ಸಂಲಗ್ನ

ಸಮುದ್ರದಾಳಕ್ಕೆ ಇಳಿಯುತ್ತಿದ್ದಾಗಲೆಲ್ಲ
ನನ್ನ ಆದರ್ಶದ ಮೌಲ್ಯಗಳು
ಗಹಗಹಿಸಿ ನಕ್ಕು
ತರಗೆಲೆಗಳಂತೆ ಮೇಲೆಯೇ
ತೇಲುತ್ತವೆ.
ಕೋರಲ್‌ಗಳಿಂದ ತರಚಿದ ಕಾಲು
ಮಾಂಸ ರಕ್ತದ ಹನಿಗಳ ಸುತ್ತ
ಸುತ್ತುತಲಿರುವ ಭಾವನೆಗಳ
ಸೌಧದೊಳಗೆ ಕುಸಿದು
ತಿರುಗಣಿಯ ಗುಂಡಿಯ
ಸೆಳೆತಕ್ಕೆ ಸಿಗುವಾಗ
ನನ್ನ ನಾ ವಿಮರ್ಶಿಸಿಕೊಳ್ಳುತ್ತೇನೆ
ಬದುಕಿನನ್ವೇಷಣೆಯಲ್ಲಿ
ಏನಾದರೂ ಒಂದಿಷ್ಟು ಕಂಡುಕೊಂಡಿದ್ದೇನೆಂದಾದರೆ
ಸೂರ್ಯನಾಚೆಯ
ಭ್ರಮೆಯ ಆಕಾಶ
ನೆಲದಾಳದೊಳಗಿನ
ಉಪ್ಪು ನೀರಿನ ಏರಿಳಿತಗಳ
ಸಂಲಗ್ನ
*****

ಪುಸ್ತಕ: ಗಾಂಜಾ ಡಾಲಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಾರಿ ಬಿಡಿ
Next post ಲಿಂಗಮ್ಮನ ವಚನಗಳು – ೫

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys