ಚಂದ್ರ

ತುಂಬಿದ ಚಂದ್ರನೆ ನೀ ಬಾರ
ತುಂಬಿದ ಭಾಗ್ಯವ ನೀ ತಾರ
ನಂಬಿದ ಗತಿಗೆ ನೆಲೆ ತೋರ!

ಅಗಸ ಮಿತ್ರನು ನೀನದಕೊ
ತಂಪನು ಸುರಿಸುತ ನೀ ಮಿನುಗೊ
ಭೂಮಿಯ ಕನ್ನಡಿ ನೀನೆ ಕಣೊ

ನೈದಿಲೆ ನಗುವುದು ನೀ ಬರಲು
ನಲ್ಮೆಯ ಹೂವಿಗೆ ನೀ ಮುಗುಳು
ಸಂತಸವೀಯುತ ನೀ ಬಾಳು!

ವಸಂತ ಲಕ್ಷ್ಮಿಯ ಕಾಲ್ಚೆಂಡು
ಆಡುವ ಮಕ್ಕಳ ಮನವುಂಡು
ತೋರುವೆ ತೇಲುವೆ ನೀ ದುಂಡು!

ತಂಪನು ಚೆಲ್ಲುವೆ ನೀ ಚಂದ್ರ
ಮೋಹವ ಬೀರುವೆ ನೀನಿಂದ್ರ
ರಸಿಕರ ಬಾಳಿಗೆ ನೀ ಕೇಂದ್ರ!

ಏರುವೆ ಮಿನುಗುವೆ ನೀನೆಲ್ಲಿ?
ಮುಗಿಲೊಳು ತೇಲುವೆ ಪೋಪೆಲ್ಲಿ?
ನಾಚುಗೆಯೇ ಹೇಳು ನಿನಗಲ್ಲಿ?

ರಾಮನು ಅತ್ತದು ನಿನಗಾಗೊ?
ಹನುಮನು ಹಾರಿದು ನಿನಗಾಗೊ?
ಗಣಪತಿ ಶಾಪವು ನಿನಗಾಗೊ?

ಈಶ್ವರ ಶಿರವನು ಮುಡಿಸಿರುವೆ
ನೀರಲಿ ಬಾನಲಿ ತೋರಿರುವೆ
ಪ್ರಣಯಿಯ ನೋಟದ ಮುಗುಳಿರುವೆ!

ಹುಣ್ಣಿಮೆ ದಿನವೇ ನಿನಚೆಲುವು
ಕಣ್ಣಿನ ಭಾಗ್ಯವೆ ಆ ಬರವು
ಸ್ವಪ್ನದ ಸುಖವೇ ನಿನ್ನೊಲವು!

ಪೋಗದಿರೆನ್ನೀ ಚಂದಿರನೆ
ತೆಂಗದಿರೆನ್ನೇ ಸುಖವೀಣೇ
ಭುವಿಯನು ಬೆಳಗೊ ಮಮಪ್ರಾಣೇ!
*****

ಪುಸ್ತಕ: ಸೂರ್ಯ ಕಾಂತಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೬
Next post ಒಮ್ಮೆ ಹಾಡಿದ ಹಾಡು

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…