Home / ಕವನ / ಕವಿತೆ / ರೈತಹತ್ಯಾ (ಬೀದಿ ನಾಟಕದ ಹಾಡು)

ರೈತಹತ್ಯಾ (ಬೀದಿ ನಾಟಕದ ಹಾಡು)

ಹಾಡು – ೧

ಎಲ್ಲಿಹುದೊ ಬಾಳ ಬೆಳಕು
ಅದೆಲ್ಲಿಹುದೊ ಜೀವ ತಳುಕು ||

ಜೀವ ಜಲ ಹನಿಹನಿ ರಾಶಿ
ಸುರಿಯೆ ಧಾರೆ ಹಸಿರು ಕಾಣಿ
ಹೂವರಳಿಸಿ ನಗು ಮಿಂಚಿಸಿ
ಜೀವಕೆಲ್ಲ ಚೇತನವ ಪೂಸಿ ||

ಮುಗಿಲಾಗಿರೆ ಬಟ ಬಯಲು
ನೆಲವೆಲ್ಲ ದ್ವೇಷಾಗ್ನಿ ಬುಗಿಲು
ಎಲ್ಲಿ ನಮ್ಮ ಬೆಳ್ಳಿ ಬೆಳಕು
ಅದೆಲ್ಲಿಹುದೊ ಜೀವ ತಳುಕು ||

ಹಾಡು – ೨

ಯಾರು ಕಾಯುವರಣ್ಣ
ರೈತಾಪಿ ಜನರನ್ನ ||

ತೆಂಗೀಗೆ ಜಂಗಲು ಹಿಡಿದು
ಜುಂಗು ಹತ್ತಿತು ಬದುಕು
ಮಳೆಯಿಲ್ಲ ಬೆಳೆಯಿಲ್ಲ
ದನ ಕರುಗೆ ಮೇವಿಲ್ಲ ||

ಕಣಜದೋರಿಗೆ ಕರುಣೆಯಿಲ್ಲ
ಜಣ್‌ಜಣ್ ಹಣ ಕಾಣಲಿಲ್ಲ
ಕೀಟ ಕಳೆಯ ಔಸದೀಯ
ಭಾಗ್ಯವಲ್ಲ ನಾವೆ ಕುಡಿಯೊ ||

ಹಾಡು – ೩

ದುಡ್ಡು ಕೊಡ್ತಾರೆ ಇವರು
ಜಪ್ತಿ ಮಾಡ್ತಾರೆ ||

ಸಾಲ ಮಾಡಿ ಅಂತಾರೆ
ಸಬ್ಸಿಡಿ ಮಾತ ಹೇಳ್ತಾರೆ
ಸಾಲದ ಶೂಲಕೆ ಹಾಕುತ್ತ
ನಮ್ ಗೋಣು ಮುರಿತಾರೆ ||

ಸಾಲ ಎಣಿಸಿ ಕೊಡುತಾರೆ
ಮೇಲೆ ಬಡ್ಡಿ ಹಾಕ್ತಾರೆ
ಸರ್ವಿಸ್ ಪರ್ವಿಸ್ ಚಾರ್ಜು
ಅಂತ ಟಾರ್ಚರ್‍ ಮಾಡ್ತಾರೆ ||

ಹಾಡು – ೪

ಮಾರುವಾಡಿ ಮುಂದೆ ಬಂದ
ಅಡಮಾನವೆಲ್ಲ ಹರಾಜು ಎಂದ ||

ಬೆಳ್ಳಿ ಬಂಗಾರದ ಅಂಗಡಿ
ಕಾಲೂರಲು ಜಾಗ ಒಂದಡಿ
ಬೆಳೆದ ವಾಮನ ತ್ರಿವಿಕ್ರಮ
ಹಿಡಿಯೋರ್‍ಯಾರವನ ಕ್ರಮ ||

ಬಡ್ಡಿ ಬಡ್ಡಿ ಚಕ್ರ ಬಡ್ಡಿ
ಹೊಟ್ಟೆ ಬೆಳೆದಂತೆ ಅಡ್ಡಾದಿಡ್ಡಿ
ತಕಡಿಗಾಕಿದರೆ ಬಂಗಾರ
ಬಂದಿತಲ್ಲಾ ಸಂಚಕಾರ ||

