ಒಂಟೆಗಳಿಗೆ ನಗುವೋ ನಗು

ಉದ್ದಗಲ ಮರುಭೂಮಿ ಕೊರೆಯುವ ಬಿಸಿಲು
ದಿನಗಳೇ ರಣ ರಣ ಮಟ ಮಟ ಮಧ್ಯಾನ್ಹ
ಕೊನೆ ಇರದ ದಾರಿ ಸತ್ತು ಹೋದ ಮಣ್ಣು
ತಂಪು ಇಂಪಿಲ್ಲದ ಸಂಜೆಗೆ
ಡೇರಿ ಹೂಡುವ ಯಾತ್ರಿಕರ
ಬಿಡುಗಡೆಯಾಗುವ ಒಂಟೆಗಳ ಸಂಭ್ರಮ.
ಗುಂಪು ಗುಂಪುಗಳ ಎಷ್ಟೊಂದು ಒಂಟೆಗಳು
ಮಾತುಕತೆ ಇನ್ನೂ ಎಷ್ಣು ದೂರ
ಮೆಲುಕುತ್ತ ಮೈಲೇಜ್ ಎನಿಸುತ್ತವೇನೋ!
ಓಯಸಿಸ್ ಇಲ್ಲ
ನೀರಿಲ್ಲದ ಊಟವಿಲ್ಲದ ದಂಡಿಗೆ ಸುಸ್ತು
ಆರಿಸಿ ದಷ್ಟಪುಷ್ಟದ ಒಂಟೆ ಎಳೆದು
ಆಯಿತಲ್ಲ ಎರಡೂ
ರುಂಡ ಸಿಡಿಸಿ ಹೊಟ್ಟೆಯೊಡೆದು
ನೀರೆಳೆದು ಬೆಂಕಿಗೆ ತಳ್ಳಿ ಸುಟ್ಟು
ತಿಂದಿದ್ದೇನು ಮಜ ಅವರಿಗೆ
ಕರುಳು ಕಳೆದುಕೊಂಡಿದ್ದೇನು ದುಃಖ
ಇವುಗಳಿಗೆ.
ಶತ ಶತಮಾನದ ದಲಿತಗಳಿವು
ಇದ್ದರೂ ಶಕ್ತಿ ಎದುರಿಸಲಾರದ ಶೋಷಿತಗಳಿವು
ಧ್ವನಿ ಇಲ್ಲದ ಗುಂಪುಗಳಿವು
ಸ್ವತಂತ್ರವಿಲ್ಲದ ದೇಸಿಗಳು
ಅಬ್ಬಬ್ಬಾ ಎಷ್ಟೊಂದು ಸಹನೆ,
ಆದರೂ ಒಳಗೊಳಗೆ ಕೊರಗುವ ದುಃಖ ದುಮ್ಮಾನ
ಈಗೀಗ ಪಾತ್ರವಾಗಿವೆ
ಅಲ್ಲಾನ ನಾಡಿನ ಅಲ್ಲಾನ ಕೃಪೆಗೆ
ಮರುಹುಟ್ಟು ಪಡೆದಿವೆ.

ಈಗ ಉದ್ದಗಲದ ಮರುಭೂಮಿಗೆ
ವಿದೇಶಿ ಕಾರು ವಿಮಾನಗಳ ದಾಳಿ
ಯಾರೊಬ್ಬ ಅರಬ್ ನೋಡುತ್ತಿಲ್ಲ ಮಾತಾಡಿಸುತ್ತಿಲ್ಲ
ಒಂಟೆಗಳೊಂದಿಗೆ
ಕಟ್ಟಿ ಹಾಕುವ ಮಾಲೀಕರಿಲ್ಲ
ಹೊಟ್ಟೆಯೊಡೆದು ನೀರೆಳೆಯುವ ದರೋಡೆ ಕೋರರಿಲ್ಲ
ದಂಡೆಗೆ ಸರಿದಿವೆ ಮರುಭೂಮಿ
ಮುದಿ ಹಡಗುಗಳು
ಕಲಿಸುತಿವೆ ಮರಿಗಳಿಗೆ
ಎಲ್ಲೆಂದರಲ್ಲಿ ಮರ್ಸಿಡಿಸ್ ಬೆಂಜ್‌ನಂತೆ
ಫ್ರೀಯಾಗಿ ಓಡಾಡಲು
ಈಗೀಗ ಶಕ್ತಿ ಬಂದಿದೆ ಬೆಂಜ್
ಡಿಕ್ಕಿ ಹೊಡೆದುರುಳಿಸುವ
ಸ್ವಾತಂತ್ರ್ಯಸಿಕ್ಕಿದೆ ಅಲೆಯುವ
ವಿದೇಶಿ ತೌಡು ತಿಂದು ಮೆಲಕುಹಾಕುತ್ತ
ನಗುತ್ತವೇನೋ!
ಒಂಟೆಗಳಿಗೀಗೀಗ ರಾಯಲ್ ಟ್ರೀಟ್‍ಮೆಂಟ್
ಮಾಲೀಷ್, ವಾಕಿಂಗ್‌ಮಾಡಿಸಲು
ಬಂಗ್ಲಾ ಮಕ್ಕಳು ಬರುತ್ತಿವೆಯಂತೆ
ಒಂಟೆಗಳಿಗೆ ಒಳಗೊಳಗೊ ನಗುವೋ ನಗು.
*****

ಪುಸ್ತಕ: ಗಾಂಜಾ ಡಾಲಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರತ್ಯಕ್ಷ ದೇವರು
Next post ಜ್ಞಾನದ ಮೊರೆ

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…