Home / ಲೇಖನ / ಇತರೆ / ಯಾರು ಹಿತವರು?

ಯಾರು ಹಿತವರು?

ನಾವು ಸಮಾಜದಲ್ಲಿ ಎರಡು ರೀತಿಯ ಜನರನ್ನು ಕಾಣುತ್ತೇವೆ. ಕಾಲದ ಜೊತೆಗೆ ಅದರ ಸರಿಸಮನಾಗಿ, ಕೆಲವೊಮ್ಮೆ ಕಾಲನಿಗಿಂತಾ ಮುಂದೂ ನಡೆಯುತ್ತಾ ಕಾಲನ ಎಲ್ಲಾ ಬದಲಾವಣೆಗಳಿಗೆ ಒಗ್ಗಿಕೊಂಡು ವೇಗವಾಗಿ ಸಾಗುವ ಚುರುಕಿನವರು ಒಂದು ಗುಂಪಿನವರಾದರೆ, ಯಾವುದು ಏನೇ ಆಗಲಿ ತಟಸ್ಥವಾಗಿ, ಕಾಲನೊಂದಿಗೆ ಬದಲಾವಣೆಗೆ ಸ್ಪಂದಿಸದೆ, ತನಗೆ ಬೇಕಾದ್ದನ್ನು ಮಾತ್ರ ಬದಲಿಸಿಕೊಂಡು, ಒಂದು ರೀತಿಯಲ್ಲಿ ಕಾಲನ ಗತಿಗಿಂತಾ ತುಂಬಾ ಹಿಂದೆಯೇ ಉಳಿದುಬಿಡುವ ಸೋಮಾರಿಗಳು ಇನ್ನೊಂದು ಗುಂಪಿನವರು. ಇವರಿಬ್ಬರಲ್ಲಿ ನಿಜವಾಗಿಯೂ ನಮಗೆ ಉಪಯುಕ್ತರು ಯಾರು? ಅನುಪಯುಕ್ತರು ಯಾರು? ಒಂದು ರೀತಿಯಲ್ಲಿ ಇಬ್ಬರೂ ಅನುಪಯುಕ್ತರು! ಇನ್ನೊಂದು ರೀತಿಯಲ್ಲಿ ಇಬ್ಬರೂ ಉಪಯುಕ್ತರು. ಸೋಮಾರಿಯೂ ಸಮಾಜಕ್ಕೆ ಹೇಗೆ ಉಪಯುಕ್ತ ಎನ್ನುವುದನ್ನು ಕವಿ ಎಚ್. ಎಸ್. ಬಿಳಿಗಿರಿ ಯವರು ತಮ್ಮ ಕವನದಲ್ಲಿ ಸೊಗಸಾಗಿ ವರ್ಣಿಸಿದ್ದಾರೆ.
Kushi Dukka
ಪಾದರಸವು ದಿಟ, ಚುರುಕ ತವರೂರು!
ಏನುಪಯೋಗವೋ? ಬಿದ್ದರೆ ಚೂರು!
ಬೆಣ್ಣೆಯು ಜಗೆದೊಳು ಮೊದ್ದಿನ ಮುದ್ದೆ
ನೆಲಕ್ಕೆ ಬಿದ್ದರೂ ಒಡೆವುದೇ ಪೆದ್ದೆ?
ಇನ್ನೇತಕೆ ಬರಿ ಚರ್ಚೆಯು ಸಾಕು
ಓಡುವಿಳೆಗೆ ಸೋಮಾರಿಯೇ ಬ್ರೇಕು!

