Home / ಕವನ / ಕವಿತೆ / ಪಂಚರಾತ್ರ (ತೊಗಲುಬೊಂಬೆಯಾಟ)

ಪಂಚರಾತ್ರ (ತೊಗಲುಬೊಂಬೆಯಾಟ)

ಜಗದ ಜನಶಕ್ತಿಗೆ
ನಮೋ ನಮೋ ||

ಬಣ್ಣದಾಟದ ನೆಲೆಗೆ
ನಮೋ ನಮೋ ||

ಕಲಾ ಸ್ವಾದಕನಿಗೆ
ನಮೋ ನಮೋ ||

ಕಲಾ ಪ್ರೋತ್ಸಾಹಕನಿಗೆ
ನಮೋ ನಮೋ ||

ಧನ್ಯತೆಯಿಂ ಕೈಮುಗಿವೆ
ಎನ್ನೆದುರಿನ ಜನಶಕ್ತಿಗೆ

ನಮೋ ನಮೋ ಎನ್ನುವೆ
ಎನ್ನೆದುರಿನ ಮನಶಕ್ತಿಗೆ
ನಮೋ ನಮೋ
ನಮೋ ನಮೋ
ನಮೋ ನಮೋ
ನಮೋ ನಮೋ

ಹಾಡು ೧ :     ಭಾರತವಿದು ಭಾರತ
ಜನ ಮಹಾಭಾರತ ||

ವ್ಯಾಸರಿಂ ರಚಿತ ಭಾರತ
ಕೋಟಿ ಕಿರಣ ಪ್ರಭಾತ
ಜಗವ ಕಾಣ್ವ ಬಂಧನ
ಸಕಲವೂ ನವ ದರ್ಶನ ||

ಅದರೊಂದು ತುಣುಕು
ಈ ಆಟದ ಇಣಕು
ಭಾಸನೆಂಬ ಕವಿಯು
ಸಂಸ್ಕೃತ ಪ್ರತಿಭೆಯು ||

ಅವ ಕಂಡ ಭಾರತವಿದು
ಕತೆ ವಿರಾಟ ಪರ್ವದ್ದು
ಹೆಸರಿಟ್ಟನು ಪಂಚರಾತ್ರ
ನೋಡಿ ಶಾಂತಿಯ ಪಾತ್ರ ||

ಹಾಡು ೨ :     ರಾಜಸೂಯ ಯಾಗವನು
ಮಾಡಿ ಧೀರ ದುರ್ಯೋಧನನು
ನೆರೆದರು ಸಕಲರಸರು
ಏಕಛತ್ರಾಧಿಪತ್ಯವನೊಪ್ಪಲೆಂದು ||

ಯಾಗದಲಿ ಸಂತೃಪ್ತಿ
ಭೂರಿ ಬೋಜನಗಳಾದವು
ಅರಸುಗುಳಿಯಿತು ಬಾಕಿ
ದ್ವಿಜರ ಕೊಡುಗೆ ಕಾಣಿಕೆ ||

ಹಾಡು ೩ :     ಹೇಗೆ ಹೇಳಲಿ ವತ್ಸ
ಮನದೊಳಗಣ ವ್ಯಥೆಯನು
ತಾಳಲಾರದೆ ಉಮ್ಮಳಿತ
ಲೋಚನ ಜಲಕಳಿತವನು ||

ಹಡು ೪ :     ಕೊಡುವುದು ಕೊಡುವಲ್ಲಿ
ಇಹುದು ದೊಡ್ಡತನವು
ಕೊಡದೆ ಕೊಸರಾಡಿದರೆ
ಬಹುದು ದಡ್ಡತನವು ||

ಹಾಡು ೫ :     ಪಂಚರಾತ್ರದೊಳು ತನ್ನಿ
ಪಾಂಡವರಿಹ ಕುರುಹನ್ನು
ಪಡೆಯಿರಿ ಅರ್ಧ ರಾಜ್ಯ
ಮುಕ್ತ ದಾಯಾದಿ ವ್ಯಾಜ್ಯ ||

ಹಾಡು ೬ :     ನಡೆವ ಗೋಗ್ರಹಣ
ದೊರೆ ವಿರಾಟನ ಮಾನ ಹರಣ
ಶಕುನಿ ಒಡ್ಡಿದ ತಂತ್ರ
ಭೀಷ್ಮ ದ್ರೋಣದರ ನವಮಂತ್ರ ||

ಹಾಡು ೭ :     ಕೇಳಿಗುಂಪು ಗೋವುಗಳೆ
ಗಾನದಿಂಪಿನ ಸಂಗಾತಿಗಳೆ
ಸೊಂಪು ಮೇವಿನ ಬನದಲ್ಲಿ
ಚಂದ ಮೇಯಿರಿ ಹಗಲಲ್ಲಿ ||

