Home / ಕವನ / ಕವಿತೆ / ರೈತಹತ್ಯಾ (ಬೀದಿ ನಾಟಕದ ಹಾಡು)

ರೈತಹತ್ಯಾ (ಬೀದಿ ನಾಟಕದ ಹಾಡು)

ಹಾಡು – ೧

ಎಲ್ಲಿಹುದೊ ಬಾಳ ಬೆಳಕು
ಅದೆಲ್ಲಿಹುದೊ ಜೀವ ತಳುಕು ||

ಜೀವ ಜಲ ಹನಿಹನಿ ರಾಶಿ
ಸುರಿಯೆ ಧಾರೆ ಹಸಿರು ಕಾಣಿ
ಹೂವರಳಿಸಿ ನಗು ಮಿಂಚಿಸಿ
ಜೀವಕೆಲ್ಲ ಚೇತನವ ಪೂಸಿ ||

ಮುಗಿಲಾಗಿರೆ ಬಟ ಬಯಲು
ನೆಲವೆಲ್ಲ ದ್ವೇಷಾಗ್ನಿ ಬುಗಿಲು
ಎಲ್ಲಿ ನಮ್ಮ ಬೆಳ್ಳಿ ಬೆಳಕು
ಅದೆಲ್ಲಿಹುದೊ ಜೀವ ತಳುಕು ||

ಹಾಡು – ೨

ಯಾರು ಕಾಯುವರಣ್ಣ
ರೈತಾಪಿ ಜನರನ್ನ ||

ತೆಂಗೀಗೆ ಜಂಗಲು ಹಿಡಿದು
ಜುಂಗು ಹತ್ತಿತು ಬದುಕು
ಮಳೆಯಿಲ್ಲ ಬೆಳೆಯಿಲ್ಲ
ದನ ಕರುಗೆ ಮೇವಿಲ್ಲ ||

ಕಣಜದೋರಿಗೆ ಕರುಣೆಯಿಲ್ಲ
ಜಣ್‌ಜಣ್ ಹಣ ಕಾಣಲಿಲ್ಲ
ಕೀಟ ಕಳೆಯ ಔಸದೀಯ
ಭಾಗ್ಯವಲ್ಲ ನಾವೆ ಕುಡಿಯೊ ||

ಹಾಡು – ೩

ದುಡ್ಡು ಕೊಡ್ತಾರೆ ಇವರು
ಜಪ್ತಿ ಮಾಡ್ತಾರೆ ||

ಸಾಲ ಮಾಡಿ ಅಂತಾರೆ
ಸಬ್ಸಿಡಿ ಮಾತ ಹೇಳ್ತಾರೆ
ಸಾಲದ ಶೂಲಕೆ ಹಾಕುತ್ತ
ನಮ್ ಗೋಣು ಮುರಿತಾರೆ ||

ಸಾಲ ಎಣಿಸಿ ಕೊಡುತಾರೆ
ಮೇಲೆ ಬಡ್ಡಿ ಹಾಕ್ತಾರೆ
ಸರ್ವಿಸ್ ಪರ್ವಿಸ್ ಚಾರ್ಜು
ಅಂತ ಟಾರ್ಚರ್‍ ಮಾಡ್ತಾರೆ ||

ಹಾಡು – ೪

ಮಾರುವಾಡಿ ಮುಂದೆ ಬಂದ
ಅಡಮಾನವೆಲ್ಲ ಹರಾಜು ಎಂದ ||

ಬೆಳ್ಳಿ ಬಂಗಾರದ ಅಂಗಡಿ
ಕಾಲೂರಲು ಜಾಗ ಒಂದಡಿ
ಬೆಳೆದ ವಾಮನ ತ್ರಿವಿಕ್ರಮ
ಹಿಡಿಯೋರ್‍ಯಾರವನ ಕ್ರಮ ||

ಬಡ್ಡಿ ಬಡ್ಡಿ ಚಕ್ರ ಬಡ್ಡಿ
ಹೊಟ್ಟೆ ಬೆಳೆದಂತೆ ಅಡ್ಡಾದಿಡ್ಡಿ
ತಕಡಿಗಾಕಿದರೆ ಬಂಗಾರ
ಬಂದಿತಲ್ಲಾ ಸಂಚಕಾರ ||

