Home / ಕವನ / ಹಾಯ್ಕು / ಝೇಂಕಾರ ಪಲ್ಲವಿ

ಝೇಂಕಾರ ಪಲ್ಲವಿ

ಉಸಿರಿನ ಏರಿಳಿತಕೆ, ಗಾಳಿಯ-ಹೂ ನಾಟ್ಯಕೆ
ಹಕ್ಕಿಯ ಒಲವಿಗೆ, ಚುಕ್ಕಿಯ ಚೆಲುವಿಗೆ
ಸ್ಪಂದಿಸುತಿದೆ ಬುದ್ಧ!  ನಿನ್ನ ಮಂದಸ್ಮಿತ.

ಎತ್ತರ ಆಕಾಶದಿ, ಭೂಮಿಯ ಎದೆ ಆಳದಿ
ಮೂಡಿದೆ ನಿನ್ನ ಮಧುರ ಮಂದಸ್ಮಿತ ವಿಸ್ತಾರ
ಮನದಾಳದಿ ಹಾಕುತಿರುವೆ ನಾ ಸ್ವರ ಪ್ರಸ್ತಾರ.

ಭೂಮಿಯ ಬಿರುಕಲಿ, ನೋವಿನ ನಂಜಲಿ
ಕಣ್ಣಿನ ಕುರುಡಲಿ, ಮಣ್ಣಿನ ಮನದಲಿ
ಬಾ!  ಬುದ್ಧನೆ ಕಾರುಣ್ಯಕೆ ಕಾಮಧೇನುವಾಗಿ.

ಬಿದಿರಿನ ಕೊಳಲಲಿ, ಉಸಿರಿನ ಹಸಿರಲಿ
ಪದರಿನ ಒಳ ಆಳದಿ, ಗರಿಗೆದರಿದ ಎದೆಯಲಿ
ಬುದ್ಧ!  ನಿನ್ನ ಕಠಿಣ ಉಯ್ಯಾಲೆ ತೂಗುತಿದೆ.

ಮನ ಜೋಕಾಲಿ ಯಾಡುತ್ತಿದೆ
ಸಿದ್ಧ ನಿನ್ನ ಪ್ರಣವ ಲೀಲೆಯಲಿ
ಹೃದಯ ವಿಹಾರದ, ಭಿಕ್ಷು ಸುಳಿದಾಟದಲಿ.

ಬದ್ಧತ್ವದ ಒಲವಲಿ ಅದ್ದುತ ಲೇಖನಿ
ಬರೆದಿರುವೆ ಝೆನ್ ಝೇಂಕಾರವಾಗಿ
ಕಾಡು ಹೂ ಹೃದಯದ ಸತ್ಯ ಸಾಕಾರವಾಗಿ

ಬೇಡೆನೆಗೆ ರಂಗಿನ ಕಮಲದ ಶತದಳವು
ಮನಸ್ಥಿತವಾಗಿದೆ ಶುಭ್ರ ಶ್ವೇತ ಕಮಲದಲಿ
ಸಿದ್ಧ ಬುದ್ಧನ ವಿಮಲ ಮಂದಸ್ಮಿತದಲಿ.

ಮೊಗ್ಗಿನ ಮನದಲಿ, ಬುದ್ಧನ ಪ್ರತಿಮೆ
ಅರಳಿದ ಹೂವಲಿ, ಬುದ್ಧತ್ವದ ಪ್ರಜ್ಞೆ
ಫಲದಲಿರಿಸಿ ಭೋಧಿಸತ್ವದ ಸವಿ ರುಚಿ
ಒಲವಲಿರಿಸಿ ಬೌದ್ಧ ತತ್ವದ ಸವಿ ಶುಚಿ.
ಹೊಮ್ಮಿಸಿದೆ ಝೆನ್ ಝೇಂಕಾರದ ರುಚಿ.

*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...