Home / ಕವನ / ಕವಿತೆ / ಜೀತದ ತೊಟ್ಟಿಲು (ಬೀದಿ ನಾಟಕದ ಹಾಡು)

ಜೀತದ ತೊಟ್ಟಿಲು (ಬೀದಿ ನಾಟಕದ ಹಾಡು)

ಕತೆಯಾ ಕೇಳಿರಣ್ಣ
ಕಲ್ಲು ಮನಸಿನ
ಮುಳ್ಳು ಜನಗಳು
ಹೂವು ಕೊಲ್ಲುವಂಥ ||

ಅಲ್ಪನ ಐಶ್ವರ್ಯ
ಮಾಡುವ ಆಶ್ಚರ್ಯ
ಎತ್ತ ನೋಡಿದರೂ
ಕೊಲ್ಲುವ ಕೊಲ್ಲುವ ||

ಬದುಕೆಲ್ಲ ಬಂಡೆಯು
ಹಸಿವು ರಕ್ಕಸಿಯು
ಎಣಿಸಿದ ದುಡ್ಡೆಲ್ಲ
ಬೆವರಿನ ಹನಿಯು ||

ಹಾಡು – ೨

ಜೀತದ ತೊಟ್ಟಿಲಲಿ
ಸಾವಿನ ಜೋಕಾಲಿ
ತೂಗು ನಿಲ್ಲಿಸುವ
ಧೀರರ್‍ಯಾರಿಹರೊ ||

ಹುಟ್ಟಿದ ದಿನ ಬಂತು
ಬದುಕುವುದೆಂಗಣ್ಣ
ಸಾಲದ ಈ ಬಾಧೆ
ಬಿಡಿಸುವುದೆಂಗಣ್ಣ ||

ಸುತ್ತಲು ಭರವಸೆ
ಭಾಷಣಗಳಲಿ
ಮುತ್ತಿದೆ ಬಂಧನ
ಸಾಲದ ಹೆಸರಲಿ ||

ಹಾಡು – ೩

ದೇಶೋದ್ಧಾರದ ಮಾತು
ನಮ್ಮನೆಲ್ಲಾ ಮರೆತು
ಧರ್ಮದ ಚರ್ಪು ಹಂಚಿ
ಕಾಲ ಸರಿಯಿತು ಮಿಂಚಿ ||

ನಿಮ್ಮ ಪಾಪದ ಬೆಳೆಯು
ನಮ್ಮನ್ನೀಗೆ ಸಾಕಿದೆ
ಮಿಗಿಲು ನಿಮಗೂ ಕೂಡ
ನಮ್ಮಂಥವರೆ ಬೇಕಿದೆ ||

ಎಲ್ಲಿ ಹೋಯಿತಣ್ಣ
ದಯೆಯಾ ನಿಮ್ಮ ಧರ್ಮ
ಎಲ್ಲಿ ಹೂತಿರಣ್ಣ
ಗಯೆಯಾ ನಿಮ್ಮ ಧಮ್ಮ ||

ಹಾಡು – ೪

ಅಟ್ಟಹಾಸವೊ ಅಣ್ಣ
ದುಡ್ಡುಳ್ಳೋರ ಬಣ್ಣ
ಯಡ್ಡರ ಮಾಡಿ ಬಡವರ
ಬಿದ್ದೆದ್ದು ನಗುತಾರಲ್ಲೊ ||

ಹಸಿವೀನ ನೋವಿಗೆ
ಅಪಹಾಸ್ಯ ಮಾಡುತಾರೊ
ತಿನ್ನೊ ಅನ್ನಕೆ ಬದಲು
ಮಾತು ಪೋಣಿಸುತಾರೊ ||

ದುಡ್ಡು ಗಂಟಿನ ಮಹಿಮೆ
ಕೆಟ್ಟದ್ದೊ ಬದುಕಿಗೆ
ಬಡವರ ಜೀವಾವ
ಸುಲಿತೈತೊ ತಣ್ಣಾಗೆ ||

ಹಾಡು – ೫

ದಡ್ಡರು ದುಡಿತಾರೆ
ಕೇಳಣ್ಣಾ ಕೇಳೊ
ಬುದ್ದಿವಂತರೆಲ್ಲಾ
ದುಡ್ಡು ಎಣಿಸುತ್ತಾರೆ ||

ನಿನ್ನ ಬೆವರು ರಕ್ತ ಬಸಿದು
ಮಹಲು ಕಟ್ಟಿ ಮೆರೆದು
ನಾಯಿ ಸಾಕ್ತಾರೆ ಮೋಜಿಗೆ
ಹಿಡಿ ಅನ್ನ ಕೊಡದ ನೀಚರು ||