ಹಾಡು – ೫

ಜಮೀನುದಾರ ಮುರುದಾರ
ಬಡವರ ಭೂಮಿ ಬಕಾಸುರ ||

ಬಡತನ ಭಂಗದ ಪಿತಾಮಹ
ಜೀತ ಬೆವರಿನ ರಣಪಂತ
ಹಸಿಮಾಂಸದ ನರಭಕ್ಷಕ
ಮಾಡೋರ್‍ಯಾರಿವಗೆ ಶಿಕ್ಷಾ ||

ಮೂರಕೆ ಆರು ಲೆಕ್ಕ ಬರೆದು
ಸಾಲಕೆ ಕಟ್ಟಿನ ಗೆರೆಯ ಕೊರೆದು
ಬಿಡದೆ ಮಾಡುವ ವಸೂಲಿಕೋರ
ಊರ ಜುಟ್ಟಿನ ಸೂತ್ರಧಾರ ||

ಹಾಡು – ೬

ಹರಿದೀತು ಕಣ್ಣಗಂಗೆ
ಗಂಗಮ್ಮ ತಾಯಾಗೆ
ಒಡ್ಡು ಕಟ್ಟುವರ್‍ಯಾರು
ಬೋಯಿಗಳು || ಅಣ್ಣಾ ||

ಮುದ್ದೆ ಕೂಡಿಸಲಿಕ್ಕೆ
ಹಿಟ್ಟಿಲ್ಲ ಸೊಪ್ಪಿಲ್ಲ
ಹಿಡಿ ಹಿಟ್ಟು ಆಯಿತೊ
ಹಂಬಲಿಯು || ಅಣ್ಣಾ ||

ತಿನ್ನಲಾರೆವು ಎಂದು
ಅನ್ನ ಚೆಲ್ಲುವ ಮಂದಿ
ಕೊಡಿರಯ್ಯೊ ಹಿಡಿಗೂಳು
ನಿಮ್ಮ ಧರ್ಮ || ಅಣ್ಣಾ ||

ಹಾಡು – ೭

ಕೊಳ್ಳುವಿರಾ ಅಣ್ಣಾ ಕೊಳ್ಳುವಿರಾ
ಜೀವಗಳು ಬಿಕರಿಗಿವೆ ಕೊಳ್ಳುವಿರಾ ||

ಜೀವಾವ ಕೊಂಡು ದುಡ್ಡಾ ಕೊಟ್ಟಾರೆ
ಅದೆ ನಮ್ಮ ಮನೆ ಮಂದಿ ಹೊಟ್ಟಹೊರೆ
ಜೀವ ಉಳಿಸಲು ಜೀವ ಮಾರಾಟವೆ
ಜೀವ ಕೊಂಡು ಜೀವ ಉಳಿಸಿರಣ್ಣಾ ||

ನಮ್ಮ ಹಸಿವು ದುಃಖ ನಿಮ್ಮದಾಗಲಿಲ್ಲ
ಕನಸ ಕೊಂಡು ಮಹಲಲಿ ಕುಣಿದಿರಲ್ಲ
ಹೊಟ್ಟೆ ಕೇಳಲಿಲ್ಲ ಸುಮ್ಮನಿರಲಾಗಿಲಿಲ್ಲ
ಉರಿಬೆಂದು ಬೂದಿ ಆದೆವಲ್ಲ ||

ಹಾಡು – ೮

ಸಹಾಯವ ಮಾಡೀರಣ್ಣ
ನಾವು ಸಾಯಬೇಕ್ರಣ್ಣ ||

ಇದ್ದು ನಾವು ಬದುಕಲಾರೆವು
ನಿಮಗೆ ಏನೂ ಮಾಡಲಾರೆವು
ಬದುಕಿಗಂತೂ ಏನೂ ಇಲ್ಲ
ಸಾವಿಗಾದ್ರೂ ಕೊಡ್ರಿ ಬೆಲ್ಲ ||

ನಮ್ಮ ಸಾವಿಗೆ ನೀವೇ ಸಾಕ್ಷಿ
ಅದುವೆ ಸದ್ಯ ನಮಗೆ ಮೋಕ್ಷ
ಮನಕರಗದವರ ನಡುವೆ
ಸಾವೆ ಪರಮ ಒಡವೆ ||
*****

 

Tagged:

Leave a Reply

Your email address will not be published. Required fields are marked *

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...