Home / ಕವನ / ಹಾಯ್ಕು / ಝೆನ್ ಹಾಯಿಕುಗಳು

ಝೆನ್ ಹಾಯಿಕುಗಳು

ಬುದ್ಧ
ಬೇರಾಗು
ನನ್ನಲ್ಲಿ
ಸಿದ್ಧಿ
ತೇರಾಗು.

ಝೆನ್‌ಗೆ ಬೇಕೆ?
ತುತ್ತೂರಿ ಪೀಪಿ
ಶಂಖನಾದ, ಖಡ್ಗ?
ನಿಂತಿರುವ ನೋಡಿ
ಮುಗ್ಧ ಹುಡುಗ
ಓದಿ ಝೆನ್ ಅವನ
ಮೊಗದ ತುಂಬಾ!

ನನ್ನ ಹೃದಯ
ವೀಣೆಯ
ಝೆನ್ ತಂತಿಯ
ಝೆನ್ ಝೇಂಕಾರ
ಅದು ನನ್ನ ಸಾಕಾರ.

ಕವಿತೆ ಬರೆದರೆ
ಕವಿತೆ ಚಿಟ್ಟೆ
ಗೂಡ ಬಿಟ್ಟು ಹಾರೀತು
ಪ್ರೀತಿ ತೋರಿದರೆ
ಗೂಡ ಕಟ್ಟೀತು
ಎದೆ ಆಳದಲ್ಲಿ.

ಹಸುರೆಲೆಯ
ಹಸಿರು ವಾಗ್ದಾನದಲಿ
ಉನ್ಮತ್ತ ಇಬ್ಬನಿ
ಬಿಸಿಲು ಮಂಚದಲಿ
ಉಸಿರಾಡುತ್ತಿದೆ
ಅದೆಷ್ಟು ಕ್ಷಣ?

ಎರಡು ಇಬ್ಬನಿ
ಅಳುತ್ತಿವೆ, ಸತ್ತ
ಮೂರನೇಯ ಹನಿಗಾಗಿ,

ನನ್ನೊಳಗೆ
ನಾಧುಮುಕಿ
ನೆಲೆ ಹುಡುಕಿನಿಂತೆ.
ನನ್ನೊಳಗೆ
ನಾ ತೇಲಿ
ದಡ ಸೇರಿ ನಿಂತೆ.

ಇಬ್ಬನಿ ವಿರಮಿಸುತ್ತಿದೆ
ಕಿರಣದ ತೋಳಲ್ಲಿ
ತೋಟದ ಎಲೆಯ
ತುಟ್ಟ ತುದಿಯಲ್ಲಿ,
ಮನೆಗೆ ಸುಣ್ಣ ಬಣ್ಣ
ಮನಕೆ ಹಚ್ಚುವುದೇನು?
ಯಾವ ಬಣ್ಣ, ಯಾವ ಕಣ್ಣ?
ಕೊನೆಗೆ ಸೇರುವುದು
ಯಾವ ಊರು ಅಣ್ಣಾ!

ಉದಯ ವಿಹಾರದಲಿ
ಎರೆಹುಳು ಹುಡುಕುತಿದೆ
ಬಾನ ನಕ್ಷತ್ರ, ದಡದ ಶಂಖ ಚಕ್ರ
ಹಿಂದೆ ಹೆಜ್ಞೆ ಗುರುತನು ಬಿಟ್ಟು
ಮುಟ್ಟುತಿದೆ ಗುರಿಯ ಘಟ್ಟ.

ಹಸಿರು ಗದ್ದೆಗಳು
ಬಸಿರ ಮಾತಿಗೆ
ನಕ್ಷತ್ರದ ಮಿಣುಕು ಮಾತು.
ತೆನೆಯ ಸೊಗದ ನರ್ತನಕ್ಕೆ
ಗೀತ ಹಾಡುತಿದೆ
ಹಕ್ಕಿ ಬಾನಿಗಾತು.

ತೃಪ್ತಿ ಹಿಡಿಯಲ್ಲಿ
ಹೂವು ಮುಡಿಯಲ್ಲಿ
ದೀಪ್ತಿ, ಎಲ್ಲೆಡೆಯಲ್ಲಿ
ಹೃದಯ ಗುಡಿಯಲ್ಲಿ

ಜಗವೊಂದು
ಬರೆಯುವ ಹಲಗೆ
ಬರೆದಿಡು ಪ್ರೇಮ ಪತ್ರ.

ಬೋಳು ರೆಂಬೆಯ ಮೇಲೆ
ನಡುಗುವ ಹಕ್ಕಿ ಜೋಡಿಗೆ
ರೆಕ್ಕೆ ಕಂಬಳಿಯ ಮೋಡಿ
ಹಿಮವು ಬೀಳುತಿದೆ
ಹೃದಯ ಮುದುಡುತಿದೆ
ಶೋಕ ಗೀತೆ ಹಾಡಿ.