ಹಾಡು – ೫

ಜಮೀನುದಾರ ಮುರುದಾರ
ಬಡವರ ಭೂಮಿ ಬಕಾಸುರ ||

ಬಡತನ ಭಂಗದ ಪಿತಾಮಹ
ಜೀತ ಬೆವರಿನ ರಣಪಂತ
ಹಸಿಮಾಂಸದ ನರಭಕ್ಷಕ
ಮಾಡೋರ್‍ಯಾರಿವಗೆ ಶಿಕ್ಷಾ ||

ಮೂರಕೆ ಆರು ಲೆಕ್ಕ ಬರೆದು
ಸಾಲಕೆ ಕಟ್ಟಿನ ಗೆರೆಯ ಕೊರೆದು
ಬಿಡದೆ ಮಾಡುವ ವಸೂಲಿಕೋರ
ಊರ ಜುಟ್ಟಿನ ಸೂತ್ರಧಾರ ||

ಹಾಡು – ೬

ಹರಿದೀತು ಕಣ್ಣಗಂಗೆ
ಗಂಗಮ್ಮ ತಾಯಾಗೆ
ಒಡ್ಡು ಕಟ್ಟುವರ್‍ಯಾರು
ಬೋಯಿಗಳು || ಅಣ್ಣಾ ||

ಮುದ್ದೆ ಕೂಡಿಸಲಿಕ್ಕೆ
ಹಿಟ್ಟಿಲ್ಲ ಸೊಪ್ಪಿಲ್ಲ
ಹಿಡಿ ಹಿಟ್ಟು ಆಯಿತೊ
ಹಂಬಲಿಯು || ಅಣ್ಣಾ ||

ತಿನ್ನಲಾರೆವು ಎಂದು
ಅನ್ನ ಚೆಲ್ಲುವ ಮಂದಿ
ಕೊಡಿರಯ್ಯೊ ಹಿಡಿಗೂಳು
ನಿಮ್ಮ ಧರ್ಮ || ಅಣ್ಣಾ ||

ಹಾಡು – ೭

ಕೊಳ್ಳುವಿರಾ ಅಣ್ಣಾ ಕೊಳ್ಳುವಿರಾ
ಜೀವಗಳು ಬಿಕರಿಗಿವೆ ಕೊಳ್ಳುವಿರಾ ||

ಜೀವಾವ ಕೊಂಡು ದುಡ್ಡಾ ಕೊಟ್ಟಾರೆ
ಅದೆ ನಮ್ಮ ಮನೆ ಮಂದಿ ಹೊಟ್ಟಹೊರೆ
ಜೀವ ಉಳಿಸಲು ಜೀವ ಮಾರಾಟವೆ
ಜೀವ ಕೊಂಡು ಜೀವ ಉಳಿಸಿರಣ್ಣಾ ||

ನಮ್ಮ ಹಸಿವು ದುಃಖ ನಿಮ್ಮದಾಗಲಿಲ್ಲ
ಕನಸ ಕೊಂಡು ಮಹಲಲಿ ಕುಣಿದಿರಲ್ಲ
ಹೊಟ್ಟೆ ಕೇಳಲಿಲ್ಲ ಸುಮ್ಮನಿರಲಾಗಿಲಿಲ್ಲ
ಉರಿಬೆಂದು ಬೂದಿ ಆದೆವಲ್ಲ ||

ಹಾಡು – ೮

ಸಹಾಯವ ಮಾಡೀರಣ್ಣ
ನಾವು ಸಾಯಬೇಕ್ರಣ್ಣ ||

ಇದ್ದು ನಾವು ಬದುಕಲಾರೆವು
ನಿಮಗೆ ಏನೂ ಮಾಡಲಾರೆವು
ಬದುಕಿಗಂತೂ ಏನೂ ಇಲ್ಲ
ಸಾವಿಗಾದ್ರೂ ಕೊಡ್ರಿ ಬೆಲ್ಲ ||

ನಮ್ಮ ಸಾವಿಗೆ ನೀವೇ ಸಾಕ್ಷಿ
ಅದುವೆ ಸದ್ಯ ನಮಗೆ ಮೋಕ್ಷ
ಮನಕರಗದವರ ನಡುವೆ
ಸಾವೆ ಪರಮ ಒಡವೆ ||
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...