Home / ಕವನ / ಹಾಯ್ಕು / ಝೆನ್ ಹಾಯಿಕುಗಳು

ಝೆನ್ ಹಾಯಿಕುಗಳು

ಬುದ್ಧ
ಬೇರಾಗು
ನನ್ನಲ್ಲಿ
ಸಿದ್ಧಿ
ತೇರಾಗು.

ಝೆನ್‌ಗೆ ಬೇಕೆ?
ತುತ್ತೂರಿ ಪೀಪಿ
ಶಂಖನಾದ, ಖಡ್ಗ?
ನಿಂತಿರುವ ನೋಡಿ
ಮುಗ್ಧ ಹುಡುಗ
ಓದಿ ಝೆನ್ ಅವನ
ಮೊಗದ ತುಂಬಾ!

ನನ್ನ ಹೃದಯ
ವೀಣೆಯ
ಝೆನ್ ತಂತಿಯ
ಝೆನ್ ಝೇಂಕಾರ
ಅದು ನನ್ನ ಸಾಕಾರ.

ಕವಿತೆ ಬರೆದರೆ
ಕವಿತೆ ಚಿಟ್ಟೆ
ಗೂಡ ಬಿಟ್ಟು ಹಾರೀತು
ಪ್ರೀತಿ ತೋರಿದರೆ
ಗೂಡ ಕಟ್ಟೀತು
ಎದೆ ಆಳದಲ್ಲಿ.

ಹಸುರೆಲೆಯ
ಹಸಿರು ವಾಗ್ದಾನದಲಿ
ಉನ್ಮತ್ತ ಇಬ್ಬನಿ
ಬಿಸಿಲು ಮಂಚದಲಿ
ಉಸಿರಾಡುತ್ತಿದೆ
ಅದೆಷ್ಟು ಕ್ಷಣ?

ಎರಡು ಇಬ್ಬನಿ
ಅಳುತ್ತಿವೆ, ಸತ್ತ
ಮೂರನೇಯ ಹನಿಗಾಗಿ,

ನನ್ನೊಳಗೆ
ನಾಧುಮುಕಿ
ನೆಲೆ ಹುಡುಕಿನಿಂತೆ.
ನನ್ನೊಳಗೆ
ನಾ ತೇಲಿ
ದಡ ಸೇರಿ ನಿಂತೆ.

ಇಬ್ಬನಿ ವಿರಮಿಸುತ್ತಿದೆ
ಕಿರಣದ ತೋಳಲ್ಲಿ
ತೋಟದ ಎಲೆಯ
ತುಟ್ಟ ತುದಿಯಲ್ಲಿ,
ಮನೆಗೆ ಸುಣ್ಣ ಬಣ್ಣ
ಮನಕೆ ಹಚ್ಚುವುದೇನು?
ಯಾವ ಬಣ್ಣ, ಯಾವ ಕಣ್ಣ?
ಕೊನೆಗೆ ಸೇರುವುದು
ಯಾವ ಊರು ಅಣ್ಣಾ!

ಉದಯ ವಿಹಾರದಲಿ
ಎರೆಹುಳು ಹುಡುಕುತಿದೆ
ಬಾನ ನಕ್ಷತ್ರ, ದಡದ ಶಂಖ ಚಕ್ರ
ಹಿಂದೆ ಹೆಜ್ಞೆ ಗುರುತನು ಬಿಟ್ಟು
ಮುಟ್ಟುತಿದೆ ಗುರಿಯ ಘಟ್ಟ.

ಹಸಿರು ಗದ್ದೆಗಳು
ಬಸಿರ ಮಾತಿಗೆ
ನಕ್ಷತ್ರದ ಮಿಣುಕು ಮಾತು.
ತೆನೆಯ ಸೊಗದ ನರ್ತನಕ್ಕೆ
ಗೀತ ಹಾಡುತಿದೆ
ಹಕ್ಕಿ ಬಾನಿಗಾತು.

ತೃಪ್ತಿ ಹಿಡಿಯಲ್ಲಿ
ಹೂವು ಮುಡಿಯಲ್ಲಿ
ದೀಪ್ತಿ, ಎಲ್ಲೆಡೆಯಲ್ಲಿ
ಹೃದಯ ಗುಡಿಯಲ್ಲಿ

ಜಗವೊಂದು
ಬರೆಯುವ ಹಲಗೆ
ಬರೆದಿಡು ಪ್ರೇಮ ಪತ್ರ.

ಬೋಳು ರೆಂಬೆಯ ಮೇಲೆ
ನಡುಗುವ ಹಕ್ಕಿ ಜೋಡಿಗೆ
ರೆಕ್ಕೆ ಕಂಬಳಿಯ ಮೋಡಿ
ಹಿಮವು ಬೀಳುತಿದೆ
ಹೃದಯ ಮುದುಡುತಿದೆ
ಶೋಕ ಗೀತೆ ಹಾಡಿ.

