ಅಂತರಗಟ್ಟೆವ್ವ (ಬೀದಿ ನಾಟಕದ ಹಾಡು)

ಮೇಳ: ಸಿರಿ ಅಂತರಗಟ್ಟೆ ಮಾರಿ ಎನಿಸಿದವಳೆ
ನೆಲೆ ನಿಂತು ಜೀವಗಳ ಕಾದವಳೆ ||

ಕಂದಗಳ ಕಾದವಳೆ
ಜೀವಿನ ಮರದವಳೆ
ಕೇಳಿದ್ದ ಕೊಟ್ಟವಳೆ
ಬೇಡಿದ್ದ ಬಿಟ್ಟವಳೆ ||

ಸತ್ಯವ್ವ ಮುತ್ಯವ್ವ ಕರಿಕಾರಲರಮ್ಮ
ಬೇವ ತಿಂದು ಬೇವನುಟ್ಟಮ್ಮ
ಸಿಡುಬ ನುಂಗಿ ಕಂದಗಳ ಕಾದವಳೆ
ಪ್ಲೇಗಮ್ಮನನ್ನು ಬಿಡದೆ ನುಂಗಿದವಳೆ ||

ಜೋಗಿಯ ಪ್ರಸಂಗ

ಮೇಳ:     ತಾಯೆ ನೀ ಯಾರೆ
ಅಂತರ್‍ಗಟ್ಟೆ ಮಾರಿ ||

ಕೇಡು ಬಯಸಿದವಗೆ
ಕೇಡು ನೀಡಿದೆ ಕೊಡುಗೆ
ಒಳಿತು ಬಯಸಿದವಗೆ
ಕೊಟ್ಟೆ ಬಯಸಿದ ಹಾಗೆ ||

ನಿಂತಲ್ಲೆ ನಿಂತವಳೆ
ಕುಂತಲ್ಲೆ ಕುಂತವಳೆ
ಬ್ರಹ್ಮಾಂಡ ತಿಳಿದವಳೆ
ಸಕಲವಾ ನಡೆದವಳೆ

ರೂಪದೊಳು ರೂಪವಿಲ್ಲ
ಕಾಯದೊಳು ಕಾಯವಿಲ್ಲ
ಇಲ್ಲವೆಂದರೆ ಐದೀ
ಐದಿಯೆಂದರೆ ಇಲ್ಲ ||

ಹೆಬ್ಬೂರು ನಿಗರು ಶಿಖೆಯ ಗಣಂಗು ಪ್ರಸಂಗ

ಮೇಳ:    ಮಾಟಗಾತಿ ಮಾಯಗಾತಿ
ಏನೆ ನಿನ್ನ ಕೀರುತಿ ||

ಮಾಯಾವ ಗೆದ್ದವಳೆ
ಗೆಲುವನ್ನೆ ಹೊದ್ದವಳೆ
ಮೀಯ ಬಂದವರಿಗೆಲ್ಲ
ಹಿಂಗು ತಿನ್ನಿಸಿದವಳೆ ||

ಗರಿ ನಿರಿಗೆ ಸೆರಗ ತಾಯಿ
ಸೋಜಿಗವೆ ಮಹಾಮಾಯಿ
ಪಿಂಡಾಂಡ ಬ್ರಹ್ಮಾಂಡವೆಲ್ಲ
ನಿನ್ನ ಸೀರೆಯಾಯಿತಲ್ಲ ||

ತ್ರಿಮೂರ್ತಿಗಳ ತ್ರಿಶೂಲ ಮಾಡಿ
ದಿಕ್ಕು ದೆಸೆನೆಲ್ಲ ಪಟ್ಟಣ ಮಾಡಿ
ಅಂತರದ ನಿನ್ನ ಕಟ್ಟೆಯ ಒಳಗೆ
ಜೀವ ಕಾಯುವ ಕಾಯಕದೊಳಗೆ ||

ಮೇಳ:    ಕಿಲಗುಡವ ಹಸಿಗೂಸ
ನುಂಗೀದನಲ್ಲ
ಕೂಸಾದ ಅಮ್ಮನ್ನ
ನುಂಗೀದನಲ್ಲ ||

ಹೊಟ್ಟೇಲಿಂದ ತಾಯಿ
ಬಿಳಲಾದಳಲ್ಲ
ಬೆಳಬೆಳೆದು ಮಾಯಾವಿ
ಮರವಾದಳಲ್ಲ ||

ಕಂಚಿ ವೀರನ ಪ್ರಸಂಗ

ಮೇಳ:     ಕಂಚಿಯ ವೀರನೊಬ್ಬ
ಅಂತರಗಟ್ಟೆವ್ವನ ಸುದ್ದಿಕೇಳಿ
ಗೆಲ್ಲುತ್ತೇನಂತ ಬಂದಾನೆ
ತಂದನ್ನಾ ತಾನ ||

ವೀರಾನ ವೇಸ ಧರಿಸಿ
ಬರುತಾನೆ ಕಂಚಿ ಕಡಿಯಿಂದ
ತಂದನ್ನಾ ತಾನ ||

ಮೇಳ :    ಅವ್ವಾ ತಾಯೆ
ಅಂತರಗಟ್ಟೆವ್ವ ||

ಕಾಯಿ ಹಣ್ಣು ಮಾಡಿದವಳೆ
ಕಲ್ಲು ನೀರು ಮಾಡಿದವಳೆ
ಬೀಜ ವೃಕ್ಷ ಮಾಡಿದವಳೆ ||

ಮೂರು ಲೋಕ ಬ್ರಹ್ಮಾಂಡವನೆ
ಸೀರೆ ಮಾಡಿ ಸುತ್ತಿ ನೆರಿಗೇಲಿ
ನೆಲದ ಕಂದಗಳ ಕಾದವಳೆ ||

ತಂದನ್ನೊ ತಾನೊ
ತಾನಂದಾನೊ ತಾನೊ ||

ಬಾಳ ಹಸನು ಮಾಡಲು ಕುಂತು
ಕಂದಗಳಿಗೆ ಜೀವ ಹಿಡಿದು ಕುಂತು
ಜಗದ ಜುಟ್ಟ ನಡುಗಿಸಿದವಳೆ
ಬಂದ ಮಕ್ಕಳನ್ನೆಲ್ಲ ಕಾಪಾಡಿದವಳೆ ||

ಹಂಸದ ಮೇಲಿನ ಪದ

ಹುಡುಕಿ ಬಂದಾ ಹಂಸೆ
ಎತ್ತ ಹಾರಿತು ನಂಬಿಸಿ ||

ಸೆಳೆದಿತ್ತು ಕಣ್ಣಮಿಂಚ
ಹಾಕಿ ಪ್ರೀತಿಯ ಹೊಂಚ
ಕರೆದೊಯ್ಯಲು ಮುಗಿಲತ್ತ
ಕಾಣದೆ ಹೋಯಿತೆತ್ತ ||

ಅಮೃತವ ಕುಡಿದ ಹಂಸೆ
ಬಿಟ್ಟು ಮಾನವ ಹಿಂಸೆ
ನಲಿನಲಿದು ನರಕವ
ಮಾಡಿತಲ್ಲ ಸ್ವರ್ಗವ ||

ಏಕತಾರಿಯ ಕಾಯಿ
ಹಣ್ಣಾದಂತೆ ಕಾಯ
ತಂತಿ ನಾದದ ಇಂಪು
ತತ್ವ ಗ್ಯಾನದ ತಂಪು ||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೂಜನದ ಹಾಡು
Next post ರಾಷ್ಟ್ರಪಿತ

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…