Home / ಕವನ / ಕವಿತೆ / ಮಳೆಯ ಬೆಳೆ (ಬೀದಿ ನಾಟಕದ ಹಾಡು)

ಮಳೆಯ ಬೆಳೆ (ಬೀದಿ ನಾಟಕದ ಹಾಡು)

ಯಾತಕೆ ಮಳೆ ವಾದವೊ
ಶಿವಶಿವನೆ
ಜೀವ ತಲ್ಲಣಿಸುತಾವೊ ||

ಮಳೆಯಿಲ್ಲ ಬೆಳೆಯಿಲ್ಲ ಶಿವನೆ
ನಮ ಬದುಕಿಗೆ ನೆಲೆಯೆಲ್ಲಿ ಶಿವನೆ ||

ದಿನವೂ ಮುಗಿಲತ್ತ ದಿಟ್ಟಿಯನಿಟ್ಟು
ಕಾಣದಾದೆವೊ ಹೊಟ್ಟೆಗೆ ಹಿಟ್ಟು
ಎತ್ತ ನೋಡಲ್ಲಿ ಬಿಸಿಲು ರಣರಣಾ
ಬರಿದಾದ ಒಡಲೆಲ್ಲ ಭಣ ಭಣಾ ||

ಮಳೆರಾಯ ನಮ್ಮ ಮರೆತಾನಲ್ಲ
ಸೂರ್ಯಪ್ಪ ನಮ್ಮ ಸುಡುತಾನಲ್ಲ
ಗಂಗಮ್ಮ ನಮ್ಮ ಕೈಬಿಟ್ಟಳಲ್ಲ
ಭೂತಾಯಿ ಮಾತ್ರ ಸಲುವ್ತಾಳಲ್ಲ ||

ಯಾತಕ್ಕೆ ಮಳೆ ವಾದವೊ
ಶಿವಶಿವನೆ
ಜೀವ ತಲ್ಲಣಿಸುತಾವೊ ||

ಹಾಡು – ೨

ಗಂಡ ಹೆಂಡಿರ ಕೆಡಿಸಿತು
ನೀರು ಕಣಣ್ಣಾ ನೀರು ||

ಅತ್ತೆ ಸೊಸೆಯ ಕೆಡಿಸಿತು
ನೀರು ಕಣಣ್ಣಾ ನೀರು ||

ತಾಯಿ ಮಗನ ಕೆಡಿಸಿತು
ನೀರು ಕಣಣ್ಣಾ ನೀರು ||

ಹಾಡು – ೩

ದೊಡ್ಡ ಮನೆಯ ದೊಡ್ಡವ್ವ
ಮನಸು ಮಾತ್ರ ಚಿಕ್ಕದವ್ವ ||

ಹಟ್ಟಿಯಿಂದ ಹನುಮಂತನ
ದೊಡ್ಡವ್ವನಲ್ಲಿಗೆ ಕರೆಸಿತು ನೀರು ||

ಒಡತಿ ಆಳಿನ ಮನಸನೆಲ್ಲ
ಕೆಡಿಸಿತು ನೀರು ||

ಹಾಡು – ೪

ಊರಿನ ಮಾನ ಎಲ್ಲೈತಣ್ಣ
ಕುಡಿಯೊ ನೀರಲ್ಲಿ ||

ಹೆಣ್ಣಿನಮಾನ ಗಂಡಿನ ಕಣ್ಣು
ಕೆರೆಯ ನೀರಿನ ಬಣ್ಣ ||

ಜೀವ ನೀರು ಮಾನ ಪ್ರಾಣ
ಊರ ಘನತೆಣ್ಣ ||

ಹಾಡು – ೫

ದೇಸಾಯಿಗೆ ಎಂಥಾ ರೋಗವಯ್ಯ
ದೊಡ್ಡರೋಗ ದೊಡ್ಡರೋಗ ||

ಯಾತರಿಂದ ಬಂದ ರೋಗ
ಸಾವಿನ ಸಿದ್ಧತೆಗೆಲ್ಲಾ ಯೋಗ ||

ಜೀವನ ಶುದ್ಧ ಇಲ್ಲದಿದ್ದರೆ
ಬರುತೈತಣ್ಣ ದೊಡ್ಡ ರೋಗ ||

ಹಾಡು – ೬

ನೀಡಿರಮ್ಮ ದಾನ ನೀರ
ಕೇಳ ಬಂದಿಹನೀ ವಜೀರ ||

ಬಾವಿ ಬತ್ತಿ ಬಾಯಿ ಬತ್ತಿ
ಜೀವ ತಲ್ಲಣಿಸೂತೈತೆ ||

ಸಾಯಲಿರುವ ಜೀವವನ್ನು
ಚೊಂಬು ನೀರಲಿ ಉಳಿಸಲಿನ್ನು ||

ಹಾಡು – ೭

ಜೀವಕ್ಕೆ ಜಲಬೇಕು
ಜಲದೊಳಗೆ ಜೀವವುಂಟು ||

ದೇಸಾಯ ಜೀವ ಎಂಬೋದು
ಊರು ನೀಡಿದ ಧರ್ಮ ||

ಮಾಡಿದ್ದ ಉಣ್ಣುತೀಯ ತಮ್ಮ
ತಿಳೀಯಿದುವೆ ಬದುಕ ಮರ್ಮ ||

ಹಾಡು – ೮

ಬಾವಿ ಬತ್ತಿದರೇನಣ್ಣಾ
ಭೂಮಿ ಬಂಜೆಯಲ್ಲ ||

ಕರೆಯ ಆಳದಿ ತೋಡಣ್ಣ
ನೀರ ನೆಲೆಯ ನೋಡಣ್ಣ ||

ಬಿದ್ದ ಮಳೆಯ ನೀರನ್ನು
ಕೆರೆಯಲಿ ತಡೆಯಣ್ಣ ||

ಹಾಡು – ೯

ನೀರಿನ ನಾಯಕನೊ
ನಮ್ಮ ವಜೀರ್‌ಸಾಬನೊ ||

ಕೆರೆ ಹೂಳೆತ್ತಿಸಿ ನೀರನಿಂಗಿಸಿ
ಬಾವಿ ಜಲವನು ಬರಿಸಿದನೊ ||

ಮಳೆಯ ಬೆಳೆಯನು ಬೆಳೆಸಿದನೊ
ಊರಿನ ಬರವಾ ಮುಗಿಸಿದನೊ ||

*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...