ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ

ವರ್ಗ: ಕವನ
ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್
ಪುಸ್ತಕ:
ಕೀಲಿಕರಣ: ಕಿಶೋರ್‍ ಚಂದ್ರ
ವ್ಯಾಕರಣ ದೋಷ ತಿದ್ದುಪಡಿ:

 

ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ
ಕನ್ನಯ್ಯಾ, ಓ ಕನ್ನಯ್ಯಾ,
ನಿನ್ನ ಶ್ರೀಚರಣಗಳ ಹಾದಿ ಬೆಳೆಸುವೆ ವನವ
ಕನ್ನಯ್ಯಾ, ನನ್ನ ಕನ್ನಯ್ಯಾ

ಕನಕಾಂಬರೀ ಬಣ್ಣದ ಸೀರೆಯನ್ನುಡುವೆ,
ಬಣ್ಣ ಬಣ್ಣದ ಗಿಡವ ಪಾತಿಯಲಿ ನೆಡುವೆ,
ಸೇವೆಯಾನಂದವೇ ಕೂಲಿ ನನಗೆನುವೆ,
ಹೂ ಬೆಳೆಸಿದುದೆ ಭಾರಿ ಜಹಗೀರಿ ಎನುವೆ.

ನವಿಲುಗರಿಯ ಕಿರೀಟ, ಪೀತಾಂಬರ,
ಮುಗಿಲ ನೀಲಿಯ ಎದೆಗೆ ಮಿಂಚಿನ ಸರ;
ಭಾವಬಂಗಾರ ಓ ಕೃಷ್ಣಲಾಲ,
ಹೇಗೆ ಅರಿಯಲೊ ನಿನ್ನ ಪ್ರೇಮಜಾಲ.

ಸಾಧುಜನ ದಿನವು ಬೃಂದಾವನಕ್ಕೆ
ಸಾಗುವರು ಕೃಷ್ಣನನು ಕಾಣಲಿಕ್ಕೆ;
ಮೀರಳಾ ಹೃದಯವೇ ಬೃಂದಾವನ,
ಸಿಗುವನೋ ಗಿರಿಧರ ಬಯಸಿದ ಕ್ಷಣ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗರತಿ ಸಂಗವ್ವ
Next post ವರದಾನ

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…