ನಾನೆಂಬ ಮಬ್ಬಿಳಿದು

ನಾನೆಂಬ ಮಬ್ಬಿಳಿದು ನೀಹಬ್ಬುತಿರುವಾಗ
ಬಂದ ಗಾಳಿಯಲಿತ್ತು ದಿವ್ಯಗಂಧ
ನಿನ್ನ ಕಣ್ಣಿನ ಮಿಂಚು ನನ್ನ ಒಳಗೂ ಹರಿದು
ಮೂಡಿದರು ಅಲ್ಲಿಯೇ ಸೂರ್ಯಚಂದ್ರ

ಕಾಡಿದರೆ ಏನಂತೆ ಕೂಡಿದರೆ ಏನಂತೆ
ಹಾಡುಗಳೆ ಪಾಡಳಿದು ಹೋಗಿಲ್ಲವೇ?
ಬಂದು ಸೇರಿದ್ದೆಲ್ಲ ನಂದೆನುವ-ಭ್ರಮೆ ಯಾಕೆ
ಒಂದೊಂದಕೂ ದಾರಿ ಬೇರಲ್ಲವೇ?

ಮಣ್ಣನ್ನು ಹಿಡಿದೆತ್ತಿ ಮಣ್ಣಿಗೇ ಬಿಡುವಾಗ
ಕಣ್ಣಲ್ಲಿ ನೀರೇಕೆ, ಪ್ರೀತಿ ಮರುಳು
ಪಡೆದ ಗಳಿಗೆಯ ಚೆಲುವು ನಿತ್ಯ ನೆನಪಿಗೆ ವರವು
ವಸ್ತುವನೆ ಬೇಡುವುದು ಏನು ಹುರುಳು?

ಬಿಟ್ಟ ಕೈಯನು ಸುಟ್ಟ ಕೊರಡೆನಲಿ ವ್ಯಥೆಯಿಲ್ಲ
ಮರ್ತ್ಯಲೋಕದ ಮಿತಿಗೆ ಮಾನ ಬರಲಿ
ಎಲ್ಲಿದ್ದರೂ ಪ್ರೀತಿ, ರೀತಿಗಳ ಋಣ ಸಲಿಸಿ
ಇದ್ದಲ್ಲೆ ಅರಳಿ ಪರಿಮಳ ಬೀರಲಿ.
*****

ಪುಸ್ತಕ: ನಿನಗಾಗೇ ಈ ಹಾಡುಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ‘ಅರಾಫತ್’ನಿಗೆ ಕಾಣಿಕೆ
Next post ನಗೆ ಡಂಗುರ – ೧೧೫

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

cheap jordans|wholesale air max|wholesale jordans|wholesale jewelry|wholesale jerseys