Home / ಕವನ / ಹಾಯ್ಕು / ಝೇಂಕಾರ ಪಲ್ಲವಿ

ಝೇಂಕಾರ ಪಲ್ಲವಿ

ಉಸಿರಿನ ಏರಿಳಿತಕೆ, ಗಾಳಿಯ-ಹೂ ನಾಟ್ಯಕೆ
ಹಕ್ಕಿಯ ಒಲವಿಗೆ, ಚುಕ್ಕಿಯ ಚೆಲುವಿಗೆ
ಸ್ಪಂದಿಸುತಿದೆ ಬುದ್ಧ!  ನಿನ್ನ ಮಂದಸ್ಮಿತ.

ಎತ್ತರ ಆಕಾಶದಿ, ಭೂಮಿಯ ಎದೆ ಆಳದಿ
ಮೂಡಿದೆ ನಿನ್ನ ಮಧುರ ಮಂದಸ್ಮಿತ ವಿಸ್ತಾರ
ಮನದಾಳದಿ ಹಾಕುತಿರುವೆ ನಾ ಸ್ವರ ಪ್ರಸ್ತಾರ.

ಭೂಮಿಯ ಬಿರುಕಲಿ, ನೋವಿನ ನಂಜಲಿ
ಕಣ್ಣಿನ ಕುರುಡಲಿ, ಮಣ್ಣಿನ ಮನದಲಿ
ಬಾ!  ಬುದ್ಧನೆ ಕಾರುಣ್ಯಕೆ ಕಾಮಧೇನುವಾಗಿ.

ಬಿದಿರಿನ ಕೊಳಲಲಿ, ಉಸಿರಿನ ಹಸಿರಲಿ
ಪದರಿನ ಒಳ ಆಳದಿ, ಗರಿಗೆದರಿದ ಎದೆಯಲಿ
ಬುದ್ಧ!  ನಿನ್ನ ಕಠಿಣ ಉಯ್ಯಾಲೆ ತೂಗುತಿದೆ.

ಮನ ಜೋಕಾಲಿ ಯಾಡುತ್ತಿದೆ
ಸಿದ್ಧ ನಿನ್ನ ಪ್ರಣವ ಲೀಲೆಯಲಿ
ಹೃದಯ ವಿಹಾರದ, ಭಿಕ್ಷು ಸುಳಿದಾಟದಲಿ.

ಬದ್ಧತ್ವದ ಒಲವಲಿ ಅದ್ದುತ ಲೇಖನಿ
ಬರೆದಿರುವೆ ಝೆನ್ ಝೇಂಕಾರವಾಗಿ
ಕಾಡು ಹೂ ಹೃದಯದ ಸತ್ಯ ಸಾಕಾರವಾಗಿ

ಬೇಡೆನೆಗೆ ರಂಗಿನ ಕಮಲದ ಶತದಳವು
ಮನಸ್ಥಿತವಾಗಿದೆ ಶುಭ್ರ ಶ್ವೇತ ಕಮಲದಲಿ
ಸಿದ್ಧ ಬುದ್ಧನ ವಿಮಲ ಮಂದಸ್ಮಿತದಲಿ.

ಮೊಗ್ಗಿನ ಮನದಲಿ, ಬುದ್ಧನ ಪ್ರತಿಮೆ
ಅರಳಿದ ಹೂವಲಿ, ಬುದ್ಧತ್ವದ ಪ್ರಜ್ಞೆ
ಫಲದಲಿರಿಸಿ ಭೋಧಿಸತ್ವದ ಸವಿ ರುಚಿ
ಒಲವಲಿರಿಸಿ ಬೌದ್ಧ ತತ್ವದ ಸವಿ ಶುಚಿ.
ಹೊಮ್ಮಿಸಿದೆ ಝೆನ್ ಝೇಂಕಾರದ ರುಚಿ.

*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...