ಹೇಳು ಸಖೀ ಹೇಳೇ ಆ ಹೆಸರನು

ಹೇಳು ಸಖೀ ಹೇಳೇ ಆ ಹೆಸರನು
ನನ್ನೀ ಕಿವಿಗಳಲಿ,
ಮಿಡಿಯುತಿದೆ ಅದು ದಿವ್ಯಗಾನವನು
ನನ್ನೆದೆ ವೀಣೆಯಲಿ.

ವಸಂತ ಬಿಡಿಸಿದ ವನದ ಹಾಸಿನಲಿ
ತೇಲಿ ಬಂದ ಹೆಸರು
ವಿರಹಿ ವಿಹಂಗದ ಮಧುರ ಗೀತೆಯಲಿ
ಕಳವಳಿಸಿದೆ ಉಸಿರು

ಸಖಿಯರ ಮುಖದಲಿ ಏನೋ ಬೆರಗು
ಸುಳಿದಿದೆ ಏಕೆ ಸಖಿ?
ಹುಣ್ಣಿಮೆ ಆಡಿದೆ ಬನದಂಗಳದಲಿ
ಏಕೋ ನಾನು ಸುಖಿ!

ಹಿಂದೆಂದೂ ನಾ ಕಾಣದ ಚಂದ
ಹರಸಿದೆ ಸೃಷ್ಟಿಯನೆ,
ಕಾಮನ ಬಿಲ್ಲಿನ ಏಳೂ ಬಣ್ಣ
ಆಳಿದೆ ದೃಷ್ಟಿಯನೆ.
*****

ಪುಸ್ತಕ: ನಿನಗಾಗೇ ಈ ಹಾಡುಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪಾವಳಿ
Next post ಅಳಬೇಕೆಂದರೆ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…