ದೀಪಗಳ ದಾರಿಯಲಿ

ದೀಪಗಳ ದಾರಿಯಲಿ ನಡುನಡುವೆ ನೆರಳು
ನೆರಳಿನಲಿ ಸರಿವಾಗ ಯಾವುದೋ ಬೆರಳು
ಬೆನ್ನಿನಲಿ ಹರಿದಂತೆ ಭಯಚಕಿತ ಜೀವ
ತಣ್ಣನೆಯ ಒಡಲಲ್ಲಿ ಬೆದರಿರುವ ಭಾವ.

ಆಸೆ ಕನಸುಗಳೆಲ್ಲ ತೀರಿದುವು ಕುಸಿದು
ಭಾಷೆಗೂ ಸಿಗದಂಥ ಭಯದ ಮಳೆ ಬೆಳೆದು
ಕಪ್ಪು ಮೋರೆಯ ಬೇಡ ಕರಿದಾರ ಹಿಡಿದು
ಪಕ್ಕದಲಿ ಹೋದನೇ ಪ್ರಾಣಕ್ಕೆ ಮುನಿಸು?

ನಾಲೆಗೆಗೆ ಇರುಳ ಹನಿ ತಾಕಿತೋ ಹೇಗೆ?
ಕೊರಳ ಬಳಿ ಬಳ್ಳಿ ಸರಿದಾಡಿತೋ ಹೇಗೆ?
ನಟ್ಟಿರುಳಿನಲಿ ಯಾರೊ ಹಿಂದೆಯೇ ಬಂದು
ಥಟ್ಟನೇ ಹೆಗಲನ್ನು ಜಗ್ಗಿದರೊ ಹೇಗೆ?

ಅಯ್ಯೋ ದೇವರೆ ಎಂದು ಚೀರುವಂತಾಗಿ
ನಡುಕಗಳು ನಾಲಿಗೆಗೆ ಮೂಡದಂತಾಗಿ
ಬಿಚ್ಚುತಿರೆ ದೂರದಲಿ ಮತ್ತೆ ದೀಪಗಳು
ಬೆಚ್ಚನೆಯ ಬೆಳಕಿನಲಿ ಮತ್ತೆ ಕನಸುಗಳು.
*****

 

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಪಾತ್ಮ ರಾಜ
Next post ಕಾಗೆ ಹೊಕ್ಕ ಮನೆಯಾತಲ್ರಿ ಸಾಹಿತ್ಯ ಪರಿಷತ್ತು

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…