ಬಂದೆನೊ – ಇದೊ ಬಂದೆ

ಕರೆಕರೆದು ಬರುವೆನೊ ಬಂದೆನೊ ಇದೊ ಬಂದೆ,
ಕರ್ಣಾಟ ಸಾಗರ ಸೇರಽಲು;
ತಿಳಿನೀರ ತಳವನ್ನು ಸೇರಲು!  ||ಕರೆ||

ಕೊಡಗಿನ ಮಲೆನಾಡ ಶಿಖರದೊಳುದಯಿಸಿ
ಹರಿಹರಿದೆ ಕನ್ನಡ ರಾಜ್ಯದೊಳ್;
ಕವಿರಸದ ಹನಿಯಾಗಿ ಸೇರಽಲು!

ಕಾಂತಿಯೊ ಇದು ಒಂದು ಕ್ರಾಂತಿಗೆ ಸಮನಾಗಿ
ಕರ್ಣಾಟ ಬಯಲೊಳು-ಈ ಕಾಂತಿ,
ದೇವಸೂರ್ಯನು ತೋರಿದೀಕಾಂತಿ!  ||ಕರೆ||

ಸೂರ್ಯಕಾಂತಿಯ ನಾನು ಕರ್ಣಾಟ ಸಾಗರ
ತೆರೆ ಮೇಲೆ ಥಳಥಳನೆ ತೇಲಿಽಸಿ;
ಸಹ್ಯಾದ್ರಿ ಏರಿದೆ ನೋಡಽಲು!

ವಜ್ರಪ್ರಕಾಶವು ಕರಿಮಣ್ಣು ಕರ್ಣಾಟ!
ಗೋದೆ ಕೃಷ್ಣಾ ತುಂಗಾ ಕಾವೇರೀ,
ತಾಯ್ಮಣಿಯರು ಮೀಸಿ ಮುದವೇರಿ!  ||ಕರೆ||

ನೂರಾರು ಜನಕುಽಲ ಹತ್ತಾರು ರಾಜ್ಯದೊಳ್
ನಾನೊರ್ವ ಕುಡುಪುತ್ರನದರೊಽಳು,
ಮುಳೂಗಿದೆ ಕರ್ಣಾಟ ತೆರೆಯೊಽಳು!

ಹನಿಗೊಂದು ಕವಿಯಾಗಿ ಅಲೆಗೊಂದು ಮುನಿಯಾಗಿ
ಜಲಚರದ ತೆರೆದಲ್ಲಿ ವೀರಽರೊ;
ಶಕ್ತಿಪ್ರಧಾಯಕ ರಾಜ್ಯಽವೊಽ  ||ಕರೆ||

ಸಂಪತ್ತು ಸಾಮ್ರಾಜ್ಯ ಸಂಸ್ಕೃತಿ ಸಾಹಿತ್ಯ
ರಸಿಕ ಕಲೆಗಳ ತವರೂಽರೊ;
ಪಂಪಾದಿ ಕವಿಗಳು ಬಳೆದೂರೊಽ

ಈ ರಾಜ್ಯ ಕರ್ಣಾಟ,- ಬಂದೆನೊ ಇದೊ ಬಂದೆ
ನಾನದಕೆ ನಾನಾಗಿ ಮೀಸಽಲೊ;
ತಾಯ್ನುಡಿ ಹಾಡುತ್ತ ಬಂದೆಽನೊ~  ||ಕರೆ||
*****

ಪುಸ್ತಕ: ಸೂರ್ಯ ಕಾಂತಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅರ್ಪಣ ಉಷೆಗೆ
Next post ಅಕ್ಕಿಯಾರಿಸುವಾಗ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…