Home / ಕವನ / ಕವಿತೆ / ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ||

ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ
ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ||

ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ,
ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ;
ತನ್ನ ತಾನು ಮರೆತು ಜೊಳ್ಳು ಪುತ್ರರನ್ನು ನಂಬಿರೆ,
ಆತ್ಮಖ್ಯಾತಿ ಘನತೆಗಳನು ಕಳೆದು ತಾಯಿ ನೊಂದಳೊ!  ||ಭಾ||

ಬಡತನದಿ ಬೇನೆಯಿಂದ ಬೆಂದು ಬಳಲಿ ಬಾಡಿತು
ದೇಶದಲ್ಲಿ ಶಾಂತಿ ಕಾಂತಿ ಕಳೆದು ಭ್ರಾಂತಿ ತುಂಬಿತು,
ಹಿಂದೂದೇಶ ಕರ್ಮಭೂಮಿ ಧರ್ಮಕ್ಷೇತ್ರ ಖ್ಯಾತಿಯು
ಶೂರ ಆರ್ಯಜನರ ಸ್ಥೈರ್ಯ ಶೂನ್ಯವಾಗಿ ಪೋದುವೊ!  ||ಭಾ||

ಒಲಿದು ನಲಿದು ಮುಗುಳು ನಗೆಯ ತೋರಿ ಹಾಡಿ ಬರುವಳು
ಹೂವ ಮುಡಿದು ತಿಲಕ ಹಚ್ಚಿ ಧ್ವಜವ ಹಾರ್‍ಸಿ ಮೆರೆವಳು,
ಕಾಲಗೆಜ್ಜೆ ಝಣಽ ಝಣರೆಂದೆನಿಸಿ ಕುಣಿದು ಕರೆವಳು
ನಲಿದಳೀ ನಲ್ವತ್ತು ಕೋಟಿ ಕುರವರರೊಡನೆ ಹರುಷದಿ!  ||ಭಾ||

ಅಹೋ ಏನು ಧಣಿದರವಳ ವೀರ ತ್ಯಾಗಿ ಪುತ್ರರು,
ದೇಶಬಂಧು ಲೋಕಮಾನ್ಯ ಮೋತಿಲಾಲ ಶಿಷ್ಟರು;
ಆ ನೇತಾಜಿ ನೆಹುರು ವಲ್ಲಭಾದಿ ಗೋಕಲೇಯರು,
ದಣಿದು ಕಾದು ಸತ್ತ ಹಿರಿಯ ಕಿರಿಯ ಹಲವು ವೀರರು!  ||ಭಾ||

ರಕ್ತ ಹರಿಸಿ ತನುವ ಸವೆಸಿ ಧಣಿದರಲವು ಜನಗಳು
ಏಸು ಕಾಲ ಪಾರತಂತ್ರ್‍ಯದಿಂದ ಇರ್ದ ದೇಶದೊಳ್;
ಶೂರಗಾಂಧಿ ರಾಜಋಷಿಯು ಬಡವಗೊಲಿದ ದೇವನು
ಸತ್ಯಾಗ್ರಹಾದಾಯುಧವೇ ದೇಶ ವಿಜಯಕಾಯ್ದನು!  ||ಭಾ||

ಬಂದಳದೋ ವಿಜಯಭೇರಿಯನ್ನು ಮೊಳಗಿ ಮಾನಸಿ,
ಗಳಿಸಿದೊಂದು ಕೀರ್ತಿಯನ್ನು ಕಂದರೊಳಗೆ ಹಬ್ಬಿಸಿ;
ಧರೆಯ ರಾಷ್ಟ್ರಗಳಲಿ ನಮ್ಮ ಪ್ರಭೆಯು ಇನ್ನು ಬೀರ್ವುದು,
ಧವಳ ಕೇತು ಹಾರ್‍ಸಿ ತಂದಳದೋ ಭಾರತೀವಧು!  ||ಭಾ||
*****
ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...