Home / ಕವನ / ಕವಿತೆ / ಭಿನ್ನ ಭೇದವ ಮಾಡಬ್ಯಾಡಿರಿ (ಬೀದಿ ನಾಟಕದ ಹಾಡು)

ಭಿನ್ನ ಭೇದವ ಮಾಡಬ್ಯಾಡಿರಿ (ಬೀದಿ ನಾಟಕದ ಹಾಡು)

ಹಾಡು – ೧

ಹೇಳಿರಣ್ಣ ಹೇಳಿರೊ
ಬುದ್ಧಿವಂತ ಜನಗಳೆ
ಕೇಳಿರಣ್ಣ ಕೇಳಿರೊ
ಮನಸುಳ್ಳ ಜನಗಳೆ ||

ಹೇಳಿರಣ್ಣ ಹೇಳಿರೊ
ಹೆಣ್ಣೆಚ್ಚೊ ಗಂಡಚ್ಚೊ ||

ಹೆಣ್ಣೆಚ್ಚು ಎಂಬುವರು
ಕಾರಣವ ತಿಳಿಯಿರೊ
ಗಂಡೆಚ್ಚು ಎಂಬುವರು
ಕಾರಣವ ಹೇಳಿರೊ ||

ಮಗುವಾಗಿ ಹುಟ್ಟಿದ್ದು
ಹೆಣ್ಣೇಗೆ ಆಯಿತು ?
ಮಗುವಾಗಿ ಹುಟ್ಟಿದ್ದು
ಗಂಡ್ಹೇಗೆ ಆಯಿತು? ||

ಹೆಣ್ಣೋಗಿ ಗಂಡ್ಹೋಗಿ
ಮಗುವಾಗೋದ್ಯಾವಾಗ
ಮನುಷ್ಯನ ಮನಸೋಗಿ
ಮಗು ಮನಸ್ಯಾವಾಗ ||

ಹಾಡು – ೨

ಕೇಳ್ರಯ್ಯ ಗಂಡುಸ್ರೆ
ಕೇಳ್ರಯ್ಯ ||

ಹೆಣ್ಣಿನ ಮಾತ್ವವ
ಕೇಳ್ರಯ್ಯ ||

ನಿಮಿಗೆ ಜನ್ಮ ಕೊಟ್ಟವಳು | ಹೆಣ್ಣಲ್ಲವೆ
ಹೆತ್ತು ಹೊತ್ತು ಸಾಕಿದವಳು | ಹೆಣ್ಣಲ್ಲವೆ
ಎದೆ ಹಾಲು ನಿಡಿದವಳು | ಹೆಣ್ಣಲ್ಲವೆ
ಕೈತುತ್ತು ತಿನಿಸಿದವಳು | ಹೆಣ್ಣಲ್ಲವೆ
ತಾಯಾಗಿ ಮರುಗಿದವಳು | ಹೆಣ್ಣಲ್ಲವೆ
ಅಕ್ಕ ತಂಗಿಯಾದವಳು | ಹೆಣ್ಣಲ್ಲವೆ
ಅತ್ತೆ ಸೊಸೆಯಾದವಳು | ಹೆಣ್ಣಲ್ಲವೆ
ಜೀವನ ಸಂಗಾತಿಯಾದವಳು | ಹೆಣ್ಣಲ್ಲವೆ
ಅತ್ತು ಮರುಗುದಿವಳು | ಹೆಣ್ಣಲ್ಲವೆ
ಮಮತೆಯ ಮಡಿಲಾದವಳು | ಹೆಣ್ಣಲ್ಲವೆ
ಕೇಳ್ರಯ್ಯ ಗಂಡುಸ್ರೆ
ಕೇಳ್ರಯ್ಯ ||
ಹೆಣ್ಣಿನ ಮಾತ್ವವ
ಕೇಳ್ರಯ್ಯ ||

ಹಾಡು – ೩

ಮಕ್ಕಳು ನಮ್ಮ ಮಕ್ಕಳಣ್ಣ
ಗಂಡು ಹೆಣ್ಣು ಅಂತೆಲ್ಲ
ಭಿನ್ನ ಭೇದ ತರವಲ್ಲಣ್ಣ ||

ಗಂಡಾಗಿ ಹೆಚ್ಚೇನು
ಹೆಣ್ಣಾಗಿ ಕೀಳೇನು
ನಮ್ಮ ಮನದ ವಿಕಾರವು
ಆಗುವುದೆಂದು ನಾಶವು ||

ಹೆಣ್ಣೆಂದು ಅಬಲೆಯಳು
ಎಂಬುದೇ ಅಜ್ಞಾನ
ಏನೆಲ್ಲ ಸಾಧಿಸಲುಳು
ಬೇಕು ಸಮಾನತೆಯು ||

ಹಾಡು – ೪

ಹೆಣ್ಣೆಂಬುದು ಕೇಳಣ್ಣ
ಗಂಡು ಮಾಡಿದ ರಾಜಕೀಯ ||

ವಿದ್ಯೆ ಕೊಡಲಿಲ್ಲ
ಬುದ್ಧಿ ಹೇಳಿಲಿಲ್ಲ
ಅವಳ ಬುದ್ಧಿಗೆ ಮೊದಲು
ಬೆಲೆಯ ಕೊಡಲಿಲ್ಲ ||

ಮಾತಿಗೆ ಮುನ್ನ ಬಾಯಿ ಮುಚ್ಚಿಸಿ
ತಲೆ ತುಂಬಾ ಚಿಂತೆ ಹೆಚ್ಚಿಸಿ
ಬಲವಿದ್ದೂ ಹೀನಳ ಮಾಡಿ
ಸುತ್ತಲು ತೊಡಿಸಿ ಬೇಡಿ ||

ಮೊದಲ ಸ್ಥಾನಕೆ ಬರದಂತೆ
ಸದಾ ಮಾಡುತ ಕುತಂತ್ರ
ಜಗದಲೆಲ್ಲ ಎರಡನೆ ದರ್ಜೆಗೆ
ಬಾಳುವಂತಾಯಿತೆ ಹೆಣ್ಣಿಗೆ ||

ಹಾಡು – ೫

ಭಿನ್ನ ಭೇದವ ಮಾಡಬ್ಯಾಡಿರಿ
ಗಂಡೆಚ್ಚೊ ಹೆಣ್ಣೆಚ್ಚೊ ಅನ್ನಬ್ಯಾಡಿರಿ ||

ಗಂಡಿಗೆ ಹೆಣ್ಣು ಹೆಣ್ಣಿಗೆ ಗಂಡು
ಬಿಟ್ಟಿರದ ಬಂಧಾನ ನಡಕಂಡು
ಬಂದೈತೆ ಅನಂತ ರಗಳೆ ಯಾಕಂತ
ಚನ್ನಾಗಿ ತಿಳಿ ನೀನು ಮತಿವಂತ ||

ರೂಪಕೆ ಸೋಲಬ್ಯಾಡ
ಗುಣವಾ ಮರಿಬ್ಯಾಡ
ಹೆಣ್ಣು ನಿನ್ನ ಸುಖದಾ
ಕಣ್ಣಾ ಗೊಂಬೇನು ||

ದುಡ್ಡೀನ ಕಾಲಕೆ ದೊಡ್ಡವನಾಗಿ
ಬಡ್ಡಿಯ ಕಾಲಕೆ ಗಿಡ್ಡವನಾಗಿ
ಹೆಣ್ಣಿನ ಪ್ರೀತಿಯೆ ಚಿಗುರಾಗಿ
ಬೆಳೆಯುವೆ ಹೆಮ್ಮರವಾಗಿ ||

*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...