Home / ಕವನ / ಹಾಯ್ಕು / ಝೆನ್ ಹಾಯಿಕುಗಳು

ಝೆನ್ ಹಾಯಿಕುಗಳು

ಬುದ್ಧ
ಬೇರಾಗು
ನನ್ನಲ್ಲಿ
ಸಿದ್ಧಿ
ತೇರಾಗು.

ಝೆನ್‌ಗೆ ಬೇಕೆ?
ತುತ್ತೂರಿ ಪೀಪಿ
ಶಂಖನಾದ, ಖಡ್ಗ?
ನಿಂತಿರುವ ನೋಡಿ
ಮುಗ್ಧ ಹುಡುಗ
ಓದಿ ಝೆನ್ ಅವನ
ಮೊಗದ ತುಂಬಾ!

ನನ್ನ ಹೃದಯ
ವೀಣೆಯ
ಝೆನ್ ತಂತಿಯ
ಝೆನ್ ಝೇಂಕಾರ
ಅದು ನನ್ನ ಸಾಕಾರ.

ಕವಿತೆ ಬರೆದರೆ
ಕವಿತೆ ಚಿಟ್ಟೆ
ಗೂಡ ಬಿಟ್ಟು ಹಾರೀತು
ಪ್ರೀತಿ ತೋರಿದರೆ
ಗೂಡ ಕಟ್ಟೀತು
ಎದೆ ಆಳದಲ್ಲಿ.

ಹಸುರೆಲೆಯ
ಹಸಿರು ವಾಗ್ದಾನದಲಿ
ಉನ್ಮತ್ತ ಇಬ್ಬನಿ
ಬಿಸಿಲು ಮಂಚದಲಿ
ಉಸಿರಾಡುತ್ತಿದೆ
ಅದೆಷ್ಟು ಕ್ಷಣ?

ಎರಡು ಇಬ್ಬನಿ
ಅಳುತ್ತಿವೆ, ಸತ್ತ
ಮೂರನೇಯ ಹನಿಗಾಗಿ,

ನನ್ನೊಳಗೆ
ನಾಧುಮುಕಿ
ನೆಲೆ ಹುಡುಕಿನಿಂತೆ.
ನನ್ನೊಳಗೆ
ನಾ ತೇಲಿ
ದಡ ಸೇರಿ ನಿಂತೆ.

ಇಬ್ಬನಿ ವಿರಮಿಸುತ್ತಿದೆ
ಕಿರಣದ ತೋಳಲ್ಲಿ
ತೋಟದ ಎಲೆಯ
ತುಟ್ಟ ತುದಿಯಲ್ಲಿ,
ಮನೆಗೆ ಸುಣ್ಣ ಬಣ್ಣ
ಮನಕೆ ಹಚ್ಚುವುದೇನು?
ಯಾವ ಬಣ್ಣ, ಯಾವ ಕಣ್ಣ?
ಕೊನೆಗೆ ಸೇರುವುದು
ಯಾವ ಊರು ಅಣ್ಣಾ!

ಉದಯ ವಿಹಾರದಲಿ
ಎರೆಹುಳು ಹುಡುಕುತಿದೆ
ಬಾನ ನಕ್ಷತ್ರ, ದಡದ ಶಂಖ ಚಕ್ರ
ಹಿಂದೆ ಹೆಜ್ಞೆ ಗುರುತನು ಬಿಟ್ಟು
ಮುಟ್ಟುತಿದೆ ಗುರಿಯ ಘಟ್ಟ.

ಹಸಿರು ಗದ್ದೆಗಳು
ಬಸಿರ ಮಾತಿಗೆ
ನಕ್ಷತ್ರದ ಮಿಣುಕು ಮಾತು.
ತೆನೆಯ ಸೊಗದ ನರ್ತನಕ್ಕೆ
ಗೀತ ಹಾಡುತಿದೆ
ಹಕ್ಕಿ ಬಾನಿಗಾತು.

ತೃಪ್ತಿ ಹಿಡಿಯಲ್ಲಿ
ಹೂವು ಮುಡಿಯಲ್ಲಿ
ದೀಪ್ತಿ, ಎಲ್ಲೆಡೆಯಲ್ಲಿ
ಹೃದಯ ಗುಡಿಯಲ್ಲಿ

ಜಗವೊಂದು
ಬರೆಯುವ ಹಲಗೆ
ಬರೆದಿಡು ಪ್ರೇಮ ಪತ್ರ.

ಬೋಳು ರೆಂಬೆಯ ಮೇಲೆ
ನಡುಗುವ ಹಕ್ಕಿ ಜೋಡಿಗೆ
ರೆಕ್ಕೆ ಕಂಬಳಿಯ ಮೋಡಿ
ಹಿಮವು ಬೀಳುತಿದೆ
ಹೃದಯ ಮುದುಡುತಿದೆ
ಶೋಕ ಗೀತೆ ಹಾಡಿ.

