ಪಂಚರಾತ್ರ (ತೊಗಲುಬೊಂಬೆಯಾಟ)

ಜಗದ ಜನಶಕ್ತಿಗೆ
ನಮೋ ನಮೋ ||

ಬಣ್ಣದಾಟದ ನೆಲೆಗೆ
ನಮೋ ನಮೋ ||

ಕಲಾ ಸ್ವಾದಕನಿಗೆ
ನಮೋ ನಮೋ ||

ಕಲಾ ಪ್ರೋತ್ಸಾಹಕನಿಗೆ
ನಮೋ ನಮೋ ||

ಧನ್ಯತೆಯಿಂ ಕೈಮುಗಿವೆ
ಎನ್ನೆದುರಿನ ಜನಶಕ್ತಿಗೆ

ನಮೋ ನಮೋ ಎನ್ನುವೆ
ಎನ್ನೆದುರಿನ ಮನಶಕ್ತಿಗೆ
ನಮೋ ನಮೋ
ನಮೋ ನಮೋ
ನಮೋ ನಮೋ
ನಮೋ ನಮೋ

ಹಾಡು ೧ :     ಭಾರತವಿದು ಭಾರತ
ಜನ ಮಹಾಭಾರತ ||

ವ್ಯಾಸರಿಂ ರಚಿತ ಭಾರತ
ಕೋಟಿ ಕಿರಣ ಪ್ರಭಾತ
ಜಗವ ಕಾಣ್ವ ಬಂಧನ
ಸಕಲವೂ ನವ ದರ್ಶನ ||

ಅದರೊಂದು ತುಣುಕು
ಈ ಆಟದ ಇಣಕು
ಭಾಸನೆಂಬ ಕವಿಯು
ಸಂಸ್ಕೃತ ಪ್ರತಿಭೆಯು ||

ಅವ ಕಂಡ ಭಾರತವಿದು
ಕತೆ ವಿರಾಟ ಪರ್ವದ್ದು
ಹೆಸರಿಟ್ಟನು ಪಂಚರಾತ್ರ
ನೋಡಿ ಶಾಂತಿಯ ಪಾತ್ರ ||

ಹಾಡು ೨ :     ರಾಜಸೂಯ ಯಾಗವನು
ಮಾಡಿ ಧೀರ ದುರ್ಯೋಧನನು
ನೆರೆದರು ಸಕಲರಸರು
ಏಕಛತ್ರಾಧಿಪತ್ಯವನೊಪ್ಪಲೆಂದು ||

ಯಾಗದಲಿ ಸಂತೃಪ್ತಿ
ಭೂರಿ ಬೋಜನಗಳಾದವು
ಅರಸುಗುಳಿಯಿತು ಬಾಕಿ
ದ್ವಿಜರ ಕೊಡುಗೆ ಕಾಣಿಕೆ ||

ಹಾಡು ೩ :     ಹೇಗೆ ಹೇಳಲಿ ವತ್ಸ
ಮನದೊಳಗಣ ವ್ಯಥೆಯನು
ತಾಳಲಾರದೆ ಉಮ್ಮಳಿತ
ಲೋಚನ ಜಲಕಳಿತವನು ||

ಹಡು ೪ :     ಕೊಡುವುದು ಕೊಡುವಲ್ಲಿ
ಇಹುದು ದೊಡ್ಡತನವು
ಕೊಡದೆ ಕೊಸರಾಡಿದರೆ
ಬಹುದು ದಡ್ಡತನವು ||

ಹಾಡು ೫ :     ಪಂಚರಾತ್ರದೊಳು ತನ್ನಿ
ಪಾಂಡವರಿಹ ಕುರುಹನ್ನು
ಪಡೆಯಿರಿ ಅರ್ಧ ರಾಜ್ಯ
ಮುಕ್ತ ದಾಯಾದಿ ವ್ಯಾಜ್ಯ ||

ಹಾಡು ೬ :     ನಡೆವ ಗೋಗ್ರಹಣ
ದೊರೆ ವಿರಾಟನ ಮಾನ ಹರಣ
ಶಕುನಿ ಒಡ್ಡಿದ ತಂತ್ರ
ಭೀಷ್ಮ ದ್ರೋಣದರ ನವಮಂತ್ರ ||

ಹಾಡು ೭ :     ಕೇಳಿಗುಂಪು ಗೋವುಗಳೆ
ಗಾನದಿಂಪಿನ ಸಂಗಾತಿಗಳೆ
ಸೊಂಪು ಮೇವಿನ ಬನದಲ್ಲಿ
ಚಂದ ಮೇಯಿರಿ ಹಗಲಲ್ಲಿ ||

