Home / ಕವನ / ಕವಿತೆ / ಪಂಚರಾತ್ರ (ತೊಗಲುಬೊಂಬೆಯಾಟ)

ಪಂಚರಾತ್ರ (ತೊಗಲುಬೊಂಬೆಯಾಟ)

ಜಗದ ಜನಶಕ್ತಿಗೆ
ನಮೋ ನಮೋ ||

ಬಣ್ಣದಾಟದ ನೆಲೆಗೆ
ನಮೋ ನಮೋ ||

ಕಲಾ ಸ್ವಾದಕನಿಗೆ
ನಮೋ ನಮೋ ||

ಕಲಾ ಪ್ರೋತ್ಸಾಹಕನಿಗೆ
ನಮೋ ನಮೋ ||

ಧನ್ಯತೆಯಿಂ ಕೈಮುಗಿವೆ
ಎನ್ನೆದುರಿನ ಜನಶಕ್ತಿಗೆ

ನಮೋ ನಮೋ ಎನ್ನುವೆ
ಎನ್ನೆದುರಿನ ಮನಶಕ್ತಿಗೆ
ನಮೋ ನಮೋ
ನಮೋ ನಮೋ
ನಮೋ ನಮೋ
ನಮೋ ನಮೋ

ಹಾಡು ೧ :     ಭಾರತವಿದು ಭಾರತ
ಜನ ಮಹಾಭಾರತ ||

ವ್ಯಾಸರಿಂ ರಚಿತ ಭಾರತ
ಕೋಟಿ ಕಿರಣ ಪ್ರಭಾತ
ಜಗವ ಕಾಣ್ವ ಬಂಧನ
ಸಕಲವೂ ನವ ದರ್ಶನ ||

ಅದರೊಂದು ತುಣುಕು
ಈ ಆಟದ ಇಣಕು
ಭಾಸನೆಂಬ ಕವಿಯು
ಸಂಸ್ಕೃತ ಪ್ರತಿಭೆಯು ||

ಅವ ಕಂಡ ಭಾರತವಿದು
ಕತೆ ವಿರಾಟ ಪರ್ವದ್ದು
ಹೆಸರಿಟ್ಟನು ಪಂಚರಾತ್ರ
ನೋಡಿ ಶಾಂತಿಯ ಪಾತ್ರ ||

ಹಾಡು ೨ :     ರಾಜಸೂಯ ಯಾಗವನು
ಮಾಡಿ ಧೀರ ದುರ್ಯೋಧನನು
ನೆರೆದರು ಸಕಲರಸರು
ಏಕಛತ್ರಾಧಿಪತ್ಯವನೊಪ್ಪಲೆಂದು ||

ಯಾಗದಲಿ ಸಂತೃಪ್ತಿ
ಭೂರಿ ಬೋಜನಗಳಾದವು
ಅರಸುಗುಳಿಯಿತು ಬಾಕಿ
ದ್ವಿಜರ ಕೊಡುಗೆ ಕಾಣಿಕೆ ||

ಹಾಡು ೩ :     ಹೇಗೆ ಹೇಳಲಿ ವತ್ಸ
ಮನದೊಳಗಣ ವ್ಯಥೆಯನು
ತಾಳಲಾರದೆ ಉಮ್ಮಳಿತ
ಲೋಚನ ಜಲಕಳಿತವನು ||

ಹಡು ೪ :     ಕೊಡುವುದು ಕೊಡುವಲ್ಲಿ
ಇಹುದು ದೊಡ್ಡತನವು
ಕೊಡದೆ ಕೊಸರಾಡಿದರೆ
ಬಹುದು ದಡ್ಡತನವು ||

ಹಾಡು ೫ :     ಪಂಚರಾತ್ರದೊಳು ತನ್ನಿ
ಪಾಂಡವರಿಹ ಕುರುಹನ್ನು
ಪಡೆಯಿರಿ ಅರ್ಧ ರಾಜ್ಯ
ಮುಕ್ತ ದಾಯಾದಿ ವ್ಯಾಜ್ಯ ||

ಹಾಡು ೬ :     ನಡೆವ ಗೋಗ್ರಹಣ
ದೊರೆ ವಿರಾಟನ ಮಾನ ಹರಣ
ಶಕುನಿ ಒಡ್ಡಿದ ತಂತ್ರ
ಭೀಷ್ಮ ದ್ರೋಣದರ ನವಮಂತ್ರ ||

ಹಾಡು ೭ :     ಕೇಳಿಗುಂಪು ಗೋವುಗಳೆ
ಗಾನದಿಂಪಿನ ಸಂಗಾತಿಗಳೆ
ಸೊಂಪು ಮೇವಿನ ಬನದಲ್ಲಿ
ಚಂದ ಮೇಯಿರಿ ಹಗಲಲ್ಲಿ ||

