Home / ಕವನ / ಕವಿತೆ / ಜ್ಞಾನದ ಮೊರೆ

ಜ್ಞಾನದ ಮೊರೆ

ತಾರೆಗಳು ಶತಕೋಟಿ ಉದಿಸಿದರು ಬಾನಿನಲಿ,
ಮೀರಿ ತೆರೆಗಳ ಧೀರ್ಘ ಆರ್ಭಟವೆ ಹೆಚ್ಚಿರಲಿ,
ಶೂರ ಪುರುಷರು ಕಾಯದೊಳವಧಿಯನು ಮುಟ್ಟಿರಲಿ,
ಸಾರ ಸಗ್ಗವು ತೋರ್ಪ ಸ್ತುತಿಹಲವು ಘೂರ್ಮಿಸಲಿ-
ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ?

ಧಾರೆಧಾರೆಗಳಾಗಿ ಜಗದಿ ನೆತ್ತರವೆ ಪ್ರಹಿಸಲಿ,
ನೀರೆಯರ ಕುಡಿನೋಟದಿಂ ಬಲವೆ ತಗ್ಗಿರಲಿ,
ಭಾರವದು ಧರೆಗೀವ ಅಜ್ಞಾನ ನಾಟಿರಲಿ,
ಚೋರತಂತ್ರಗಳಲವು ನಿರ್ಭಯದಿ ಹಬ್ಬಿರಲಿ-
ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ?

ಬಡತನದ ಬೇನೆಯಲಿ ಶತವರ್ಷ ಬಳಲಿರಲಿ,
ನಡುನೆಟ್ಟನಿಡಿಕಿಲದೆ ಶತಮಾಸ ಬಾಲಿರಲಿ,
ನಿಡುಮರವು ಕಾನನದಿ ನಿಬಿಡಾಗಿ ಹಬ್ಬಿರಲಿ,
ಜಡದೇಹವದರಂತೆ ನೀರಸದಿ ಇರಲಿರಲಿ-
ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ?

ಗತಕಾಲ ಸಾಹಿತ್ಯ ಸಮಗ್ರವನು ಜಯಿಸಿರಲಿ,
ಗತವೀರ ಚಾರಿತ್ರ್‍ಯ ಶಾಸನವ ಪಠಿಸಿರಲಿ,
ಗತಲೋಕ ವೈರಾಗ್ಯ ಸಂಪದವ ಬಿಂಬಿಸಲಿ,
ಗತಜೀವ ನಿರ್ವಾಣ ಸಾಯುಜ್ಯ ನೆನೆದಿರಲಿ-
ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ?

ಕ್ರಿಮಿಯದುವೆ ಸತ್ಕರ್ಮಿ, ಅದರಂತೆ ನಾನೆಲ್ಲಿ?
ನಿಮಿಸಿದ ಬಾಳಿದುವೆ, ಮಾಭೋಗ ಇನ್ನೆಲ್ಲಿ?
ಧರ್ಮಿಧರ್ಮಗಳ ಬಾಳೆಲ್ಲ ಅಂದಾಯ್ತು-ಈಗೆಲ್ಲಿ?
ನಿಮಿಷ ನಿಮಿಷದ ಚಿಂತೆ ಇಂತಲ್ಲದಿನ್ನಿಲ್ಲಿ,
ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ.
*****

ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...