Home / ಕವನ / ಕವಿತೆ / ಯಲ್ಡಕ್ಕೆ ಹೋಗದೆಲ್ಲಿ? (ಬೀದಿ ನಾಟಕದ ಹಾಡು)

ಯಲ್ಡಕ್ಕೆ ಹೋಗದೆಲ್ಲಿ? (ಬೀದಿ ನಾಟಕದ ಹಾಡು)

ಹಾಡು – ೧

ಯಲ್ಡಕ್ಕೆ ಹೋಗದೆಲ್ಲಿ
ಕೇಳೊ ಅಣ್ಣಾ ಕೇಳೊ
ಯಲ್ಲಾ ಕಡೆಯೂ ಇಸ್ಸಿಸ್ಸಿ
ನೋಡೊ ಅಣ್ಣಾ ನೋಡೊ ||

ಊಟವು ಶುದ್ಧ ಅಂತಾದ್ರೆ
ಇದ್ಕೂ ಗಮನ ಬೇಕಲ್ವೆ
ಎಲ್ರಿಗೂ ಆರೋಗ್ಯ ಬೇಕಂದ್ರೆ
ಇದೂನು ಸೈತ ಮುಖ್ಯಲ್ವೆ ||

ಎಲ್ಲೆಲ್ಲೂ ಹೋದ್ರೆ ಅಲ್ಲೆಲ್ಲ
ನೀ ರೋಗ ಹಂಚುತೀಯ
ಒಂದ್ಕಡೆ ಸ್ವಚ್ಚ ಹೋದ್ರೆ
ಜೀವನ ಹರ್ಷ ಇಡ್ತೀಯ ||

ಅಣ್ಣಾ ತಗಿಯೊ ತರವಲ್ಲ
ದರಿದ್ರ ಮೈಲಿಗೆ ಮಡಿನೆಲ್ಲ
ಕಕ್ಕಸ ಜಗದ ಜನಕೆಲ್ಲ
ಮರ್‍ಯಾದಿ ತರೊ ಮಹಲಣ್ಣ ||

ಹಾಡು – ೨

ಬುದ್ಧಿ ಕೊಡಲಿ ದೇವರು
ಊಟ ಮಾಡೊ ಜನಕೆಲ್ಲ ||

ಚೊಂಬು ಹಿಡಿದು ನಿತ್ಯವು
ಪರರ ಬೇಲಿಗೆ ಹೋಗದಂಥ ||

ಹಾಡು – ೩

ಕೇಳ್ರಯ್ಯಾ ಗಂಡಸರೆ
ನಿತ್ಯಗೋಳು ಹೆಂಗಸರ ||

ಮಾನ ಮುಚ್ಚಲು ಬಟ್ಟೆಯು
ಅಂತೇ ಕಕ್ಕಸದಾ ಮನೆಯು ||

ಹಾಡು – ೪

ಬೇಕೊ ಅಣ್ಣಾ ಮರ್‍ವಾದೆ
ಅನ್ನಬಟ್ಟೆಗಿಂತ ಮಿಗಿಲಾದ್ದೆ ||

ಆರು ಮೂರು ದಿನದ ಬದುಕು
ಮಾನದಿಂದ ಕೂಡಿರಬೇಕು ||

ಹಾಡು – ೫

ಅರಿವು ಬೇಕಣ್ಣ
ತಿಳಿವು ಬೇಕಣ್ಣ
ಪಶುವಾಗಿರದ
ಮನುಜನಿಗೆ ||

ಬಾಳೆಲ್ಲ ಬಡಸ್ತನ
ದಿನದಿನ ಅವಮಾನ
ಎಲ್ಲವ ನುಂಗುತ
ಬದುಕಣ್ಣ ನಗುತ ||

ಬಡವನಾದರೇನು
ದರಿದ್ರನಾಗಲ್ಲ
ಸ್ವಚ್ಛ ಬದುಕಿಂದ
ಘನತೆ ಬಂತಲ್ಲ ||

ಬದುಕೆಂಬುದೇ ಮಲ
ಆಗಬೇಕು ನಿರ್ಮಲ
ಮುಂದೆ ಅಬಲರೆಲ್ಲ
ಸಬಲರಾಗುವರಲ್ಲ ||

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...