Home / ಕವನ / ಕವಿತೆ / ಮಳೆಯ ಬೆಳೆ (ಬೀದಿ ನಾಟಕದ ಹಾಡು)

ಮಳೆಯ ಬೆಳೆ (ಬೀದಿ ನಾಟಕದ ಹಾಡು)

ಯಾತಕೆ ಮಳೆ ವಾದವೊ
ಶಿವಶಿವನೆ
ಜೀವ ತಲ್ಲಣಿಸುತಾವೊ ||

ಮಳೆಯಿಲ್ಲ ಬೆಳೆಯಿಲ್ಲ ಶಿವನೆ
ನಮ ಬದುಕಿಗೆ ನೆಲೆಯೆಲ್ಲಿ ಶಿವನೆ ||

ದಿನವೂ ಮುಗಿಲತ್ತ ದಿಟ್ಟಿಯನಿಟ್ಟು
ಕಾಣದಾದೆವೊ ಹೊಟ್ಟೆಗೆ ಹಿಟ್ಟು
ಎತ್ತ ನೋಡಲ್ಲಿ ಬಿಸಿಲು ರಣರಣಾ
ಬರಿದಾದ ಒಡಲೆಲ್ಲ ಭಣ ಭಣಾ ||

ಮಳೆರಾಯ ನಮ್ಮ ಮರೆತಾನಲ್ಲ
ಸೂರ್ಯಪ್ಪ ನಮ್ಮ ಸುಡುತಾನಲ್ಲ
ಗಂಗಮ್ಮ ನಮ್ಮ ಕೈಬಿಟ್ಟಳಲ್ಲ
ಭೂತಾಯಿ ಮಾತ್ರ ಸಲುವ್ತಾಳಲ್ಲ ||

ಯಾತಕ್ಕೆ ಮಳೆ ವಾದವೊ
ಶಿವಶಿವನೆ
ಜೀವ ತಲ್ಲಣಿಸುತಾವೊ ||

ಹಾಡು – ೨

ಗಂಡ ಹೆಂಡಿರ ಕೆಡಿಸಿತು
ನೀರು ಕಣಣ್ಣಾ ನೀರು ||

ಅತ್ತೆ ಸೊಸೆಯ ಕೆಡಿಸಿತು
ನೀರು ಕಣಣ್ಣಾ ನೀರು ||

ತಾಯಿ ಮಗನ ಕೆಡಿಸಿತು
ನೀರು ಕಣಣ್ಣಾ ನೀರು ||

ಹಾಡು – ೩

ದೊಡ್ಡ ಮನೆಯ ದೊಡ್ಡವ್ವ
ಮನಸು ಮಾತ್ರ ಚಿಕ್ಕದವ್ವ ||

ಹಟ್ಟಿಯಿಂದ ಹನುಮಂತನ
ದೊಡ್ಡವ್ವನಲ್ಲಿಗೆ ಕರೆಸಿತು ನೀರು ||

ಒಡತಿ ಆಳಿನ ಮನಸನೆಲ್ಲ
ಕೆಡಿಸಿತು ನೀರು ||

ಹಾಡು – ೪

ಊರಿನ ಮಾನ ಎಲ್ಲೈತಣ್ಣ
ಕುಡಿಯೊ ನೀರಲ್ಲಿ ||

ಹೆಣ್ಣಿನಮಾನ ಗಂಡಿನ ಕಣ್ಣು
ಕೆರೆಯ ನೀರಿನ ಬಣ್ಣ ||

ಜೀವ ನೀರು ಮಾನ ಪ್ರಾಣ
ಊರ ಘನತೆಣ್ಣ ||

ಹಾಡು – ೫

ದೇಸಾಯಿಗೆ ಎಂಥಾ ರೋಗವಯ್ಯ
ದೊಡ್ಡರೋಗ ದೊಡ್ಡರೋಗ ||

ಯಾತರಿಂದ ಬಂದ ರೋಗ
ಸಾವಿನ ಸಿದ್ಧತೆಗೆಲ್ಲಾ ಯೋಗ ||

ಜೀವನ ಶುದ್ಧ ಇಲ್ಲದಿದ್ದರೆ
ಬರುತೈತಣ್ಣ ದೊಡ್ಡ ರೋಗ ||

ಹಾಡು – ೬

ನೀಡಿರಮ್ಮ ದಾನ ನೀರ
ಕೇಳ ಬಂದಿಹನೀ ವಜೀರ ||

ಬಾವಿ ಬತ್ತಿ ಬಾಯಿ ಬತ್ತಿ
ಜೀವ ತಲ್ಲಣಿಸೂತೈತೆ ||

ಸಾಯಲಿರುವ ಜೀವವನ್ನು
ಚೊಂಬು ನೀರಲಿ ಉಳಿಸಲಿನ್ನು ||

ಹಾಡು – ೭

ಜೀವಕ್ಕೆ ಜಲಬೇಕು
ಜಲದೊಳಗೆ ಜೀವವುಂಟು ||

ದೇಸಾಯ ಜೀವ ಎಂಬೋದು
ಊರು ನೀಡಿದ ಧರ್ಮ ||

ಮಾಡಿದ್ದ ಉಣ್ಣುತೀಯ ತಮ್ಮ
ತಿಳೀಯಿದುವೆ ಬದುಕ ಮರ್ಮ ||

ಹಾಡು – ೮

ಬಾವಿ ಬತ್ತಿದರೇನಣ್ಣಾ
ಭೂಮಿ ಬಂಜೆಯಲ್ಲ ||

ಕರೆಯ ಆಳದಿ ತೋಡಣ್ಣ
ನೀರ ನೆಲೆಯ ನೋಡಣ್ಣ ||

ಬಿದ್ದ ಮಳೆಯ ನೀರನ್ನು
ಕೆರೆಯಲಿ ತಡೆಯಣ್ಣ ||

ಹಾಡು – ೯

ನೀರಿನ ನಾಯಕನೊ
ನಮ್ಮ ವಜೀರ್‌ಸಾಬನೊ ||

ಕೆರೆ ಹೂಳೆತ್ತಿಸಿ ನೀರನಿಂಗಿಸಿ
ಬಾವಿ ಜಲವನು ಬರಿಸಿದನೊ ||

ಮಳೆಯ ಬೆಳೆಯನು ಬೆಳೆಸಿದನೊ
ಊರಿನ ಬರವಾ ಮುಗಿಸಿದನೊ ||

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...