Home / ಲೇಖನ / ಇತರೆ / ಯಾರು ಹಿತವರು?

ಯಾರು ಹಿತವರು?

ನಾವು ಸಮಾಜದಲ್ಲಿ ಎರಡು ರೀತಿಯ ಜನರನ್ನು ಕಾಣುತ್ತೇವೆ. ಕಾಲದ ಜೊತೆಗೆ ಅದರ ಸರಿಸಮನಾಗಿ, ಕೆಲವೊಮ್ಮೆ ಕಾಲನಿಗಿಂತಾ ಮುಂದೂ ನಡೆಯುತ್ತಾ ಕಾಲನ ಎಲ್ಲಾ ಬದಲಾವಣೆಗಳಿಗೆ ಒಗ್ಗಿಕೊಂಡು ವೇಗವಾಗಿ ಸಾಗುವ ಚುರುಕಿನವರು ಒಂದು ಗುಂಪಿನವರಾದರೆ, ಯಾವುದು ಏನೇ ಆಗಲಿ ತಟಸ್ಥವಾಗಿ, ಕಾಲನೊಂದಿಗೆ ಬದಲಾವಣೆಗೆ ಸ್ಪಂದಿಸದೆ, ತನಗೆ ಬೇಕಾದ್ದನ್ನು ಮಾತ್ರ ಬದಲಿಸಿಕೊಂಡು, ಒಂದು ರೀತಿಯಲ್ಲಿ ಕಾಲನ ಗತಿಗಿಂತಾ ತುಂಬಾ ಹಿಂದೆಯೇ ಉಳಿದುಬಿಡುವ ಸೋಮಾರಿಗಳು ಇನ್ನೊಂದು ಗುಂಪಿನವರು. ಇವರಿಬ್ಬರಲ್ಲಿ ನಿಜವಾಗಿಯೂ ನಮಗೆ ಉಪಯುಕ್ತರು ಯಾರು? ಅನುಪಯುಕ್ತರು ಯಾರು? ಒಂದು ರೀತಿಯಲ್ಲಿ ಇಬ್ಬರೂ ಅನುಪಯುಕ್ತರು! ಇನ್ನೊಂದು ರೀತಿಯಲ್ಲಿ ಇಬ್ಬರೂ ಉಪಯುಕ್ತರು. ಸೋಮಾರಿಯೂ ಸಮಾಜಕ್ಕೆ ಹೇಗೆ ಉಪಯುಕ್ತ ಎನ್ನುವುದನ್ನು ಕವಿ ಎಚ್. ಎಸ್. ಬಿಳಿಗಿರಿ ಯವರು ತಮ್ಮ ಕವನದಲ್ಲಿ ಸೊಗಸಾಗಿ ವರ್ಣಿಸಿದ್ದಾರೆ.
Kushi Dukka
ಪಾದರಸವು ದಿಟ, ಚುರುಕ ತವರೂರು!
ಏನುಪಯೋಗವೋ? ಬಿದ್ದರೆ ಚೂರು!
ಬೆಣ್ಣೆಯು ಜಗೆದೊಳು ಮೊದ್ದಿನ ಮುದ್ದೆ
ನೆಲಕ್ಕೆ ಬಿದ್ದರೂ ಒಡೆವುದೇ ಪೆದ್ದೆ?
ಇನ್ನೇತಕೆ ಬರಿ ಚರ್ಚೆಯು ಸಾಕು
ಓಡುವಿಳೆಗೆ ಸೋಮಾರಿಯೇ ಬ್ರೇಕು!