ಪೀಚ್, ಪ್ಲಮ್
ಮರಗಳೂ ನಿಂತಿವೆ
ಬೆಟ್ಟದ ತುದಿಯಲ್ಲಿ
ಬಿದ್ದು ಉರುಳುತಿವೆ
ಹಣ್ಣುಗಳು, ಮಣ್ಣಿನಲ್ಲಿ
ಬೆಟ್ಟ ಕೊಚ್ಚುತ್ತಿದೆ
ನನ್ನದೆಂಬ ಜಂಭ! ಅದೆಷ್ಟಡಂಭ!

ಧೈರ್ಯ ಸ್ಥೈರ್ಯದಿ
ಒಣಗಿದ ಮರನಿಂತಿದೆ
ಚಳಿಯ ಒಪ್ಪಿಕೊಂಡು
ಮತ್ತೆ ಚೈತ್ರ ಚಿಗುರು
ಹೂಗಳ, ಅಪ್ಪಿಕೊಂಡು
ಬಂದೇ ಬಂದಾನು ವಸಂತನೆಂದು.

ಅನುಭವದಲ್ಲಿ
ಭಾವ ಒಂದೇ ಏಕೆ?
ಪ್ರಭಾವ, ವಿಭಾವಗಳ ಸಾಲು
ಹುಡುಕಿದರೆ ಸಿಗದಿರುವುದೇ
ಝೆನ್ ಮಾಲು?

ಶೂನ್ಯಗಳ ಸನ್ನೆಯಲಿ
ಕಂಡುಕೋ
ನನ್ನಿಯ ಅರಿವು
ನಡೆಸುವುದು ಮುನ್ನ
ತಿಳಿಸುವುದು ವಿಶ್ವ ಅವಿಚ್ಛಿನ್ನ

ರೆಂಬೆಗಳು ತೂಗುತಿವೆ
ಎಲೆಗಳು, ಮರ್ಮರ ಹಾಡುತಿವೆ
ವೃಕ್ಷನಿಂತು ನಿದ್ರಿಸುತ್ತಿದೆ
ತೋಟದ ಕಟ್ಟೆಯಲ್ಲಿ
ಕುಳಿತು ನಾ ದೃಷ್ಟಿಸಿರುವೆ.

ಮೊಗ್ಗು ಹೂ ಕಾಯಿ
ಹಣ್ಣುಗಳಿರಲು
ಗಿಡವೆಂದು, ಒಂಟಿಯಿಲ್ಲ
ನಾ ನಿಂತಿರುವೆ ಒಂಟಿ
ಬೀದಿ ಕಂಭದಂತೆ.

ಎಲೆಗಳೂ ಪಟಪಟ
ಮಾತನಾಡುತಿವೆ
ನಿಂತು ವೃಕ್ಷ
ಕೇಳಿ ಕೇಳಿ
ತಲೆ ತೂಗುತಿದೆ.

ಕ್ಷಣ ಕ್ಷಣದ ಬಾಳಲ್ಲಿ
ಕಣ ಕಣದ ದೈವ
ಬೇಕೇ? ಒಣ ಒಣದ ತತ್ವ
ಝೆನ್‌ಲಿ ಒಂದಾಗೆ
ಹೊರ ಬಾರದೆ ಸತ್ವ?

ನನಗೆ ಇದೆ ಹೆಸರು
ನನ್ನೊಡನೆ ಹುಟ್ಟಿದ
ಮನಕೆ ಇದೆ ಯಾವ ಹೆಸರು?
ನನಗೆ ಇದೆ ಉಸಿರು
ಮನಕೆ ಇದೆ ಯಾವ ಬಸಿರು?

ಅನಂತದಿಂದ
ಸಿಡಿದಿರುವ, ನಾನೊಂದು
ಜೀವರಕ್ತ ಬಿಂದು
ಬಾಳು ಬೆಳೆಯೆ ಎತ್ತರಕ್ಕೆ
ಬದುಕೊಂದು ಸಿಂಧು.

ಆಗಸ ಭೂಮಿಯ ಒಂದಾಗಿಸಿ
ಝೆನ್ ನೂಲಿನಲಿ ಜಗವ ಹೆಣೆದೆ
ನಾನು, ನನ್ನ ಮನ
ಬಲುದೂರ ಸರಿದು
ಬೇರೆಯಾಗಿಯೆ ನಿಂತೆ.

ಉದುರಿದ ಎಲೆಯೊಂದ
ಎತ್ತಿ, ತುಟಿಗೊತ್ತಿಕೊಂಡೆ
ಗಿಡ ಕಣ್ಣಿಟ್ಟು ನೋಡಿ
ತಲೆ ತೂಗಿ ಹೂವರಿಳಿಸಿತು
ಗಿಡ ತುಂಬ.

ತತ್ತರಿಸುವ ಮನ
ತಥಾಗತನ ಎದುರಲ್ಲಿ
ಕರಗಿ ನೀರಾಗುತ್ತಿರುವ
ಹಿಮಗಡ್ಡೆಯ ಗುಡ್ಡೆ.

****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...