Home / ಕವನ / ಕವಿತೆ / ಜ್ಞಾನದ ಮೊರೆ

ಜ್ಞಾನದ ಮೊರೆ

ತಾರೆಗಳು ಶತಕೋಟಿ ಉದಿಸಿದರು ಬಾನಿನಲಿ,
ಮೀರಿ ತೆರೆಗಳ ಧೀರ್ಘ ಆರ್ಭಟವೆ ಹೆಚ್ಚಿರಲಿ,
ಶೂರ ಪುರುಷರು ಕಾಯದೊಳವಧಿಯನು ಮುಟ್ಟಿರಲಿ,
ಸಾರ ಸಗ್ಗವು ತೋರ್ಪ ಸ್ತುತಿಹಲವು ಘೂರ್ಮಿಸಲಿ-
ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ?

ಧಾರೆಧಾರೆಗಳಾಗಿ ಜಗದಿ ನೆತ್ತರವೆ ಪ್ರಹಿಸಲಿ,
ನೀರೆಯರ ಕುಡಿನೋಟದಿಂ ಬಲವೆ ತಗ್ಗಿರಲಿ,
ಭಾರವದು ಧರೆಗೀವ ಅಜ್ಞಾನ ನಾಟಿರಲಿ,
ಚೋರತಂತ್ರಗಳಲವು ನಿರ್ಭಯದಿ ಹಬ್ಬಿರಲಿ-
ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ?

ಬಡತನದ ಬೇನೆಯಲಿ ಶತವರ್ಷ ಬಳಲಿರಲಿ,
ನಡುನೆಟ್ಟನಿಡಿಕಿಲದೆ ಶತಮಾಸ ಬಾಲಿರಲಿ,
ನಿಡುಮರವು ಕಾನನದಿ ನಿಬಿಡಾಗಿ ಹಬ್ಬಿರಲಿ,
ಜಡದೇಹವದರಂತೆ ನೀರಸದಿ ಇರಲಿರಲಿ-
ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ?

ಗತಕಾಲ ಸಾಹಿತ್ಯ ಸಮಗ್ರವನು ಜಯಿಸಿರಲಿ,
ಗತವೀರ ಚಾರಿತ್ರ್‍ಯ ಶಾಸನವ ಪಠಿಸಿರಲಿ,
ಗತಲೋಕ ವೈರಾಗ್ಯ ಸಂಪದವ ಬಿಂಬಿಸಲಿ,
ಗತಜೀವ ನಿರ್ವಾಣ ಸಾಯುಜ್ಯ ನೆನೆದಿರಲಿ-
ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ?

ಕ್ರಿಮಿಯದುವೆ ಸತ್ಕರ್ಮಿ, ಅದರಂತೆ ನಾನೆಲ್ಲಿ?
ನಿಮಿಸಿದ ಬಾಳಿದುವೆ, ಮಾಭೋಗ ಇನ್ನೆಲ್ಲಿ?
ಧರ್ಮಿಧರ್ಮಗಳ ಬಾಳೆಲ್ಲ ಅಂದಾಯ್ತು-ಈಗೆಲ್ಲಿ?
ನಿಮಿಷ ನಿಮಿಷದ ಚಿಂತೆ ಇಂತಲ್ಲದಿನ್ನಿಲ್ಲಿ,
ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ.
*****

ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