ಎನ್ನುತ್ತಾರೆ. ಮೇಲುನೋಟಕ್ಕೆ ತಮಾಷೆಯಾಗಿ ಕಂಡರೂ ಆಳಕ್ಕಿಳಿದು ವಿವೇಚಿಸಿದಾಗ ಅದರಲ್ಲೊಂದು ತತ್ವ ಅಡಗಿರುವುದು ಕಾಣುತ್ತದೆ. ಚುರುಕಿನವರು ಕಾಲನ ಜೊತೆಗೆ ಓಡುವ ಅವಸರದಲ್ಲಿ ಸರಿ-ತಪ್ಪುಗಳ ವಿವೇಚನೆಯಿಲ್ಲದೆ ನಡೆದು ಪಾದರಸವು ಬಿದ್ದಾಗ ಚೂರಾಗುವಂತೆ ವ್ಯಕ್ತಿತ್ವವನ್ನು ಚೂರಾಗಿಸಿಕೊಂಡು ಹುಡಿಯಾಗಿ ಹೋಗುತ್ತಾರೆ. ಅದೇ ಸೋಮಾರಿಗಳು ಬೆಣ್ಣೆಯಂತೆ ಕೆಳಗೆ ಬಿದ್ದರೂ ಒಡೆಯುವುದಿಲ್ಲ! ಅವರ ಸೋಮಾರಿತನದಿಂದ ತಮ್ಮ ವ್ಯಕ್ತಿತ್ವಕ್ಕೆ ಎಂದೂ ಧಕ್ಕೆಯಾಗುವುದಕ್ಕೆ ಬಿಡುವುದಿಲ್ಲ. ಹೀಗೇ ಲಂಗುಲಗಾಮಿಲ್ಲದೇ ಓಡುವ ಹುಚ್ಚು ಕುದುರೆಯೆಂಬ ಇಳೆಗೆ ಸೋಮಾರಿಗಳು ಬ್ರೇಕ್ ಹಾಕುತ್ತಾರೆ ಎನ್ನುತ್ತಾರೆ ಕವಿ.

ಪ್ರಿಯ ಸಖಿ, ನಿನಗೆ ಆಮೆ ಮತ್ತು ಮೊಲದ ಕಥೆ ನೆನಪಾಗುತ್ತಿದೆಯೇ? ನಮ್ಮ ಹಿರಿಯರೇ ಹೇಳಿಲ್ಲವೇ ಆತುರಗಾರನಿಗೆ ಬುದ್ಧಿ ಮಟ್ಟ ಎಂದು. ಆದರೆ ಎಲ್ಲಾ ಸಮಯದಲ್ಲೂ ಸೋಮಾರಿ ಇದೇ ರೀತಿ ಉಪಯುಕ್ತನಾಗಬೇಕಾದರೆ ಅವನು ತಕ್ಕ ಸಮಯದಲ್ಲಿ, ತಕ್ಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಸದಾ ಸೋಮಾರಿಯಾಗಿ ನಿಂತಲ್ಲೇ ನಿಂತು ಬಿಟ್ಟರೆ, ಕಾಲ ಇವನನ್ನು ಬಿಟ್ಟು ಮುಂದೆ ಸಾಗುತ್ತದೆ. ಸರಿ-ತಪ್ಪುಗಳನ್ನು ವಿವೇಚಿಸಿ ಸರಿಯಾದ ಸಮಯಕ್ಕೆ ನಿರ್ಧಾರಗಳನ್ನು ತೆಗೆದುಕೊಂಡು ನಡೆಯುವವನೇ ಸದಾ ಗೆಲ್ಲುವವನು. ವಿವೇಕವಿಲ್ಲದೇ ಹುಚ್ಚಾಗಿ ಕಾಲನೊಂದಿಗೆ ಓಡುವವನೂ ಸೋಲುತ್ತಾನೆ, ಹಾಗೇ ಕಾಲನೊಂದಿಗೆ ಸ್ಪಂದಿಸದೇ ನಿಂತಲ್ಲೇ ನಿಲ್ಲುವವನೂ ಸೋಲುತ್ತಾನೆ. ಇವೆರಡರ ಮಧ್ಯದ ರೇಖೆಯಲ್ಲೇ ವಿವೇಚನೆ ಮೂಡಿ ಬರುತ್ತದೆ. ಅದನ್ನೇ ನಾವು ಕಂಡುಕೊಳ್ಳಬೇಕಿರುವುದು. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...