ನಮ್ಮದಿದುವೆ ಗೋಕುಲ
ವಿರಾಟನ ಹೈನು ಸಂಕುಲ
ಬನ್ನಿ ಮಕ್ಕಳೆ ಬನ್ನಿ ಕುಣಿಯಲು
ತುರುವ ನಗರಕೆ ಅಟ್ಟಲು ||

ಇಂದು ರಾಜನ ವರ್ಧಂತಿ
ನಮಗೆ ಉಲ್ಲಸದಾ ಪಂಕ್ತಿ
ಕುಣಿದು ಹಾಡುತ ನಲಿಯುತ
ನಮ್ಮ ನೋವನು ಮರೆಯುತ ||

ಹಾಡು ೮ :     ಇವಳೆ ಬೃಹನ್ನಳೆ
ಇವನೆ ಬೃಹನ್ನಳ ||

ಗಂಡಿನೊಳಿಹ ಹೆಣ್ಣೆ
ಹೆಣ್ಣಿನೊಳಿಹ ಗಂಡೆ
ದ್ವೈತವದ್ವೈತವಾದ
ಮಾನವ ಪ್ರತೀಕವೆ ||

ಗಿರಿಜೇಶನರ್ಧ ನಾರಿ
ಜಗದೇಕತೆ ತೋರಿ
ಗಂಡ್ಹೆಣ್ಣು ಒಟ್ಟಾಗಿ
ಇರುವುದೆ ಬದುಕಾಗಿ ||

ಒಮ್ಮುಖ ಹೆಣ್ಣು
ಇಮ್ಮುಖ ಗಂಡು
ಸೇರಿ ಎರಡೂ
ಜಗಮುಖವಾಗಿ ||

ಹಾಡು ೯ :     ತಪ್ಪಿತೊಂದು ಯುದ್ಧ
ಗೋಗ್ರಹಣ ಪ್ರಸಿದ್ಧ ||

ಶಾಂತಿ ಪ್ರತೀಕದೀ ಯುದ್ಧ
ಅಜ್ಞಾತವಾಸದಲ್ಲಿದ್ದ
ಪಾಂಡವ ಗುರ್ತೀಗೆ ಸಿದ್ಧ
ಬೃಹನ್ನಳೆಯೇ ಗೆದ್ದ ||

ಕಾಲು ಕರೆದ ಯುದ್ಧ
ಮದುವೆಗಾಗಿ ಸಿದ್ಧ
ಗೋ ಸಂಕುಲವೆಲ್ಲ
ರಕ್ಷಿತವೊ ರಕ್ಷಿತ ||

ಹಾಡು ೧೦ :     ಕಾಲು ಕೆರೆದ ಯುದ್ಧ
ಕೌರವರಿಗೊ ಅಪದ್ಧ ||

ಗೋಗ್ರಹಣಕೆ ಹೋಗಿ
ಗಣ್ಯರಿಗೆ ಭಂಗವಾಗಿ
ಚಿಂತೆಯಲ್ಲಿ ಮುಳುಗಿ
ಸುಮಾರ್ಗ ಇಲ್ಲವಾಗಿ ||

ಅತಿರಥರಿಗೆಲ್ಲಾ
ಮಾನ ಹೋದವಲ್ಲ
ತಪ್ಪಿ ಯುದ್ಧ ಘೋರ
ಸಿಕ್ಕಿಬಿದ್ದ ಕುಮಾರ ||

ಹಾಡು ೧೧ :     ಧರ್ಮದ ಶ್ರೇಷ್ಠತೆ ಶಾಂತಿ
ಯುದ್ಧದ ಬೀಜ ಅಶಾಂತಿ ||

ಕೊಂದು ಕೊಲಿಸಿದ ಮಾನವ
ಆದನಯ್ಯೋ ಛೆ ದಾನವ
ಯುದ್ಧ ಮಾಡಿ ಗೆದ್ದವನು
ಸೋತು ದುಃಖವ ತಿಂದನು ||

ಸಾವನು ಬಯಸಿದ ಬಸಿರು
ಸಾಧಿಸಲಿ ಶಾಂತಿಯ ಹಸಿರು
ಯುದ್ಧ ತಪ್ಪಿಸದ ಕೀರ್ತಿಯು
ನವ ಜೀವನದ ಮದುವೆಯು ||

ಕೊಡುವ ಭಾಗವ ಕೊಟ್ಟರೆ
ಉಳಿವುದೇನದು ಕೆಟ್ಟರೆ
ಪ್ರೀತಿ ಮಮತೆ ಅಕ್ಕರೆ
ಬದುಕಿಗೆ ಜೀವ ಇವಿರೆ ||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಂಥ ಚೆಲುವೆ ನನ್ನ ಹುಡುಗಿ
Next post ಬದುಕಿಗಾಗಿ…

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…