ಸೂರ್ಯಕಾಂತಿ

ಅಕೊ ಮೂಡ ಬಯಲಿನಲಿ
ಬೆಳ್ನೆರೆಯ ಚೆಲ್ಲಿಹರು
ಅದೋ ಮೂಡ ಬಾನಿನಲಿ
ರವಿ ಕಾರುತಿಹನು!

ಭುವಿಯೆಲ್ಲ ಬೆಳಕಿನಾ
ಮುನ್ನೀರಂತಾದುದು;
ಗಿರಿಯೆಲ್ಲ ನಗುವಂತೆ
ತಲೆಯೆತ್ತಿ ನೋಡುವುದು.

ಚಂದಿರನ ಓಡಿಸಿತು
ಇಬ್ಬನಿಯ ಮಳೆಯು;
ಬಿಳಿವಣ್ಣು ತಾರಕೆಯ
ಹಕ್ಕಿಗಳು ಕುಟುಕಿದುವು.

ಪುಷ್ಪಫಲ ತರುಲತೆಗಳ್
ಪೂತ ತೇಜದಿ ನಕ್ಕು,
ಸೂರ್ಯಕಾಂತಿಯ ಶಾಂತ
ಪ್ರತಿಭೆಯನು ಸಾರುವುದು!

ಕಮಲಗಳು ನಗುನಗುತ
ತಲೆಯೆತ್ತಿ ನೋಡುವುವು,
ಮಿಗವಕ್ಕಿ ಆ ಕಾಂತಿ
ಕ್ಷೀರವನೆ ಕುಟಿಯುವುವು.

ಸೂರ್ಯವಂದನೆ ಮಾಡಿ
ಸೂರ್ಯಸ್ನಾನವ ಮುಗಿಸಿ
ಸೂರ್ಯಕಾಂತಿಯ ಕುಡಿಯೆ
ವಿಶ್ವವೇ ಬಾಯ್ಬಿಟ್ಟುವು.

ಮೂಡದೆಸೆ ಮೂಡಿರಲು
ಹೆಮ್ಮೆಯಿಂ ಬೆಳಗು-
ಆ ಕಾಂತಿ ತೋರಿಯೇ
ಲೋಕಗಳ ಮಿನುಗು!
*****

ಪುಸ್ತಕ: ಸೂರ್ಯ ಕಾಂತಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨
Next post ಇದುವೆ ನನ್ನಯ ಸೇವೆ

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮೇಷ್ಟ್ರು ರಂಗಪ್ಪ

    ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…