಜ್
ಡಿಕ್ಕಿ ಹೊಡೆದುರುಳಿಸುವ
ಸ್ವಾತಂತ್ರ್ಯಸಿಕ್ಕಿದೆ ಅಲೆಯುವ
ವಿದೇಶಿ ತೌಡು ತಿಂದು ಮೆಲಕುಹಾಕುತ್ತ
ನಗುತ್ತವೇನೋ!
ಒಂಟೆಗಳಿಗೀಗೀಗ ರಾಯಲ್ ಟ್ರೀಟ್‍ಮೆಂಟ್
ಮಾಲೀಷ್, ವಾಕಿಂಗ್‌ಮಾಡಿಸಲು
ಬಂಗ್ಲಾ ಮಕ್ಕಳು ಬರುತ್ತಿವೆಯಂತೆ
ಒಂಟೆಗಳಿಗೆ ಒಳಗೊಳಗೊ ನಗುವೋ ನಗು.
*****

ಪುಸ್ತಕ: ಗಾಂಜಾ ಡಾಲಿ

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...