Home / ಕವನ / ಕವಿತೆ / ಮಳೆಯ ಬೆಳೆ (ಬೀದಿ ನಾಟಕದ ಹಾಡು)

ಮಳೆಯ ಬೆಳೆ (ಬೀದಿ ನಾಟಕದ ಹಾಡು)

ಯಾತಕೆ ಮಳೆ ವಾದವೊ
ಶಿವಶಿವನೆ
ಜೀವ ತಲ್ಲಣಿಸುತಾವೊ ||

ಮಳೆಯಿಲ್ಲ ಬೆಳೆಯಿಲ್ಲ ಶಿವನೆ
ನಮ ಬದುಕಿಗೆ ನೆಲೆಯೆಲ್ಲಿ ಶಿವನೆ ||

ದಿನವೂ ಮುಗಿಲತ್ತ ದಿಟ್ಟಿಯನಿಟ್ಟು
ಕಾಣದಾದೆವೊ ಹೊಟ್ಟೆಗೆ ಹಿಟ್ಟು
ಎತ್ತ ನೋಡಲ್ಲಿ ಬಿಸಿಲು ರಣರಣಾ
ಬರಿದಾದ ಒಡಲೆಲ್ಲ ಭಣ ಭಣಾ ||

ಮಳೆರಾಯ ನಮ್ಮ ಮರೆತಾನಲ್ಲ
ಸೂರ್ಯಪ್ಪ ನಮ್ಮ ಸುಡುತಾನಲ್ಲ
ಗಂಗಮ್ಮ ನಮ್ಮ ಕೈಬಿಟ್ಟಳಲ್ಲ
ಭೂತಾಯಿ ಮಾತ್ರ ಸಲುವ್ತಾಳಲ್ಲ ||

ಯಾತಕ್ಕೆ ಮಳೆ ವಾದವೊ
ಶಿವಶಿವನೆ
ಜೀವ ತಲ್ಲಣಿಸುತಾವೊ ||

ಹಾಡು – ೨

ಗಂಡ ಹೆಂಡಿರ ಕೆಡಿಸಿತು
ನೀರು ಕಣಣ್ಣಾ ನೀರು ||

ಅತ್ತೆ ಸೊಸೆಯ ಕೆಡಿಸಿತು
ನೀರು ಕಣಣ್ಣಾ ನೀರು ||

ತಾಯಿ ಮಗನ ಕೆಡಿಸಿತು
ನೀರು ಕಣಣ್ಣಾ ನೀರು ||

ಹಾಡು – ೩

ದೊಡ್ಡ ಮನೆಯ ದೊಡ್ಡವ್ವ
ಮನಸು ಮಾತ್ರ ಚಿಕ್ಕದವ್ವ ||

ಹಟ್ಟಿಯಿಂದ ಹನುಮಂತನ
ದೊಡ್ಡವ್ವನಲ್ಲಿಗೆ ಕರೆಸಿತು ನೀರು ||

ಒಡತಿ ಆಳಿನ ಮನಸನೆಲ್ಲ
ಕೆಡಿಸಿತು ನೀರು ||

ಹಾಡು – ೪

ಊರಿನ ಮಾನ ಎಲ್ಲೈತಣ್ಣ
ಕುಡಿಯೊ ನೀರಲ್ಲಿ ||

ಹೆಣ್ಣಿನಮಾನ ಗಂಡಿನ ಕಣ್ಣು
ಕೆರೆಯ ನೀರಿನ ಬಣ್ಣ ||

ಜೀವ ನೀರು ಮಾನ ಪ್ರಾಣ
ಊರ ಘನತೆಣ್ಣ ||

ಹಾಡು – ೫

ದೇಸಾಯಿಗೆ ಎಂಥಾ ರೋಗವಯ್ಯ
ದೊಡ್ಡರೋಗ ದೊಡ್ಡರೋಗ ||

ಯಾತರಿಂದ ಬಂದ ರೋಗ
ಸಾವಿನ ಸಿದ್ಧತೆಗೆಲ್ಲಾ ಯೋಗ ||

ಜೀವನ ಶುದ್ಧ ಇಲ್ಲದಿದ್ದರೆ
ಬರುತೈತಣ್ಣ ದೊಡ್ಡ ರೋಗ ||

ಹಾಡು – ೬

ನೀಡಿರಮ್ಮ ದಾನ ನೀರ
ಕೇಳ ಬಂದಿಹನೀ ವಜೀರ ||

ಬಾವಿ ಬತ್ತಿ ಬಾಯಿ ಬತ್ತಿ
ಜೀವ ತಲ್ಲಣಿಸೂತೈತೆ ||

ಸಾಯಲಿರುವ ಜೀವವನ್ನು
ಚೊಂಬು ನೀರಲಿ ಉಳಿಸಲಿನ್ನು ||

ಹಾಡು – ೭

ಜೀವಕ್ಕೆ ಜಲಬೇಕು
ಜಲದೊಳಗೆ ಜೀವವುಂಟು ||

ದೇಸಾಯ ಜೀವ ಎಂಬೋದು
ಊರು ನೀಡಿದ ಧರ್ಮ ||

ಮಾಡಿದ್ದ ಉಣ್ಣುತೀಯ ತಮ್ಮ
ತಿಳೀಯಿದುವೆ ಬದುಕ ಮರ್ಮ ||

ಹಾಡು – ೮

ಬಾವಿ ಬತ್ತಿದರೇನಣ್ಣಾ
ಭೂಮಿ ಬಂಜೆಯಲ್ಲ ||

ಕರೆಯ ಆಳದಿ ತೋಡಣ್ಣ
ನೀರ ನೆಲೆಯ ನೋಡಣ್ಣ ||

ಬಿದ್ದ ಮಳೆಯ ನೀರನ್ನು
ಕೆರೆಯಲಿ ತಡೆಯಣ್ಣ ||

ಹಾಡು – ೯

ನೀರಿನ ನಾಯಕನೊ
ನಮ್ಮ ವಜೀರ್‌ಸಾಬನೊ ||

ಕೆರೆ ಹೂಳೆತ್ತಿಸಿ ನೀರನಿಂಗಿಸಿ
ಬಾವಿ ಜಲವನು ಬರಿಸಿದನೊ ||

ಮಳೆಯ ಬೆಳೆಯನು ಬೆಳೆಸಿದನೊ
ಊರಿನ ಬರವಾ ಮುಗಿಸಿದನೊ ||

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...