ಪೀಚ್, ಪ್ಲಮ್
ಮರಗಳೂ ನಿಂತಿವೆ
ಬೆಟ್ಟದ ತುದಿಯಲ್ಲಿ
ಬಿದ್ದು ಉರುಳುತಿವೆ
ಹಣ್ಣುಗಳು, ಮಣ್ಣಿನಲ್ಲಿ
ಬೆಟ್ಟ ಕೊಚ್ಚುತ್ತಿದೆ
ನನ್ನದೆಂಬ ಜಂಭ! ಅದೆಷ್ಟಡಂಭ!

ಧೈರ್ಯ ಸ್ಥೈರ್ಯದಿ
ಒಣಗಿದ ಮರನಿಂತಿದೆ
ಚಳಿಯ ಒಪ್ಪಿಕೊಂಡು
ಮತ್ತೆ ಚೈತ್ರ ಚಿಗುರು
ಹೂಗಳ, ಅಪ್ಪಿಕೊಂಡು
ಬಂದೇ ಬಂದಾನು ವಸಂತನೆಂದು.

ಅನುಭವದಲ್ಲಿ
ಭಾವ ಒಂದೇ ಏಕೆ?
ಪ್ರಭಾವ, ವಿಭಾವಗಳ ಸಾಲು
ಹುಡುಕಿದರೆ ಸಿಗದಿರುವುದೇ
ಝೆನ್ ಮಾಲು?

ಶೂನ್ಯಗಳ ಸನ್ನೆಯಲಿ
ಕಂಡುಕೋ
ನನ್ನಿಯ ಅರಿವು
ನಡೆಸುವುದು ಮುನ್ನ
ತಿಳಿಸುವುದು ವಿಶ್ವ ಅವಿಚ್ಛಿನ್ನ

ರೆಂಬೆಗಳು ತೂಗುತಿವೆ
ಎಲೆಗಳು, ಮರ್ಮರ ಹಾಡುತಿವೆ
ವೃಕ್ಷನಿಂತು ನಿದ್ರಿಸುತ್ತಿದೆ
ತೋಟದ ಕಟ್ಟೆಯಲ್ಲಿ
ಕುಳಿತು ನಾ ದೃಷ್ಟಿಸಿರುವೆ.

ಮೊಗ್ಗು ಹೂ ಕಾಯಿ
ಹಣ್ಣುಗಳಿರಲು
ಗಿಡವೆಂದು, ಒಂಟಿಯಿಲ್ಲ
ನಾ ನಿಂತಿರುವೆ ಒಂಟಿ
ಬೀದಿ ಕಂಭದಂತೆ.

ಎಲೆಗಳೂ ಪಟಪಟ
ಮಾತನಾಡುತಿವೆ
ನಿಂತು ವೃಕ್ಷ
ಕೇಳಿ ಕೇಳಿ
ತಲೆ ತೂಗುತಿದೆ.

ಕ್ಷಣ ಕ್ಷಣದ ಬಾಳಲ್ಲಿ
ಕಣ ಕಣದ ದೈವ
ಬೇಕೇ? ಒಣ ಒಣದ ತತ್ವ
ಝೆನ್‌ಲಿ ಒಂದಾಗೆ
ಹೊರ ಬಾರದೆ ಸತ್ವ?

ನನಗೆ ಇದೆ ಹೆಸರು
ನನ್ನೊಡನೆ ಹುಟ್ಟಿದ
ಮನಕೆ ಇದೆ ಯಾವ ಹೆಸರು?
ನನಗೆ ಇದೆ ಉಸಿರು
ಮನಕೆ ಇದೆ ಯಾವ ಬಸಿರು?

ಅನಂತದಿಂದ
ಸಿಡಿದಿರುವ, ನಾನೊಂದು
ಜೀವರಕ್ತ ಬಿಂದು
ಬಾಳು ಬೆಳೆಯೆ ಎತ್ತರಕ್ಕೆ
ಬದುಕೊಂದು ಸಿಂಧು.

ಆಗಸ ಭೂಮಿಯ ಒಂದಾಗಿಸಿ
ಝೆನ್ ನೂಲಿನಲಿ ಜಗವ ಹೆಣೆದೆ
ನಾನು, ನನ್ನ ಮನ
ಬಲುದೂರ ಸರಿದು
ಬೇರೆಯಾಗಿಯೆ ನಿಂತೆ.

ಉದುರಿದ ಎಲೆಯೊಂದ
ಎತ್ತಿ, ತುಟಿಗೊತ್ತಿಕೊಂಡೆ
ಗಿಡ ಕಣ್ಣಿಟ್ಟು ನೋಡಿ
ತಲೆ ತೂಗಿ ಹೂವರಿಳಿಸಿತು
ಗಿಡ ತುಂಬ.

ತತ್ತರಿಸುವ ಮನ
ತಥಾಗತನ ಎದುರಲ್ಲಿ
ಕರಗಿ ನೀರಾಗುತ್ತಿರುವ
ಹಿಮಗಡ್ಡೆಯ ಗುಡ್ಡೆ.

****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...