ದುಡಿದುಡಿದು ಸತ್ತೆ ನೀನು
ನಿನ್ನ ಸಮಾಧಿ ಮೇಲೆ
ಗುಲಾಬಿಯನ್ನ ಬೆಳಿತಾರೆ
ಮತ್ತೆ ಮೂಸಿ ನೋಡುತಾರೆ ||

ಹಾಡು – ೬

ಒಂದೆಡೆ ಆದರೆ ಗಾಯ
ಮನಸಿಗೆಲ್ಲ ನೋವು
ಯೋಗ್ಯ ದುಡಿಮೆ ಇಲ್ಲದಿರೆ
ಬದುಕೆಲ್ಲ ಸಾವು ||

ಬಡತನದ ಬಸಿರಿಗೆ
ಕೋಟಿಗಟ್ಟಲೆ ತತ್ತಿಗಳು
ಒಂದಕೊಂದು ಬೆಳೆದು
ನೆಮ್ಮದಿಯ ಕೊಂದವು ||

ಕೊರೆವ ಚಳಿಯಲ್ಲಿ
ಚಿಂದಿ ಹೊದ್ದಂತೆ
ಬಡತನದ ದುಡಿಮೆ
ಏನಿದು ನಿನ್ನ ಮಹಿಮೆ ||

ಹಾಡು – ೭

ದುಡ್ಡುಳ್ಳ ಧಿಮಾಕು
ಮಾಡುತ್ತೆ ಶೋಕಿ
ಎಲ್ಲದನು ತಿನ್ನಬೇಕು
ಯಾವುದಿಲ್ಲ ಬಾಕಿ ||

ಹಣ್ಣೆಂದು ತಿಳಿದರೊ
ಹೆಣ್ಣುಗಳನೆಲ್ಲ
ಹೊನ್ನೆಂದು ತಿಳಿದರೊ
ಅಣ್ಣ ಮಣ್ಣನೆಲ್ಲ ||

ಅಪ್ಪನ ಪಾಪದ ಶಾಪ
ಮಗನ ತಲೆಗೆ
ಇಬ್ಬರೂ ನಿಂಥರಲ್ಲ
ಬದುಕಾ ಕೊಲೆಗೆ ||

ಹಾಡು – ೮

ಎಲ್ಲಿ ಕೊನೆಯಣ್ಣ
ಜೀತದ ಹಿಡಿತಕ್ಕೆ
ಎಲ್ಲಿ ನೆಲೆಯಣ್ಣ
ಬಂಧಿತ ಜೀವಕ್ಕೆ ||

ಹೊಡೆದೊಡೆದು ಬಳಲಿದರೂ
ಬಂಡೆ ಸವೆಯಲಿಲ್ಲ
ಯುಗಯುಗ ಕಳೆದರೂ
ಹೊಟ್ಟೆಯು ತುಂಬಲಿಲ್ಲ ||

ನರಕವಲ್ಲವೆ ಇದುವೆ
ನಿತ್ಯಾದ ಹಿಂಸೆ
ಜೀವನವೆ ಬೇಡೆಂದು
ಹಾರಿತು ಹಂಸೆ ||

ಮಂಗಳದ ಈ ಸುದಿನ
ಮದುರವಾಗಲಿ
ನಿಮ್ಮೊಲುಮೆ ಈ ಮನೆಗೆ
ನಂದಾ ದೀಪವಾಗಲಿ ||

ಹಾಡು – ೯

ಕಾಲಿಗೆ ಹಾಕಿ ಬೇಡಿಗಳಾ
ಕಲ್ಲು ಹೊಡಿಸೊ ಹನುಮಣ್ಣ
ಮಾಡಿದ ಸಾಲಕೆ ಜೀತದಲಿ
ದಿನವೂ ನರಳುವ ತಮ್ಮಣ್ಣ ||

ಕೊಟ್ಟ ದುಡ್ಡಿಗೆ ಬಡ್ಡಿ ಬೆಳೆದು
ಬಿಡುಗಡೆ ಆಸೆಯ ತೊರೆದು
ಹೊಡೆದೇ ಹೊಡೆಯುತಾರೊ
ಕಲ್ಲು ಕಲ್ಲಿಗೆ ಸುತ್ತಿಗೆಯಿಂದ ||

ಪುಡಿಯಾಗುತೈತಿ ಅಣ್ಣಾ ಬದುಕು
ಹಿಡಿಗಲ್ಲು ಬೇಬಿ ಜಲ್ಲಿಯಂತೆ
ಬೆವರ ಕುಡಿದು ನಲಿಯುತಾರೆ
ಮದದಿ ಮೋಜು ಮಾಡುತಾರೆ ||

ಹಾಡು – ೧೦

ಜೀತದ ತೊಟ್ಟಿಲಲಿ
ನರಕುರಿಗಳ ಬಲಿ
ಸುಖ ಜೋಕಾಲಿಯಲಿ
ನರಕ ಹಿಂಸಾ ಬಲೆ ||

*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...