ನಮ್ಮದಿದುವೆ ಗೋಕುಲ
ವಿರಾಟನ ಹೈನು ಸಂಕುಲ
ಬನ್ನಿ ಮಕ್ಕಳೆ ಬನ್ನಿ ಕುಣಿಯಲು
ತುರುವ ನಗರಕೆ ಅಟ್ಟಲು ||

ಇಂದು ರಾಜನ ವರ್ಧಂತಿ
ನಮಗೆ ಉಲ್ಲಸದಾ ಪಂಕ್ತಿ
ಕುಣಿದು ಹಾಡುತ ನಲಿಯುತ
ನಮ್ಮ ನೋವನು ಮರೆಯುತ ||

ಹಾಡು ೮ :     ಇವಳೆ ಬೃಹನ್ನಳೆ
ಇವನೆ ಬೃಹನ್ನಳ ||

ಗಂಡಿನೊಳಿಹ ಹೆಣ್ಣೆ
ಹೆಣ್ಣಿನೊಳಿಹ ಗಂಡೆ
ದ್ವೈತವದ್ವೈತವಾದ
ಮಾನವ ಪ್ರತೀಕವೆ ||

ಗಿರಿಜೇಶನರ್ಧ ನಾರಿ
ಜಗದೇಕತೆ ತೋರಿ
ಗಂಡ್ಹೆಣ್ಣು ಒಟ್ಟಾಗಿ
ಇರುವುದೆ ಬದುಕಾಗಿ ||

ಒಮ್ಮುಖ ಹೆಣ್ಣು
ಇಮ್ಮುಖ ಗಂಡು
ಸೇರಿ ಎರಡೂ
ಜಗಮುಖವಾಗಿ ||

ಹಾಡು ೯ :     ತಪ್ಪಿತೊಂದು ಯುದ್ಧ
ಗೋಗ್ರಹಣ ಪ್ರಸಿದ್ಧ ||

ಶಾಂತಿ ಪ್ರತೀಕದೀ ಯುದ್ಧ
ಅಜ್ಞಾತವಾಸದಲ್ಲಿದ್ದ
ಪಾಂಡವ ಗುರ್ತೀಗೆ ಸಿದ್ಧ
ಬೃಹನ್ನಳೆಯೇ ಗೆದ್ದ ||

ಕಾಲು ಕರೆದ ಯುದ್ಧ
ಮದುವೆಗಾಗಿ ಸಿದ್ಧ
ಗೋ ಸಂಕುಲವೆಲ್ಲ
ರಕ್ಷಿತವೊ ರಕ್ಷಿತ ||

ಹಾಡು ೧೦ :     ಕಾಲು ಕೆರೆದ ಯುದ್ಧ
ಕೌರವರಿಗೊ ಅಪದ್ಧ ||

ಗೋಗ್ರಹಣಕೆ ಹೋಗಿ
ಗಣ್ಯರಿಗೆ ಭಂಗವಾಗಿ
ಚಿಂತೆಯಲ್ಲಿ ಮುಳುಗಿ
ಸುಮಾರ್ಗ ಇಲ್ಲವಾಗಿ ||

ಅತಿರಥರಿಗೆಲ್ಲಾ
ಮಾನ ಹೋದವಲ್ಲ
ತಪ್ಪಿ ಯುದ್ಧ ಘೋರ
ಸಿಕ್ಕಿಬಿದ್ದ ಕುಮಾರ ||

ಹಾಡು ೧೧ :     ಧರ್ಮದ ಶ್ರೇಷ್ಠತೆ ಶಾಂತಿ
ಯುದ್ಧದ ಬೀಜ ಅಶಾಂತಿ ||

ಕೊಂದು ಕೊಲಿಸಿದ ಮಾನವ
ಆದನಯ್ಯೋ ಛೆ ದಾನವ
ಯುದ್ಧ ಮಾಡಿ ಗೆದ್ದವನು
ಸೋತು ದುಃಖವ ತಿಂದನು ||

ಸಾವನು ಬಯಸಿದ ಬಸಿರು
ಸಾಧಿಸಲಿ ಶಾಂತಿಯ ಹಸಿರು
ಯುದ್ಧ ತಪ್ಪಿಸದ ಕೀರ್ತಿಯು
ನವ ಜೀವನದ ಮದುವೆಯು ||

ಕೊಡುವ ಭಾಗವ ಕೊಟ್ಟರೆ
ಉಳಿವುದೇನದು ಕೆಟ್ಟರೆ
ಪ್ರೀತಿ ಮಮತೆ ಅಕ್ಕರೆ
ಬದುಕಿಗೆ ಜೀವ ಇವಿರೆ ||

*****

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...