Home / ಕವನ / ಕವಿತೆ / ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ||

ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ
ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ||

ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ,
ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ;
ತನ್ನ ತಾನು ಮರೆತು ಜೊಳ್ಳು ಪುತ್ರರನ್ನು ನಂಬಿರೆ,
ಆತ್ಮಖ್ಯಾತಿ ಘನತೆಗಳನು ಕಳೆದು ತಾಯಿ ನೊಂದಳೊ!  ||ಭಾ||

ಬಡತನದಿ ಬೇನೆಯಿಂದ ಬೆಂದು ಬಳಲಿ ಬಾಡಿತು
ದೇಶದಲ್ಲಿ ಶಾಂತಿ ಕಾಂತಿ ಕಳೆದು ಭ್ರಾಂತಿ ತುಂಬಿತು,
ಹಿಂದೂದೇಶ ಕರ್ಮಭೂಮಿ ಧರ್ಮಕ್ಷೇತ್ರ ಖ್ಯಾತಿಯು
ಶೂರ ಆರ್ಯಜನರ ಸ್ಥೈರ್ಯ ಶೂನ್ಯವಾಗಿ ಪೋದುವೊ!  ||ಭಾ||

ಒಲಿದು ನಲಿದು ಮುಗುಳು ನಗೆಯ ತೋರಿ ಹಾಡಿ ಬರುವಳು
ಹೂವ ಮುಡಿದು ತಿಲಕ ಹಚ್ಚಿ ಧ್ವಜವ ಹಾರ್‍ಸಿ ಮೆರೆವಳು,
ಕಾಲಗೆಜ್ಜೆ ಝಣಽ ಝಣರೆಂದೆನಿಸಿ ಕುಣಿದು ಕರೆವಳು
ನಲಿದಳೀ ನಲ್ವತ್ತು ಕೋಟಿ ಕುರವರರೊಡನೆ ಹರುಷದಿ!  ||ಭಾ||

ಅಹೋ ಏನು ಧಣಿದರವಳ ವೀರ ತ್ಯಾಗಿ ಪುತ್ರರು,
ದೇಶಬಂಧು ಲೋಕಮಾನ್ಯ ಮೋತಿಲಾಲ ಶಿಷ್ಟರು;
ಆ ನೇತಾಜಿ ನೆಹುರು ವಲ್ಲಭಾದಿ ಗೋಕಲೇಯರು,
ದಣಿದು ಕಾದು ಸತ್ತ ಹಿರಿಯ ಕಿರಿಯ ಹಲವು ವೀರರು!  ||ಭಾ||

ರಕ್ತ ಹರಿಸಿ ತನುವ ಸವೆಸಿ ಧಣಿದರಲವು ಜನಗಳು
ಏಸು ಕಾಲ ಪಾರತಂತ್ರ್‍ಯದಿಂದ ಇರ್ದ ದೇಶದೊಳ್;
ಶೂರಗಾಂಧಿ ರಾಜಋಷಿಯು ಬಡವಗೊಲಿದ ದೇವನು
ಸತ್ಯಾಗ್ರಹಾದಾಯುಧವೇ ದೇಶ ವಿಜಯಕಾಯ್ದನು!  ||ಭಾ||

ಬಂದಳದೋ ವಿಜಯಭೇರಿಯನ್ನು ಮೊಳಗಿ ಮಾನಸಿ,
ಗಳಿಸಿದೊಂದು ಕೀರ್ತಿಯನ್ನು ಕಂದರೊಳಗೆ ಹಬ್ಬಿಸಿ;
ಧರೆಯ ರಾಷ್ಟ್ರಗಳಲಿ ನಮ್ಮ ಪ್ರಭೆಯು ಇನ್ನು ಬೀರ್ವುದು,
ಧವಳ ಕೇತು ಹಾರ್‍ಸಿ ತಂದಳದೋ ಭಾರತೀವಧು!  ||ಭಾ||
*****
ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...