ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ

ವರ್ಗ: ಕವನ
ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್
ಪುಸ್ತಕ:
ಕೀಲಿಕರಣ: ಕಿಶೋರ್‍ ಚಂದ್ರ
ವ್ಯಾಕರಣ ದೋಷ ತಿದ್ದುಪಡಿ:

 

ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ
ಕನ್ನಯ್ಯಾ, ಓ ಕನ್ನಯ್ಯಾ,
ನಿನ್ನ ಶ್ರೀಚರಣಗಳ ಹಾದಿ ಬೆಳೆಸುವೆ ವನವ
ಕನ್ನಯ್ಯಾ, ನನ್ನ ಕನ್ನಯ್ಯಾ

ಕನಕಾಂಬರೀ ಬಣ್ಣದ ಸೀರೆಯನ್ನುಡುವೆ,
ಬಣ್ಣ ಬಣ್ಣದ ಗಿಡವ ಪಾತಿಯಲಿ ನೆಡುವೆ,
ಸೇವೆಯಾನಂದವೇ ಕೂಲಿ ನನಗೆನುವೆ,
ಹೂ ಬೆಳೆಸಿದುದೆ ಭಾರಿ ಜಹಗೀರಿ ಎನುವೆ.

ನವಿಲುಗರಿಯ ಕಿರೀಟ, ಪೀತಾಂಬರ,
ಮುಗಿಲ ನೀಲಿಯ ಎದೆಗೆ ಮಿಂಚಿನ ಸರ;
ಭಾವಬಂಗಾರ ಓ ಕೃಷ್ಣಲಾಲ,
ಹೇಗೆ ಅರಿಯಲೊ ನಿನ್ನ ಪ್ರೇಮಜಾಲ.

ಸಾಧುಜನ ದಿನವು ಬೃಂದಾವನಕ್ಕೆ
ಸಾಗುವರು ಕೃಷ್ಣನನು ಕಾಣಲಿಕ್ಕೆ;
ಮೀರಳಾ ಹೃದಯವೇ ಬೃಂದಾವನ,
ಸಿಗುವನೋ ಗಿರಿಧರ ಬಯಸಿದ ಕ್ಷಣ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗರತಿ ಸಂಗವ್ವ
Next post ವರದಾನ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys