Home / ಕವನ / ಹಾಯ್ಕು / ಬುದ್ಧನ ಹಯವೇ! ನಿನಗೆ ವಂದನೆ!

ಬುದ್ಧನ ಹಯವೇ! ನಿನಗೆ ವಂದನೆ!

ಬುದ್ಧನ ಕಾಡಿನಲ್ಲಿ ಬಿಟ್ಟುಬಂದ ಹಯವೇ
ನೀ ಅರಮನೆಯ ಲಾಯದಲಿ ಏಕೆ ಆದೆ ಲಯವು?
ಹದವರಿಯಲು ಹುಡುಕುತಲಿರುವೆ
ಎಲ್ಲಿಯೂ ನೀ ಕಾಣದೆ ಇರುವೆ.

ಮನ ಲಾಯಕೆ ಬಾ ಹಯವೆ
ಹೃದಯ ಹುಲ್ಲುಗಾವಲ ಮೇಯಲು,
ಕಾಡುತಿದೆ ಭವದ ಭಯವು
ಭವ ಸಾಗರದಲಿ ಹೃದಯ ಲಹರಿ
ಹುಡುಕುತಿದೆ ಬುದ್ಧನ ಬೆಳಕಿನ ಕಣ್ಣು
ಭವಕ್ಕೆ ಬೇಕು ಬುದ್ಧತ್ವದ ಹಣ್ಣು.

ಭೋಧಿ ವೃಕ್ಷದ ಎಲೆ ಎಲೆಯಲ್ಲಿ
ಬುದ್ಧನ ಅಭಯಹಸ್ತ ಸೆಲೆ ಸೆಲೆಯಲ್ಲಿ
ಶಾಖೆ ಶಾಖೆಯಲಿ ಬುದ್ಧನ ತೋಳತೆಕ್ಕೆ
ನೆರಳಲ್ಲಿ ನೆಲೆನಿಂತು ಕರೆಯುತ್ತಿದೆ
ಬುದ್ಧನೆದೆಯ ಪರಮಶಾಂತಿ ಮೆರೆಯುತಿದೆ.

ತೆರದ ಹೆಬ್ಬಾಗಿಲಲಿ ಉರಿಯುತಿದೆ
ಜಗವೆಲ್ಲ ಬೆಳಗುವ ದೀಪ
ಹಯವೆ ಛಂಗನೆ ಹಾರು ಭವದ ಕೂಪ
ಹಚ್ಚಬೇಕು ಜನ್ಮ ಮುಕ್ತಿಗೆ ಧೂಪ
ಎದೆಯಲಿ ಮೊಳಗುತ್ತಿದೆ ಬೌದ್ಧ ಆಲಾಪ.

ನಿಬಿಡವನ ಕಾಡುಗಳಲಿ
ವಕ್ರ ದಾರಿಗಳ ಚಕ್ರ ತಿರುವಿನಲಿ
ನಿಲ್ಲದ ನದಿಯ ಸಾಗರ ಮಿಲನದಲಿ
ತಲ್ಲಣಿಸುತಿದೆ ಎದೆ ಬುದ್ಧತ್ವದ
ಚರಮ ಸೀಮೆಗೆ, ಹಯವೆ! ನಡೆ ಮುಂದೆ.

ಹಯವೆ! ನೀ ಕಂಡಿರುವೆ
ಬುದ್ಧನ ಯಾನ ತಾಣ
ಬುದ್ಧನ ತ್ರಾಣ ಪ್ರಾಣ
ಪಂಚಪ್ರಾಣ ಹೊತ್ತ ನೀ
ಬುದ್ಧನೆದೆಯ ಭ್ರೂಣ.

ಸಿದ್ಧ ಬುದ್ಧನಾಗೆ ಆಗಸದ ರವಿಯಾದ
ಗೆದ್ದಮನದಲಿ ಕಾವ್ಯತುಂಬಿ ಕವಿಯಾದ
ಸರಹದ್ದಿಲ್ಲದೆ ಹಯವೆ ನೀ ಸಾಗೆ
ಬುದ್ಧ, ಜಗಕೆ ತಮವ ಕಳೆದು ಬೆಳಕಾದ.