ನಮ್ಮದಿದುವೆ ಗೋಕುಲ
ವಿರಾಟನ ಹೈನು ಸಂಕುಲ
ಬನ್ನಿ ಮಕ್ಕಳೆ ಬನ್ನಿ ಕುಣಿಯಲು
ತುರುವ ನಗರಕೆ ಅಟ್ಟಲು ||

ಇಂದು ರಾಜನ ವರ್ಧಂತಿ
ನಮಗೆ ಉಲ್ಲಸದಾ ಪಂಕ್ತಿ
ಕುಣಿದು ಹಾಡುತ ನಲಿಯುತ
ನಮ್ಮ ನೋವನು ಮರೆಯುತ ||

ಹಾಡು ೮ :     ಇವಳೆ ಬೃಹನ್ನಳೆ
ಇವನೆ ಬೃಹನ್ನಳ ||

ಗಂಡಿನೊಳಿಹ ಹೆಣ್ಣೆ
ಹೆಣ್ಣಿನೊಳಿಹ ಗಂಡೆ
ದ್ವೈತವದ್ವೈತವಾದ
ಮಾನವ ಪ್ರತೀಕವೆ ||

ಗಿರಿಜೇಶನರ್ಧ ನಾರಿ
ಜಗದೇಕತೆ ತೋರಿ
ಗಂಡ್ಹೆಣ್ಣು ಒಟ್ಟಾಗಿ
ಇರುವುದೆ ಬದುಕಾಗಿ ||

ಒಮ್ಮುಖ ಹೆಣ್ಣು
ಇಮ್ಮುಖ ಗಂಡು
ಸೇರಿ ಎರಡೂ
ಜಗಮುಖವಾಗಿ ||

ಹಾಡು ೯ :     ತಪ್ಪಿತೊಂದು ಯುದ್ಧ
ಗೋಗ್ರಹಣ ಪ್ರಸಿದ್ಧ ||

ಶಾಂತಿ ಪ್ರತೀಕದೀ ಯುದ್ಧ
ಅಜ್ಞಾತವಾಸದಲ್ಲಿದ್ದ
ಪಾಂಡವ ಗುರ್ತೀಗೆ ಸಿದ್ಧ
ಬೃಹನ್ನಳೆಯೇ ಗೆದ್ದ ||

ಕಾಲು ಕರೆದ ಯುದ್ಧ
ಮದುವೆಗಾಗಿ ಸಿದ್ಧ
ಗೋ ಸಂಕುಲವೆಲ್ಲ
ರಕ್ಷಿತವೊ ರಕ್ಷಿತ ||

ಹಾಡು ೧೦ :     ಕಾಲು ಕೆರೆದ ಯುದ್ಧ
ಕೌರವರಿಗೊ ಅಪದ್ಧ ||

ಗೋಗ್ರಹಣಕೆ ಹೋಗಿ
ಗಣ್ಯರಿಗೆ ಭಂಗವಾಗಿ
ಚಿಂತೆಯಲ್ಲಿ ಮುಳುಗಿ
ಸುಮಾರ್ಗ ಇಲ್ಲವಾಗಿ ||

ಅತಿರಥರಿಗೆಲ್ಲಾ
ಮಾನ ಹೋದವಲ್ಲ
ತಪ್ಪಿ ಯುದ್ಧ ಘೋರ
ಸಿಕ್ಕಿಬಿದ್ದ ಕುಮಾರ ||

ಹಾಡು ೧೧ :     ಧರ್ಮದ ಶ್ರೇಷ್ಠತೆ ಶಾಂತಿ
ಯುದ್ಧದ ಬೀಜ ಅಶಾಂತಿ ||

ಕೊಂದು ಕೊಲಿಸಿದ ಮಾನವ
ಆದನಯ್ಯೋ ಛೆ ದಾನವ
ಯುದ್ಧ ಮಾಡಿ ಗೆದ್ದವನು
ಸೋತು ದುಃಖವ ತಿಂದನು ||

ಸಾವನು ಬಯಸಿದ ಬಸಿರು
ಸಾಧಿಸಲಿ ಶಾಂತಿಯ ಹಸಿರು
ಯುದ್ಧ ತಪ್ಪಿಸದ ಕೀರ್ತಿಯು
ನವ ಜೀವನದ ಮದುವೆಯು ||

ಕೊಡುವ ಭಾಗವ ಕೊಟ್ಟರೆ
ಉಳಿವುದೇನದು ಕೆಟ್ಟರೆ
ಪ್ರೀತಿ ಮಮತೆ ಅಕ್ಕರೆ
ಬದುಕಿಗೆ ಜೀವ ಇವಿರೆ ||

*****

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...