Home / ಕವನ / ಕವಿತೆ / ಒಂಟೆಗಳಿಗೆ ನಗುವೋ ನಗು

ಒಂಟೆಗಳಿಗೆ ನಗುವೋ ನಗು

ಉದ್ದಗಲ ಮರುಭೂಮಿ ಕೊರೆಯುವ ಬಿಸಿಲು
ದಿನಗಳೇ ರಣ ರಣ ಮಟ ಮಟ ಮಧ್ಯಾನ್ಹ
ಕೊನೆ ಇರದ ದಾರಿ ಸತ್ತು ಹೋದ ಮಣ್ಣು
ತಂಪು ಇಂಪಿಲ್ಲದ ಸಂಜೆಗೆ
ಡೇರಿ ಹೂಡುವ ಯಾತ್ರಿಕರ
ಬಿಡುಗಡೆಯಾಗುವ ಒಂಟೆಗಳ ಸಂಭ್ರಮ.
ಗುಂಪು ಗುಂಪುಗಳ ಎಷ್ಟೊಂದು ಒಂಟೆಗಳು
ಮಾತುಕತೆ ಇನ್ನೂ ಎಷ್ಣು ದೂರ
ಮೆಲುಕುತ್ತ ಮೈಲೇಜ್ ಎನಿಸುತ್ತವೇನೋ!
ಓಯಸಿಸ್ ಇಲ್ಲ
ನೀರಿಲ್ಲದ ಊಟವಿಲ್ಲದ ದಂಡಿಗೆ ಸುಸ್ತು
ಆರಿಸಿ ದಷ್ಟಪುಷ್ಟದ ಒಂಟೆ ಎಳೆದು
ಆಯಿತಲ್ಲ ಎರಡೂ
ರುಂಡ ಸಿಡಿಸಿ ಹೊಟ್ಟೆಯೊಡೆದು
ನೀರೆಳೆದು ಬೆಂಕಿಗೆ ತಳ್ಳಿ ಸುಟ್ಟು
ತಿಂದಿದ್ದೇನು ಮಜ ಅವರಿಗೆ
ಕರುಳು ಕಳೆದುಕೊಂಡಿದ್ದೇನು ದುಃಖ
ಇವುಗಳಿಗೆ.
ಶತ ಶತಮಾನದ ದಲಿತಗಳಿವು
ಇದ್ದರೂ ಶಕ್ತಿ ಎದುರಿಸಲಾರದ ಶೋಷಿತಗಳಿವು
ಧ್ವನಿ ಇಲ್ಲದ ಗುಂಪುಗಳಿವು
ಸ್ವತಂತ್ರವಿಲ್ಲದ ದೇಸಿಗಳು
ಅಬ್ಬಬ್ಬಾ ಎಷ್ಟೊಂದು ಸಹನೆ,
ಆದರೂ ಒಳಗೊಳಗೆ ಕೊರಗುವ ದುಃಖ ದುಮ್ಮಾನ
ಈಗೀಗ ಪಾತ್ರವಾಗಿವೆ
ಅಲ್ಲಾನ ನಾಡಿನ ಅಲ್ಲಾನ ಕೃಪೆಗೆ
ಮರುಹುಟ್ಟು ಪಡೆದಿವೆ.

ಈಗ ಉದ್ದಗಲದ ಮರುಭೂಮಿಗೆ
ವಿದೇಶಿ ಕಾರು ವಿಮಾನಗಳ ದಾಳಿ
ಯಾರೊಬ್ಬ ಅರಬ್ ನೋಡುತ್ತಿಲ್ಲ ಮಾತಾಡಿಸುತ್ತಿಲ್ಲ
ಒಂಟೆಗಳೊಂದಿಗೆ
ಕಟ್ಟಿ ಹಾಕುವ ಮಾಲೀಕರಿಲ್ಲ
ಹೊಟ್ಟೆಯೊಡೆದು ನೀರೆಳೆಯುವ ದರೋಡೆ ಕೋರರಿಲ್ಲ
ದಂಡೆಗೆ ಸರಿದಿವೆ ಮರುಭೂಮಿ
ಮುದಿ ಹಡಗುಗಳು
ಕಲಿಸುತಿವೆ ಮರಿಗಳಿಗೆ
ಎಲ್ಲೆಂದರಲ್ಲಿ ಮರ್ಸಿಡಿಸ್ ಬೆಂಜ್‌ನಂತೆ
ಫ್ರೀಯಾಗಿ ಓಡಾಡಲು
ಈಗೀಗ ಶಕ್ತಿ ಬಂದಿದೆ ಬೆಂಜ್
ಡಿಕ್ಕಿ ಹೊಡೆದುರುಳಿಸುವ
ಸ್ವಾತಂತ್ರ್ಯಸಿಕ್ಕಿದೆ ಅಲೆಯುವ
ವಿದೇಶಿ ತೌಡು ತಿಂದು ಮೆಲಕುಹಾಕುತ್ತ
ನಗುತ್ತವೇನೋ!
ಒಂಟೆಗಳಿಗೀಗೀಗ ರಾಯಲ್ ಟ್ರೀಟ್‍ಮೆಂಟ್
ಮಾಲೀಷ್, ವಾಕಿಂಗ್‌ಮಾಡಿಸಲು
ಬಂಗ್ಲಾ ಮಕ್ಕಳು ಬರುತ್ತಿವೆಯಂತೆ
ಒಂಟೆಗಳಿಗೆ ಒಳಗೊಳಗೊ ನಗುವೋ ನಗು.
*****

ಪುಸ್ತಕ: ಗಾಂಜಾ ಡಾಲಿ

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...