Home / ಕವನ / ಕವಿತೆ / ಒಂಟೆಗಳಿಗೆ ನಗುವೋ ನಗು

ಒಂಟೆಗಳಿಗೆ ನಗುವೋ ನಗು

ಉದ್ದಗಲ ಮರುಭೂಮಿ ಕೊರೆಯುವ ಬಿಸಿಲು
ದಿನಗಳೇ ರಣ ರಣ ಮಟ ಮಟ ಮಧ್ಯಾನ್ಹ
ಕೊನೆ ಇರದ ದಾರಿ ಸತ್ತು ಹೋದ ಮಣ್ಣು
ತಂಪು ಇಂಪಿಲ್ಲದ ಸಂಜೆಗೆ
ಡೇರಿ ಹೂಡುವ ಯಾತ್ರಿಕರ
ಬಿಡುಗಡೆಯಾಗುವ ಒಂಟೆಗಳ ಸಂಭ್ರಮ.
ಗುಂಪು ಗುಂಪುಗಳ ಎಷ್ಟೊಂದು ಒಂಟೆಗಳು
ಮಾತುಕತೆ ಇನ್ನೂ ಎಷ್ಣು ದೂರ
ಮೆಲುಕುತ್ತ ಮೈಲೇಜ್ ಎನಿಸುತ್ತವೇನೋ!
ಓಯಸಿಸ್ ಇಲ್ಲ
ನೀರಿಲ್ಲದ ಊಟವಿಲ್ಲದ ದಂಡಿಗೆ ಸುಸ್ತು
ಆರಿಸಿ ದಷ್ಟಪುಷ್ಟದ ಒಂಟೆ ಎಳೆದು
ಆಯಿತಲ್ಲ ಎರಡೂ
ರುಂಡ ಸಿಡಿಸಿ ಹೊಟ್ಟೆಯೊಡೆದು
ನೀರೆಳೆದು ಬೆಂಕಿಗೆ ತಳ್ಳಿ ಸುಟ್ಟು
ತಿಂದಿದ್ದೇನು ಮಜ ಅವರಿಗೆ
ಕರುಳು ಕಳೆದುಕೊಂಡಿದ್ದೇನು ದುಃಖ
ಇವುಗಳಿಗೆ.
ಶತ ಶತಮಾನದ ದಲಿತಗಳಿವು
ಇದ್ದರೂ ಶಕ್ತಿ ಎದುರಿಸಲಾರದ ಶೋಷಿತಗಳಿವು
ಧ್ವನಿ ಇಲ್ಲದ ಗುಂಪುಗಳಿವು
ಸ್ವತಂತ್ರವಿಲ್ಲದ ದೇಸಿಗಳು
ಅಬ್ಬಬ್ಬಾ ಎಷ್ಟೊಂದು ಸಹನೆ,
ಆದರೂ ಒಳಗೊಳಗೆ ಕೊರಗುವ ದುಃಖ ದುಮ್ಮಾನ
ಈಗೀಗ ಪಾತ್ರವಾಗಿವೆ
ಅಲ್ಲಾನ ನಾಡಿನ ಅಲ್ಲಾನ ಕೃಪೆಗೆ
ಮರುಹುಟ್ಟು ಪಡೆದಿವೆ.

ಈಗ ಉದ್ದಗಲದ ಮರುಭೂಮಿಗೆ
ವಿದೇಶಿ ಕಾರು ವಿಮಾನಗಳ ದಾಳಿ
ಯಾರೊಬ್ಬ ಅರಬ್ ನೋಡುತ್ತಿಲ್ಲ ಮಾತಾಡಿಸುತ್ತಿಲ್ಲ
ಒಂಟೆಗಳೊಂದಿಗೆ
ಕಟ್ಟಿ ಹಾಕುವ ಮಾಲೀಕರಿಲ್ಲ
ಹೊಟ್ಟೆಯೊಡೆದು ನೀರೆಳೆಯುವ ದರೋಡೆ ಕೋರರಿಲ್ಲ
ದಂಡೆಗೆ ಸರಿದಿವೆ ಮರುಭೂಮಿ
ಮುದಿ ಹಡಗುಗಳು
ಕಲಿಸುತಿವೆ ಮರಿಗಳಿಗೆ
ಎಲ್ಲೆಂದರಲ್ಲಿ ಮರ್ಸಿಡಿಸ್ ಬೆಂಜ್‌ನಂತೆ
ಫ್ರೀಯಾಗಿ ಓಡಾಡಲು
ಈಗೀಗ ಶಕ್ತಿ ಬಂದಿದೆ ಬೆಂಜ್
ಡಿಕ್ಕಿ ಹೊಡೆದುರುಳಿಸುವ
ಸ್ವಾತಂತ್ರ್ಯಸಿಕ್ಕಿದೆ ಅಲೆಯುವ
ವಿದೇಶಿ ತೌಡು ತಿಂದು ಮೆಲಕುಹಾಕುತ್ತ
ನಗುತ್ತವೇನೋ!
ಒಂಟೆಗಳಿಗೀಗೀಗ ರಾಯಲ್ ಟ್ರೀಟ್‍ಮೆಂಟ್
ಮಾಲೀಷ್, ವಾಕಿಂಗ್‌ಮಾಡಿಸಲು
ಬಂಗ್ಲಾ ಮಕ್ಕಳು ಬರುತ್ತಿವೆಯಂತೆ
ಒಂಟೆಗಳಿಗೆ ಒಳಗೊಳಗೊ ನಗುವೋ ನಗು.
*****

ಪುಸ್ತಕ: ಗಾಂಜಾ ಡಾಲಿ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...