ಪೀಚ್, ಪ್ಲಮ್
ಮರಗಳೂ ನಿಂತಿವೆ
ಬೆಟ್ಟದ ತುದಿಯಲ್ಲಿ
ಬಿದ್ದು ಉರುಳುತಿವೆ
ಹಣ್ಣುಗಳು, ಮಣ್ಣಿನಲ್ಲಿ
ಬೆಟ್ಟ ಕೊಚ್ಚುತ್ತಿದೆ
ನನ್ನದೆಂಬ ಜಂಭ! ಅದೆಷ್ಟಡಂಭ!

ಧೈರ್ಯ ಸ್ಥೈರ್ಯದಿ
ಒಣಗಿದ ಮರನಿಂತಿದೆ
ಚಳಿಯ ಒಪ್ಪಿಕೊಂಡು
ಮತ್ತೆ ಚೈತ್ರ ಚಿಗುರು
ಹೂಗಳ, ಅಪ್ಪಿಕೊಂಡು
ಬಂದೇ ಬಂದಾನು ವಸಂತನೆಂದು.

ಅನುಭವದಲ್ಲಿ
ಭಾವ ಒಂದೇ ಏಕೆ?
ಪ್ರಭಾವ, ವಿಭಾವಗಳ ಸಾಲು
ಹುಡುಕಿದರೆ ಸಿಗದಿರುವುದೇ
ಝೆನ್ ಮಾಲು?

ಶೂನ್ಯಗಳ ಸನ್ನೆಯಲಿ
ಕಂಡುಕೋ
ನನ್ನಿಯ ಅರಿವು
ನಡೆಸುವುದು ಮುನ್ನ
ತಿಳಿಸುವುದು ವಿಶ್ವ ಅವಿಚ್ಛಿನ್ನ

ರೆಂಬೆಗಳು ತೂಗುತಿವೆ
ಎಲೆಗಳು, ಮರ್ಮರ ಹಾಡುತಿವೆ
ವೃಕ್ಷನಿಂತು ನಿದ್ರಿಸುತ್ತಿದೆ
ತೋಟದ ಕಟ್ಟೆಯಲ್ಲಿ
ಕುಳಿತು ನಾ ದೃಷ್ಟಿಸಿರುವೆ.

ಮೊಗ್ಗು ಹೂ ಕಾಯಿ
ಹಣ್ಣುಗಳಿರಲು
ಗಿಡವೆಂದು, ಒಂಟಿಯಿಲ್ಲ
ನಾ ನಿಂತಿರುವೆ ಒಂಟಿ
ಬೀದಿ ಕಂಭದಂತೆ.

ಎಲೆಗಳೂ ಪಟಪಟ
ಮಾತನಾಡುತಿವೆ
ನಿಂತು ವೃಕ್ಷ
ಕೇಳಿ ಕೇಳಿ
ತಲೆ ತೂಗುತಿದೆ.

ಕ್ಷಣ ಕ್ಷಣದ ಬಾಳಲ್ಲಿ
ಕಣ ಕಣದ ದೈವ
ಬೇಕೇ? ಒಣ ಒಣದ ತತ್ವ
ಝೆನ್‌ಲಿ ಒಂದಾಗೆ
ಹೊರ ಬಾರದೆ ಸತ್ವ?

ನನಗೆ ಇದೆ ಹೆಸರು
ನನ್ನೊಡನೆ ಹುಟ್ಟಿದ
ಮನಕೆ ಇದೆ ಯಾವ ಹೆಸರು?
ನನಗೆ ಇದೆ ಉಸಿರು
ಮನಕೆ ಇದೆ ಯಾವ ಬಸಿರು?

ಅನಂತದಿಂದ
ಸಿಡಿದಿರುವ, ನಾನೊಂದು
ಜೀವರಕ್ತ ಬಿಂದು
ಬಾಳು ಬೆಳೆಯೆ ಎತ್ತರಕ್ಕೆ
ಬದುಕೊಂದು ಸಿಂಧು.

ಆಗಸ ಭೂಮಿಯ ಒಂದಾಗಿಸಿ
ಝೆನ್ ನೂಲಿನಲಿ ಜಗವ ಹೆಣೆದೆ
ನಾನು, ನನ್ನ ಮನ
ಬಲುದೂರ ಸರಿದು
ಬೇರೆಯಾಗಿಯೆ ನಿಂತೆ.

ಉದುರಿದ ಎಲೆಯೊಂದ
ಎತ್ತಿ, ತುಟಿಗೊತ್ತಿಕೊಂಡೆ
ಗಿಡ ಕಣ್ಣಿಟ್ಟು ನೋಡಿ
ತಲೆ ತೂಗಿ ಹೂವರಿಳಿಸಿತು
ಗಿಡ ತುಂಬ.

ತತ್ತರಿಸುವ ಮನ
ತಥಾಗತನ ಎದುರಲ್ಲಿ
ಕರಗಿ ನೀರಾಗುತ್ತಿರುವ
ಹಿಮಗಡ್ಡೆಯ ಗುಡ್ಡೆ.

****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...