ಧೋ ಎಂದು ಸುರಿಯುತಿದೆ

ವರ್ಗ: ಕವನ
ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್

ವ್ಯಾಕರಣ ದೋಷ ತಿದ್ದುಪಡಿ: ಕಿಶೋ ಚಂದ್ರ

೨೩

ಧೋ ಎ೦ದು ಸುರಿಯುತಿದೆ ಭಾರಿ ಮಳೆ ಇಲ್ಲಿ,
ಗಾಳಿ ಚೀರುತ್ತಲಿದೆ ಎಲ್ಲ ದಿಕ್ಕಲ್ಲಿ,
ನಿನ್ನ ಬಿಟ್ಟಿರಲಾರೆ ಇಂಥ ಹೊತ್ತಲ್ಲಿ,
ಹೇಗೆ ಬರಲಿ ನಿನ್ನ ಬಳಿಗೆ ಇನಿಯ?
ಕೇಳಬೇಕಿದೆ ನಿನ್ನ ಜೇನುದನಿಯ,

ಇಂಗಿಹೋಯಿತು ಸಂಜೆ ಇರುಳ ಸೆರಗಲ್ಲಿ,
ಭಂಗಪಡುತಿವೆ ತಾರೆ ಮುಗಿಲ ಮರೆಯಲ್ಲಿ,
ನಿನ್ನ ಬಿಟ್ಟಿರಲಾರೆ ಇಂಥ ಹೊತ್ತಲ್ಲಿ,
ಹೇಗೆ ತಲುಪಲಿ ಹೇಳು ನಿನ್ನ ಮನೆಯ?
ಹೇಗೆ ಸೇರಲಿ ಪ್ರೀತಿಪಥದ ಕೊನೆಯ?

ಹಳ್ಳ ಕೂಗುತ್ತಲಿದೆ ತುಂಬಿ ಮಳೆಯಲ್ಲಿ,
ಮನವೊ ಕುದಿಯುತ್ತಲಿದೆ ನಿನ್ನ ನೆನಪಲ್ಲಿ,
ನಿನ್ನ ಬಿಟ್ಟಿರಲಾರೆ ಇಂಥ ಹೊತ್ತಲ್ಲಿ,
ಹೇಗೆ ಬರಲಿ ಇನಿಯ ನಿನ್ನ ಬಳಿಗೆ?
ಕರಗಬೇಕೋ ನಿನ್ನ ಪ್ರೀತಿಯೊಳಗೇ!
*****

ಪುಸ್ತಕ: ನಿನಗಾಗೇ ಈ ಹಾಡುಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಬ್ ವೇ
Next post ನಗೆ ಡಂಗುರ – ೯೩

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…