ಎನ್ನುತ್ತಾರೆ. ಮೇಲುನೋಟಕ್ಕೆ ತಮಾಷೆಯಾಗಿ ಕಂಡರೂ ಆಳಕ್ಕಿಳಿದು ವಿವೇಚಿಸಿದಾಗ ಅದರಲ್ಲೊಂದು ತತ್ವ ಅಡಗಿರುವುದು ಕಾಣುತ್ತದೆ. ಚುರುಕಿನವರು ಕಾಲನ ಜೊತೆಗೆ ಓಡುವ ಅವಸರದಲ್ಲಿ ಸರಿ-ತಪ್ಪುಗಳ ವಿವೇಚನೆಯಿಲ್ಲದೆ ನಡೆದು ಪಾದರಸವು ಬಿದ್ದಾಗ ಚೂರಾಗುವಂತೆ ವ್ಯಕ್ತಿತ್ವವನ್ನು ಚೂರಾಗಿಸಿಕೊಂಡು ಹುಡಿಯಾಗಿ ಹೋಗುತ್ತಾರೆ. ಅದೇ ಸೋಮಾರಿಗಳು ಬೆಣ್ಣೆಯಂತೆ ಕೆಳಗೆ ಬಿದ್ದರೂ ಒಡೆಯುವುದಿಲ್ಲ! ಅವರ ಸೋಮಾರಿತನದಿಂದ ತಮ್ಮ ವ್ಯಕ್ತಿತ್ವಕ್ಕೆ ಎಂದೂ ಧಕ್ಕೆಯಾಗುವುದಕ್ಕೆ ಬಿಡುವುದಿಲ್ಲ. ಹೀಗೇ ಲಂಗುಲಗಾಮಿಲ್ಲದೇ ಓಡುವ ಹುಚ್ಚು ಕುದುರೆಯೆಂಬ ಇಳೆಗೆ ಸೋಮಾರಿಗಳು ಬ್ರೇಕ್ ಹಾಕುತ್ತಾರೆ ಎನ್ನುತ್ತಾರೆ ಕವಿ.

ಪ್ರಿಯ ಸಖಿ, ನಿನಗೆ ಆಮೆ ಮತ್ತು ಮೊಲದ ಕಥೆ ನೆನಪಾಗುತ್ತಿದೆಯೇ? ನಮ್ಮ ಹಿರಿಯರೇ ಹೇಳಿಲ್ಲವೇ ಆತುರಗಾರನಿಗೆ ಬುದ್ಧಿ ಮಟ್ಟ ಎಂದು. ಆದರೆ ಎಲ್ಲಾ ಸಮಯದಲ್ಲೂ ಸೋಮಾರಿ ಇದೇ ರೀತಿ ಉಪಯುಕ್ತನಾಗಬೇಕಾದರೆ ಅವನು ತಕ್ಕ ಸಮಯದಲ್ಲಿ, ತಕ್ಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಸದಾ ಸೋಮಾರಿಯಾಗಿ ನಿಂತಲ್ಲೇ ನಿಂತು ಬಿಟ್ಟರೆ, ಕಾಲ ಇವನನ್ನು ಬಿಟ್ಟು ಮುಂದೆ ಸಾಗುತ್ತದೆ. ಸರಿ-ತಪ್ಪುಗಳನ್ನು ವಿವೇಚಿಸಿ ಸರಿಯಾದ ಸಮಯಕ್ಕೆ ನಿರ್ಧಾರಗಳನ್ನು ತೆಗೆದುಕೊಂಡು ನಡೆಯುವವನೇ ಸದಾ ಗೆಲ್ಲುವವನು. ವಿವೇಕವಿಲ್ಲದೇ ಹುಚ್ಚಾಗಿ ಕಾಲನೊಂದಿಗೆ ಓಡುವವನೂ ಸೋಲುತ್ತಾನೆ, ಹಾಗೇ ಕಾಲನೊಂದಿಗೆ ಸ್ಪಂದಿಸದೇ ನಿಂತಲ್ಲೇ ನಿಲ್ಲುವವನೂ ಸೋಲುತ್ತಾನೆ. ಇವೆರಡರ ಮಧ್ಯದ ರೇಖೆಯಲ್ಲೇ ವಿವೇಚನೆ ಮೂಡಿ ಬರುತ್ತದೆ. ಅದನ್ನೇ ನಾವು ಕಂಡುಕೊಳ್ಳಬೇಕಿರುವುದು. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...