ಹಯವದನ! ತೋರು ಬುದ್ಧನ ಸದನ
ಬಾಳ ಕದನದಲಿ ಶೋಧನ, ವೇದನ
ತಾಳ್ಮೆಯಲಿ ಮಾಡಿಸು ಬುದ್ಧನ ಸಾಧನ
ಇದು ಆಂತರ್ಯದ ಅನಂತ ನಿವೇದನ.

ಬುದ್ಧನ ವಸಂತ ತಾಣವ ನೀ ಕಂಡಿರುವೆ
ಸಿದ್ಧನ ಬೆಳದಿಂಗಳ ಚೇತನವ ನೀ ಉಂಡಿರುವೆ
ಬುದ್ಧನ ಜೊತೆಯಲ್ಲಿ ಎದ್ದು ಓಡಿದವ ನೀನು
ಸದ್ದು ಗದ್ದಲವಿಲ್ಲದೆ ಅನಂತಕ್ಕೆ ದಾರಿ ತೋರಿರುವೆ
ಬುದ್ಧನ ರಥದ ಮನೋರಥವು ನೀನಾಗಿರುವೆ.
ಹೆಜ್ಞೆ ಹೆಜ್ಞೆಗೆ ಮಂತ್ರ, ಹೆಜ್ಞೆ ಹೆಜ್ಞೆಗೆ
ಬುದ್ಧನ ನಲ್ಮೆ ನುಡಿ, ನಿನ್ನ ಕಿವಿ ತುಂಬಿರಬೇಕು.
ಬುದ್ಧನ ಮಂದಸ್ಮಿತದ ಸರಕು ತುಂಬಿ ಬಾ
ಜಗದ ಖಾಲಿ ಹೃದಯಗಳ ತುಂಬ ಬಾ.

ಸಿದ್ಧರ್ಥ ನಿನ್ನ ಬೆನ್ನೇರಿದಾಗ
ಬಾನೆಲ್ಲಾ ಕಾಂತಿ ಪಥವಾಗಿತ್ತು
ಭೂಮಿ ಕ್ರಾಂತಿ ಪಥದಲ್ಲಿತ್ತು
ಶಾಂತಿ ನಾಂದಿಯಾಗಿತ್ತು
ಭ್ರಾಂತಿ ತುಂಬಿದ ಹೃದಯಕ್ಕೆ
ಹಯದ ಬೆನ್ನೇರಿ ಬಂದಿತ್ತು ಉದಯ.

ಬುವಿ ನಡೆದಿತ್ತು ನಿನ್ನ ಕಾಲೊರಸ ಸದ್ದಿನಲಿ
ಬಾನ ಬೆಳದಿತ್ತು ನಿನ್ನ ತಾಳ ವೇಗಕ್ಕೆ
ಬೆಟ್ಟ ಅದರಿತ್ತು, ’ವೃಕ್ಷ ಕಂಪಿಸಿತ್ತು’
ನದಿ ತುಂಬಿ ಹರಿದಿತ್ತು ಬುದ್ಧತ್ವದಿಂದ.

ಜಗದಲ್ಲಿ ಬಿತ್ತಿದ ನಿನ್ನ ಹೆಜ್ಞೆಯಲಿ
ಬೌದ್ಧಬೀಜವ ಬಿತ್ತಿದೆ, ಮಾನವರ ಎತ್ತಿದೆ
ಅತ್ತು ಸೋಲುವ ಹೃದಯದ ಎತ್ತರಕೆ ಒಯ್ದೆ.

ಬುದ್ಧಂ ಶರಣಂ ಗಚ್ಛಾಮಿ, ಧರ್ಮಂ ಶರಣಂ ಗಚ್ಛಾಮಿ
ಸಂಘಂ ಶರಣಂ ಗಚ್ಛಾಮಿ ಎಂಬ ತ್ರಿಗುಳ ಬಂಧಿಯಲಿ
ನಡೆ ಮುಂದೆ ನಡೆ ಮುಂದೆ ವಿಶ್ವ ಕಲ್ಯಾಣಕ್ಕೆ.

******

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...