ಗುರುಸೇವಾ ಮಾಡೋ

ಗುರುಸೇವಾ ಮಾಡೋ ನೀನು
ಪಾಮರ ಮೂಢಾ ||ಪ||

ಗುರುಸೇವೆ ಮಾಡದೆ
ನರಸೇವೆ ಮಾಡುವಿ
ತಾರಿಸುವವರ ಕಾಣೆ ತಾಮಸ ನಿನ್ನೊಳು ||ಅ.ಪ.||

ಬಂಧನ ಇಲ್ಲೆ ಕಂಡಿ
ಇಂದಿನ ಕರ್ಮಫಲವೆಲ್ಲ ಇಲ್ಲೆ ಉಂಡಿ
ಮುಂದಿನ ಮಾರ್ಗ ತಿಳಕೋಳೋ ಹುಚ್ಚುಮುಂಡೆ
ಎಚ್ಚರಿಕಿಲ್ಲದೆ ಹುಚ್ಚನ ತೆರದಂತೆ
ಬೆಟ್ಟನ ಮರದಂತ ಕೆಟ್ಟನಾಗಲಿಬೇಡ ||೧||

ಸಾಧುಗಳ ಸಂಗವ ಬಿಟ್ಟು
ವಾದಮಾಡಿ ಕಾದುವದ್ಯಾಕೊ ಖೊಟ್ಟಿ
ವೇದವನೋದಿ ಆದೆಲ್ಲೋ ಮುರಾಬಟ್ಟಿ
ಬೋಧದ ಮಾರ್ಗವ ಸಾಧಿಸಿ ಸದ್ಗುರು
ಪಾದಸೇವೆಯೋಳ್ ನಿರತನಾಗಿ ಬೇಗನೆ ||೨||

ಮದ್ಯಪಾನ ಮಾಡಿದಿಯೆಲ್ಲೋ
ಮದವೇರಿದಾನಿಯೆಂತಾದಿಯಲ್ಲೋ
ಕದನದೊಳ್ ಕಾಲ ಯಮನಾದಿಯಲ್ಲೋ
ಸದಮಲ ಶಿಶುನಾಳಧೀಶನ ಕಾಣದೆ
ಕಾಲನ ವಶವಾಗಿ ಕೈಸೆರೆ ಸಿಗುವಿಯಲ್ಲೋ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರೀಗುರು ಮಂತ್ರ
Next post ಹೋಗೋಣ ನಧಿಯೋ ಬೇಗನೆ ಎದದು

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys