Home / ಕವನ / ಕವಿತೆ / ಜೀತದ ತೊಟ್ಟಿಲು (ಬೀದಿ ನಾಟಕದ ಹಾಡು)

ಜೀತದ ತೊಟ್ಟಿಲು (ಬೀದಿ ನಾಟಕದ ಹಾಡು)

ಕತೆಯಾ ಕೇಳಿರಣ್ಣ
ಕಲ್ಲು ಮನಸಿನ
ಮುಳ್ಳು ಜನಗಳು
ಹೂವು ಕೊಲ್ಲುವಂಥ ||

ಅಲ್ಪನ ಐಶ್ವರ್ಯ
ಮಾಡುವ ಆಶ್ಚರ್ಯ
ಎತ್ತ ನೋಡಿದರೂ
ಕೊಲ್ಲುವ ಕೊಲ್ಲುವ ||

ಬದುಕೆಲ್ಲ ಬಂಡೆಯು
ಹಸಿವು ರಕ್ಕಸಿಯು
ಎಣಿಸಿದ ದುಡ್ಡೆಲ್ಲ
ಬೆವರಿನ ಹನಿಯು ||

ಹಾಡು – ೨

ಜೀತದ ತೊಟ್ಟಿಲಲಿ
ಸಾವಿನ ಜೋಕಾಲಿ
ತೂಗು ನಿಲ್ಲಿಸುವ
ಧೀರರ್‍ಯಾರಿಹರೊ ||

ಹುಟ್ಟಿದ ದಿನ ಬಂತು
ಬದುಕುವುದೆಂಗಣ್ಣ
ಸಾಲದ ಈ ಬಾಧೆ
ಬಿಡಿಸುವುದೆಂಗಣ್ಣ ||

ಸುತ್ತಲು ಭರವಸೆ
ಭಾಷಣಗಳಲಿ
ಮುತ್ತಿದೆ ಬಂಧನ
ಸಾಲದ ಹೆಸರಲಿ ||

ಹಾಡು – ೩

ದೇಶೋದ್ಧಾರದ ಮಾತು
ನಮ್ಮನೆಲ್ಲಾ ಮರೆತು
ಧರ್ಮದ ಚರ್ಪು ಹಂಚಿ
ಕಾಲ ಸರಿಯಿತು ಮಿಂಚಿ ||

ನಿಮ್ಮ ಪಾಪದ ಬೆಳೆಯು
ನಮ್ಮನ್ನೀಗೆ ಸಾಕಿದೆ
ಮಿಗಿಲು ನಿಮಗೂ ಕೂಡ
ನಮ್ಮಂಥವರೆ ಬೇಕಿದೆ ||

ಎಲ್ಲಿ ಹೋಯಿತಣ್ಣ
ದಯೆಯಾ ನಿಮ್ಮ ಧರ್ಮ
ಎಲ್ಲಿ ಹೂತಿರಣ್ಣ
ಗಯೆಯಾ ನಿಮ್ಮ ಧಮ್ಮ ||

ಹಾಡು – ೪

ಅಟ್ಟಹಾಸವೊ ಅಣ್ಣ
ದುಡ್ಡುಳ್ಳೋರ ಬಣ್ಣ
ಯಡ್ಡರ ಮಾಡಿ ಬಡವರ
ಬಿದ್ದೆದ್ದು ನಗುತಾರಲ್ಲೊ ||

ಹಸಿವೀನ ನೋವಿಗೆ
ಅಪಹಾಸ್ಯ ಮಾಡುತಾರೊ
ತಿನ್ನೊ ಅನ್ನಕೆ ಬದಲು
ಮಾತು ಪೋಣಿಸುತಾರೊ ||

ದುಡ್ಡು ಗಂಟಿನ ಮಹಿಮೆ
ಕೆಟ್ಟದ್ದೊ ಬದುಕಿಗೆ
ಬಡವರ ಜೀವಾವ
ಸುಲಿತೈತೊ ತಣ್ಣಾಗೆ ||

ಹಾಡು – ೫

ದಡ್ಡರು ದುಡಿತಾರೆ
ಕೇಳಣ್ಣಾ ಕೇಳೊ
ಬುದ್ದಿವಂತರೆಲ್ಲಾ
ದುಡ್ಡು ಎಣಿಸುತ್ತಾರೆ ||

ನಿನ್ನ ಬೆವರು ರಕ್ತ ಬಸಿದು
ಮಹಲು ಕಟ್ಟಿ ಮೆರೆದು
ನಾಯಿ ಸಾಕ್ತಾರೆ ಮೋಜಿಗೆ
ಹಿಡಿ ಅನ್ನ ಕೊಡದ ನೀಚರು ||

ದುಡಿದುಡಿದು ಸತ್ತೆ ನೀನು
ನಿನ್ನ ಸಮಾಧಿ ಮೇಲೆ
ಗುಲಾಬಿಯನ್ನ ಬೆಳಿತಾರೆ
ಮತ್ತೆ ಮೂಸಿ ನೋಡುತಾರೆ ||

ಹಾಡು – ೬

ಒಂದೆಡೆ ಆದರೆ ಗಾಯ
ಮನಸಿಗೆಲ್ಲ ನೋವು
ಯೋಗ್ಯ ದುಡಿಮೆ ಇಲ್ಲದಿರೆ
ಬದುಕೆಲ್ಲ ಸಾವು ||

ಬಡತನದ ಬಸಿರಿಗೆ
ಕೋಟಿಗಟ್ಟಲೆ ತತ್ತಿಗಳು
ಒಂದಕೊಂದು ಬೆಳೆದು
ನೆಮ್ಮದಿಯ ಕೊಂದವು ||

ಕೊರೆವ ಚಳಿಯಲ್ಲಿ
ಚಿಂದಿ ಹೊದ್ದಂತೆ
ಬಡತನದ ದುಡಿಮೆ
ಏನಿದು ನಿನ್ನ ಮಹಿಮೆ ||

ಹಾಡು – ೭

ದುಡ್ಡುಳ್ಳ ಧಿಮಾಕು
ಮಾಡುತ್ತೆ ಶೋಕಿ
ಎಲ್ಲದನು ತಿನ್ನಬೇಕು
ಯಾವುದಿಲ್ಲ ಬಾಕಿ ||

ಹಣ್ಣೆಂದು ತಿಳಿದರೊ
ಹೆಣ್ಣುಗಳನೆಲ್ಲ
ಹೊನ್ನೆಂದು ತಿಳಿದರೊ
ಅಣ್ಣ ಮಣ್ಣನೆಲ್ಲ ||

ಅಪ್ಪನ ಪಾಪದ ಶಾಪ
ಮಗನ ತಲೆಗೆ
ಇಬ್ಬರೂ ನಿಂಥರಲ್ಲ
ಬದುಕಾ ಕೊಲೆಗೆ ||

ಹಾಡು – ೮

ಎಲ್ಲಿ ಕೊನೆಯಣ್ಣ
ಜೀತದ ಹಿಡಿತಕ್ಕೆ
ಎಲ್ಲಿ ನೆಲೆಯಣ್ಣ
ಬಂಧಿತ ಜೀವಕ್ಕೆ ||

ಹೊಡೆದೊಡೆದು ಬಳಲಿದರೂ
ಬಂಡೆ ಸವೆಯಲಿಲ್ಲ
ಯುಗಯುಗ ಕಳೆದರೂ
ಹೊಟ್ಟೆಯು ತುಂಬಲಿಲ್ಲ ||

ನರಕವಲ್ಲವೆ ಇದುವೆ
ನಿತ್ಯಾದ ಹಿಂಸೆ
ಜೀವನವೆ ಬೇಡೆಂದು
ಹಾರಿತು ಹಂಸೆ ||

ಮಂಗಳದ ಈ ಸುದಿನ
ಮದುರವಾಗಲಿ
ನಿಮ್ಮೊಲುಮೆ ಈ ಮನೆಗೆ
ನಂದಾ ದೀಪವಾಗಲಿ ||

ಹಾಡು – ೯

ಕಾಲಿಗೆ ಹಾಕಿ ಬೇಡಿಗಳಾ
ಕಲ್ಲು ಹೊಡಿಸೊ ಹನುಮಣ್ಣ
ಮಾಡಿದ ಸಾಲಕೆ ಜೀತದಲಿ
ದಿನವೂ ನರಳುವ ತಮ್ಮಣ್ಣ ||

ಕೊಟ್ಟ ದುಡ್ಡಿಗೆ ಬಡ್ಡಿ ಬೆಳೆದು
ಬಿಡುಗಡೆ ಆಸೆಯ ತೊರೆದು
ಹೊಡೆದೇ ಹೊಡೆಯುತಾರೊ
ಕಲ್ಲು ಕಲ್ಲಿಗೆ ಸುತ್ತಿಗೆಯಿಂದ ||

ಪುಡಿಯಾಗುತೈತಿ ಅಣ್ಣಾ ಬದುಕು
ಹಿಡಿಗಲ್ಲು ಬೇಬಿ ಜಲ್ಲಿಯಂತೆ
ಬೆವರ ಕುಡಿದು ನಲಿಯುತಾರೆ
ಮದದಿ ಮೋಜು ಮಾಡುತಾರೆ ||

ಹಾಡು – ೧೦

ಜೀತದ ತೊಟ್ಟಿಲಲಿ
ನರಕುರಿಗಳ ಬಲಿ
ಸುಖ ಜೋಕಾಲಿಯಲಿ
ನರಕ ಹಿಂಸಾ ಬಲೆ ||

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...