Home / ಕವನ / ಕವಿತೆ / ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ||

ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ
ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ||

ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ,
ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ;
ತನ್ನ ತಾನು ಮರೆತು ಜೊಳ್ಳು ಪುತ್ರರನ್ನು ನಂಬಿರೆ,
ಆತ್ಮಖ್ಯಾತಿ ಘನತೆಗಳನು ಕಳೆದು ತಾಯಿ ನೊಂದಳೊ!  ||ಭಾ||

ಬಡತನದಿ ಬೇನೆಯಿಂದ ಬೆಂದು ಬಳಲಿ ಬಾಡಿತು
ದೇಶದಲ್ಲಿ ಶಾಂತಿ ಕಾಂತಿ ಕಳೆದು ಭ್ರಾಂತಿ ತುಂಬಿತು,
ಹಿಂದೂದೇಶ ಕರ್ಮಭೂಮಿ ಧರ್ಮಕ್ಷೇತ್ರ ಖ್ಯಾತಿಯು
ಶೂರ ಆರ್ಯಜನರ ಸ್ಥೈರ್ಯ ಶೂನ್ಯವಾಗಿ ಪೋದುವೊ!  ||ಭಾ||

ಒಲಿದು ನಲಿದು ಮುಗುಳು ನಗೆಯ ತೋರಿ ಹಾಡಿ ಬರುವಳು
ಹೂವ ಮುಡಿದು ತಿಲಕ ಹಚ್ಚಿ ಧ್ವಜವ ಹಾರ್‍ಸಿ ಮೆರೆವಳು,
ಕಾಲಗೆಜ್ಜೆ ಝಣಽ ಝಣರೆಂದೆನಿಸಿ ಕುಣಿದು ಕರೆವಳು
ನಲಿದಳೀ ನಲ್ವತ್ತು ಕೋಟಿ ಕುರವರರೊಡನೆ ಹರುಷದಿ!  ||ಭಾ||

ಅಹೋ ಏನು ಧಣಿದರವಳ ವೀರ ತ್ಯಾಗಿ ಪುತ್ರರು,
ದೇಶಬಂಧು ಲೋಕಮಾನ್ಯ ಮೋತಿಲಾಲ ಶಿಷ್ಟರು;
ಆ ನೇತಾಜಿ ನೆಹುರು ವಲ್ಲಭಾದಿ ಗೋಕಲೇಯರು,
ದಣಿದು ಕಾದು ಸತ್ತ ಹಿರಿಯ ಕಿರಿಯ ಹಲವು ವೀರರು!  ||ಭಾ||

ರಕ್ತ ಹರಿಸಿ ತನುವ ಸವೆಸಿ ಧಣಿದರಲವು ಜನಗಳು
ಏಸು ಕಾಲ ಪಾರತಂತ್ರ್‍ಯದಿಂದ ಇರ್ದ ದೇಶದೊಳ್;
ಶೂರಗಾಂಧಿ ರಾಜಋಷಿಯು ಬಡವಗೊಲಿದ ದೇವನು
ಸತ್ಯಾಗ್ರಹಾದಾಯುಧವೇ ದೇಶ ವಿಜಯಕಾಯ್ದನು!  ||ಭಾ||

ಬಂದಳದೋ ವಿಜಯಭೇರಿಯನ್ನು ಮೊಳಗಿ ಮಾನಸಿ,
ಗಳಿಸಿದೊಂದು ಕೀರ್ತಿಯನ್ನು ಕಂದರೊಳಗೆ ಹಬ್ಬಿಸಿ;
ಧರೆಯ ರಾಷ್ಟ್ರಗಳಲಿ ನಮ್ಮ ಪ್ರಭೆಯು ಇನ್ನು ಬೀರ್ವುದು,
ಧವಳ ಕೇತು ಹಾರ್‍ಸಿ ತಂದಳದೋ ಭಾರತೀವಧು!  ||ಭಾ||
*****
ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...