ಅಂತರಂಗದ ಅಕ್ಷರಮಾಲೆ

ಅಲ್ಲಲ್ಲಿ ಓಡುವ ನನ್ನ ಮನವೆ
ಆನಂದದ ನೆಲೆಯಲ್ಲಿ ನಿಲ್ಲು ಮನವೆ
ಇಲ್ಲಿ ಧ್ಯಾನ, ಸಾಧನೆ ತಪವು ಎಲ್ಲ.
ಈರ್ಷೆ, ಅಸೂಯೆ, ಆತಂಕವಿಲ್ಲ
ಉದಯ ರವಿಯ ಕಿರಣ ಸೊಬಗೆಲ್ಲ
ಊರ್ಧ್ವಗಾಮಿಯಾಗಿ ನುಡಿ ಸೊಲ್ಲ.
ಋಷಿ ಮುನಿಯ ಮನದ ಸತ್ಯವೇ ಬೆಲ್ಲ
ಎಲ್ಲಿದ್ದರೂ ತಿಳಿ, ತಿಳಿವನ್ನು ತಿಳಿಗೊಳದಿನಿಂದು
ಏನು ಮಾಡಿದರೇನು `ನಾನು ಎಂಬುದ ತಿಳಿ ಇಂದು.
ಐರಾವತವನ ನೇರು, ಐದು ವೇದದ ಸಾರ ತಿಳಿದು
ಒಂದೇ ಒಂದು ಸತ್ಯವೆಂದು ತಿಳಿ
ಓ ಜಸ್ಸು ತುಂಬಲಿ, ಬಾಳ ಮುನ್ನಡೆಯಲಿ.
ಔತಣವಿದು ಓಂಕಾರ ಸವಿಯಲು
ಅಂತವಿಲ್ಲದ ಪಾರದಲಿ ಅನಂತವಾಗಿ ಬೆಳೆದು
ಆಃಹಾ ಎಂದು ಸವಿ ಅಮೃತವ ಜಿಹ್ವೆಗೆ ಸುರಿದು.

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೋಳ ಕಡಿತು ನನಗೊಂದು
Next post ಟೋಪಿವಾಲ ಮತ್ತು ಇಲಿಗಳು

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

cheap jordans|wholesale air max|wholesale jordans|wholesale jewelry|wholesale jerseys