ಸೂರ್ಯಕಾಂತಿ

ಅಕೊ ಮೂಡ ಬಯಲಿನಲಿ
ಬೆಳ್ನೆರೆಯ ಚೆಲ್ಲಿಹರು
ಅದೋ ಮೂಡ ಬಾನಿನಲಿ
ರವಿ ಕಾರುತಿಹನು!

ಭುವಿಯೆಲ್ಲ ಬೆಳಕಿನಾ
ಮುನ್ನೀರಂತಾದುದು;
ಗಿರಿಯೆಲ್ಲ ನಗುವಂತೆ
ತಲೆಯೆತ್ತಿ ನೋಡುವುದು.

ಚಂದಿರನ ಓಡಿಸಿತು
ಇಬ್ಬನಿಯ ಮಳೆಯು;
ಬಿಳಿವಣ್ಣು ತಾರಕೆಯ
ಹಕ್ಕಿಗಳು ಕುಟುಕಿದುವು.

ಪುಷ್ಪಫಲ ತರುಲತೆಗಳ್
ಪೂತ ತೇಜದಿ ನಕ್ಕು,
ಸೂರ್ಯಕಾಂತಿಯ ಶಾಂತ
ಪ್ರತಿಭೆಯನು ಸಾರುವುದು!

ಕಮಲಗಳು ನಗುನಗುತ
ತಲೆಯೆತ್ತಿ ನೋಡುವುವು,
ಮಿಗವಕ್ಕಿ ಆ ಕಾಂತಿ
ಕ್ಷೀರವನೆ ಕುಟಿಯುವುವು.

ಸೂರ್ಯವಂದನೆ ಮಾಡಿ
ಸೂರ್ಯಸ್ನಾನವ ಮುಗಿಸಿ
ಸೂರ್ಯಕಾಂತಿಯ ಕುಡಿಯೆ
ವಿಶ್ವವೇ ಬಾಯ್ಬಿಟ್ಟುವು.

ಮೂಡದೆಸೆ ಮೂಡಿರಲು
ಹೆಮ್ಮೆಯಿಂ ಬೆಳಗು-
ಆ ಕಾಂತಿ ತೋರಿಯೇ
ಲೋಕಗಳ ಮಿನುಗು!
*****

ಪುಸ್ತಕ: ಸೂರ್ಯ ಕಾಂತಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೨
Next post ಇದುವೆ ನನ್ನಯ ಸೇವೆ

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

cheap jordans|wholesale air max|wholesale jordans|wholesale jewelry|wholesale jerseys