Home / ಕವನ / ಕವಿತೆ / ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ||

ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ
ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ||

ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ,
ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ;
ತನ್ನ ತಾನು ಮರೆತು ಜೊಳ್ಳು ಪುತ್ರರನ್ನು ನಂಬಿರೆ,
ಆತ್ಮಖ್ಯಾತಿ ಘನತೆಗಳನು ಕಳೆದು ತಾಯಿ ನೊಂದಳೊ!  ||ಭಾ||

ಬಡತನದಿ ಬೇನೆಯಿಂದ ಬೆಂದು ಬಳಲಿ ಬಾಡಿತು
ದೇಶದಲ್ಲಿ ಶಾಂತಿ ಕಾಂತಿ ಕಳೆದು ಭ್ರಾಂತಿ ತುಂಬಿತು,
ಹಿಂದೂದೇಶ ಕರ್ಮಭೂಮಿ ಧರ್ಮಕ್ಷೇತ್ರ ಖ್ಯಾತಿಯು
ಶೂರ ಆರ್ಯಜನರ ಸ್ಥೈರ್ಯ ಶೂನ್ಯವಾಗಿ ಪೋದುವೊ!  ||ಭಾ||

ಒಲಿದು ನಲಿದು ಮುಗುಳು ನಗೆಯ ತೋರಿ ಹಾಡಿ ಬರುವಳು
ಹೂವ ಮುಡಿದು ತಿಲಕ ಹಚ್ಚಿ ಧ್ವಜವ ಹಾರ್‍ಸಿ ಮೆರೆವಳು,
ಕಾಲಗೆಜ್ಜೆ ಝಣಽ ಝಣರೆಂದೆನಿಸಿ ಕುಣಿದು ಕರೆವಳು
ನಲಿದಳೀ ನಲ್ವತ್ತು ಕೋಟಿ ಕುರವರರೊಡನೆ ಹರುಷದಿ!  ||ಭಾ||

ಅಹೋ ಏನು ಧಣಿದರವಳ ವೀರ ತ್ಯಾಗಿ ಪುತ್ರರು,
ದೇಶಬಂಧು ಲೋಕಮಾನ್ಯ ಮೋತಿಲಾಲ ಶಿಷ್ಟರು;
ಆ ನೇತಾಜಿ ನೆಹುರು ವಲ್ಲಭಾದಿ ಗೋಕಲೇಯರು,
ದಣಿದು ಕಾದು ಸತ್ತ ಹಿರಿಯ ಕಿರಿಯ ಹಲವು ವೀರರು!  ||ಭಾ||

ರಕ್ತ ಹರಿಸಿ ತನುವ ಸವೆಸಿ ಧಣಿದರಲವು ಜನಗಳು
ಏಸು ಕಾಲ ಪಾರತಂತ್ರ್‍ಯದಿಂದ ಇರ್ದ ದೇಶದೊಳ್;
ಶೂರಗಾಂಧಿ ರಾಜಋಷಿಯು ಬಡವಗೊಲಿದ ದೇವನು
ಸತ್ಯಾಗ್ರಹಾದಾಯುಧವೇ ದೇಶ ವಿಜಯಕಾಯ್ದನು!  ||ಭಾ||

ಬಂದಳದೋ ವಿಜಯಭೇರಿಯನ್ನು ಮೊಳಗಿ ಮಾನಸಿ,
ಗಳಿಸಿದೊಂದು ಕೀರ್ತಿಯನ್ನು ಕಂದರೊಳಗೆ ಹಬ್ಬಿಸಿ;
ಧರೆಯ ರಾಷ್ಟ್ರಗಳಲಿ ನಮ್ಮ ಪ್ರಭೆಯು ಇನ್ನು ಬೀರ್ವುದು,
ಧವಳ ಕೇತು ಹಾರ್‍ಸಿ ತಂದಳದೋ ಭಾರತೀವಧು!  ||ಭಾ||
*****
ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...