ಗುರುಸೇವಾ ಮಾಡೋ

ಗುರುಸೇವಾ ಮಾಡೋ ನೀನು
ಪಾಮರ ಮೂಢಾ ||ಪ||

ಗುರುಸೇವೆ ಮಾಡದೆ
ನರಸೇವೆ ಮಾಡುವಿ
ತಾರಿಸುವವರ ಕಾಣೆ ತಾಮಸ ನಿನ್ನೊಳು ||ಅ.ಪ.||

ಬಂಧನ ಇಲ್ಲೆ ಕಂಡಿ
ಇಂದಿನ ಕರ್ಮಫಲವೆಲ್ಲ ಇಲ್ಲೆ ಉಂಡಿ
ಮುಂದಿನ ಮಾರ್ಗ ತಿಳಕೋಳೋ ಹುಚ್ಚುಮುಂಡೆ
ಎಚ್ಚರಿಕಿಲ್ಲದೆ ಹುಚ್ಚನ ತೆರದಂತೆ
ಬೆಟ್ಟನ ಮರದಂತ ಕೆಟ್ಟನಾಗಲಿಬೇಡ ||೧||

ಸಾಧುಗಳ ಸಂಗವ ಬಿಟ್ಟು
ವಾದಮಾಡಿ ಕಾದುವದ್ಯಾಕೊ ಖೊಟ್ಟಿ
ವೇದವನೋದಿ ಆದೆಲ್ಲೋ ಮುರಾಬಟ್ಟಿ
ಬೋಧದ ಮಾರ್ಗವ ಸಾಧಿಸಿ ಸದ್ಗುರು
ಪಾದಸೇವೆಯೋಳ್ ನಿರತನಾಗಿ ಬೇಗನೆ ||೨||

ಮದ್ಯಪಾನ ಮಾಡಿದಿಯೆಲ್ಲೋ
ಮದವೇರಿದಾನಿಯೆಂತಾದಿಯಲ್ಲೋ
ಕದನದೊಳ್ ಕಾಲ ಯಮನಾದಿಯಲ್ಲೋ
ಸದಮಲ ಶಿಶುನಾಳಧೀಶನ ಕಾಣದೆ
ಕಾಲನ ವಶವಾಗಿ ಕೈಸೆರೆ ಸಿಗುವಿಯಲ್ಲೋ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರೀಗುರು ಮಂತ್ರ
Next post ಹೋಗೋಣ ನಧಿಯೋ ಬೇಗನೆ ಎದದು

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…