ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ||

ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ
ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ||

ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ,
ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ;
ತನ್ನ ತಾನು ಮರೆತು ಜೊಳ್ಳು ಪುತ್ರರನ್ನು ನಂಬಿರೆ,
ಆತ್ಮಖ್ಯಾತಿ ಘನತೆಗಳನು ಕಳೆದು ತಾಯಿ ನೊಂದಳೊ!  ||ಭಾ||

ಬಡತನದಿ ಬೇನೆಯಿಂದ ಬೆಂದು ಬಳಲಿ ಬಾಡಿತು
ದೇಶದಲ್ಲಿ ಶಾಂತಿ ಕಾಂತಿ ಕಳೆದು ಭ್ರಾಂತಿ ತುಂಬಿತು,
ಹಿಂದೂದೇಶ ಕರ್ಮಭೂಮಿ ಧರ್ಮಕ್ಷೇತ್ರ ಖ್ಯಾತಿಯು
ಶೂರ ಆರ್ಯಜನರ ಸ್ಥೈರ್ಯ ಶೂನ್ಯವಾಗಿ ಪೋದುವೊ!  ||ಭಾ||

ಒಲಿದು ನಲಿದು ಮುಗುಳು ನಗೆಯ ತೋರಿ ಹಾಡಿ ಬರುವಳು
ಹೂವ ಮುಡಿದು ತಿಲಕ ಹಚ್ಚಿ ಧ್ವಜವ ಹಾರ್‍ಸಿ ಮೆರೆವಳು,
ಕಾಲಗೆಜ್ಜೆ ಝಣಽ ಝಣರೆಂದೆನಿಸಿ ಕುಣಿದು ಕರೆವಳು
ನಲಿದಳೀ ನಲ್ವತ್ತು ಕೋಟಿ ಕುರವರರೊಡನೆ ಹರುಷದಿ!  ||ಭಾ||

ಅಹೋ ಏನು ಧಣಿದರವಳ ವೀರ ತ್ಯಾಗಿ ಪುತ್ರರು,
ದೇಶಬಂಧು ಲೋಕಮಾನ್ಯ ಮೋತಿಲಾಲ ಶಿಷ್ಟರು;
ಆ ನೇತಾಜಿ ನೆಹುರು ವಲ್ಲಭಾದಿ ಗೋಕಲೇಯರು,
ದಣಿದು ಕಾದು ಸತ್ತ ಹಿರಿಯ ಕಿರಿಯ ಹಲವು ವೀರರು!  ||ಭಾ||

ರಕ್ತ ಹರಿಸಿ ತನುವ ಸವೆಸಿ ಧಣಿದರಲವು ಜನಗಳು
ಏಸು ಕಾಲ ಪಾರತಂತ್ರ್‍ಯದಿಂದ ಇರ್ದ ದೇಶದೊಳ್;
ಶೂರಗಾಂಧಿ ರಾಜಋಷಿಯು ಬಡವಗೊಲಿದ ದೇವನು
ಸತ್ಯಾಗ್ರಹಾದಾಯುಧವೇ ದೇಶ ವಿಜಯಕಾಯ್ದನು!  ||ಭಾ||

ಬಂದಳದೋ ವಿಜಯಭೇರಿಯನ್ನು ಮೊಳಗಿ ಮಾನಸಿ,
ಗಳಿಸಿದೊಂದು ಕೀರ್ತಿಯನ್ನು ಕಂದರೊಳಗೆ ಹಬ್ಬಿಸಿ;
ಧರೆಯ ರಾಷ್ಟ್ರಗಳಲಿ ನಮ್ಮ ಪ್ರಭೆಯು ಇನ್ನು ಬೀರ್ವುದು,
ಧವಳ ಕೇತು ಹಾರ್‍ಸಿ ತಂದಳದೋ ಭಾರತೀವಧು!  ||ಭಾ||
*****
ಪುಸ್ತಕ: ಸೂರ್ಯ ಕಾಂತಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೫
Next post ಭಾವ ಜೀವ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಆವಲಹಳ್ಳಿಯಲ್ಲಿ ಸಭೆ

    ಪ್ರಕರಣ ೯ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…